ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಚಾಮರಾಜೇಶ್ವರ ರಥಕ್ಕೆ ಬೆಂಕಿ, ಫೆ.20ರಂದು ಚಾಮರಾಜನಗರ ಬಂದ್

ಚಾಮರಾಜನಗರದ ಚಾಮರಾಜೇಶ್ವರ ದೇವಸ್ಥಾನದ ರಥಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದಾರೆ. ಇದರಿಂದ ಫೆಬ್ರವರಿ 20ರಂದು ಚಾಮರಾಜನಗರ ಬಂದ್ ಗೆ ಕರೆ ನೀಡಲಾಗಿದೆ.

By ಚಾಮರಾಜನಗರ ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಫೆಬ್ರವರಿ. 19 : ಚಾಮರಾಜನಗರದ ಐತಿಹಾಸಿಕ ಚಾಮರಾಜೇಶ್ವರ ದೇವಾಲಯದ ಮುಂಭಾಗದಲ್ಲಿ ನಿಲ್ಲಿಸಿದ್ದ ಚಾಮರಾಜೇಶ್ವರ ಬ್ರಹ್ಮರಥಕ್ಕೆ ಕಿಡಿಗೇಡಿಗಳು ಬೆಂಕಿ ಹಚ್ಚಿರುವ ಘಟನೆ ಶನಿವಾರ ಮಧ್ಯರಾತ್ರಿ ನಡೆದಿದೆ.

ಎರಡು ವರ್ಷಗಳ ಹಿಂದೆ ಇದೇ ರಥಕ್ಕೆ ದುಷ್ಕರ್ಮಿಗಳು ಬೆಂಕಿ ಹಚ್ಚಿದ್ದರು. ಮತ್ತೆ ಶನಿವಾರ ಮಧ್ಯರಾತ್ರಿ 1.30ರ ಸಮಯದಲ್ಲಿ ಕಿಡಿಗೇಡಿಗಳು ರಥಕ್ಕೆ ಬೆಂಕಿ ಹಾಕಿದ್ದಾರೆ.

Miscreants set fire to a Chamarajanagar temple chariot, Chamarajanagar bandh on february 20

ಇದನ್ನು ಕಂಡ ಆಗ್ರಹಾರದ ಬೀದಿಯ ಸಾರ್ವಜನಿಕರು ಅಗ್ನಿಶಾಮಕ ದಳಕ್ಕೆ ದೂರವಾಣಿ ಕರೆ ಮಾಡಿದ್ದಾರೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳದವರು ಬೆಂಕಿ ನಂದಿಸಿದ್ದಾರೆ.

ಈ ರಥಕ್ಕೆ ದುಷ್ಕರ್ಮಿಗಳು ಅಗ್ನಿ ಸ್ಪರ್ಶ ಮಾಡಿರುವುದರಿಂದ ಧಾರ್ಮಿಕ ಭಾವನೆಗಳಿಗೆ ಧಕ್ಕೆ ಉಂಟಾಗಿದೆ. ಇದರಿಂದ ಈ ಕೃತ್ಯ ಎಸಗಿದ ಆರೋಪಿಗಳನ್ನು ಬಂಧಿಸುವಂತೆ ಆಗ್ರಹಿಸಿ ಫೆಬ್ರವರಿ 20ರಂದು ಚಾಮರಾಜನಗರ ಬಂದ್ ಗೆ ಕರೆ ನೀಡಲಾಗಿದೆ.

2.10 ಕೊಟಿ ರೂ ವೆಚ್ಚದಲ್ಲಿ ದೇವಸ್ಥಾನದ ಜೀರ್ಣೋದ್ಧಾರದ ಕೆಲಸ ನಡೆಯುತ್ತಿದ್ದು, ಈ ಘಟನೆ ನಡೆದಿರುವುದು ಸಾರ್ವಜನಿಕರಲ್ಲಿ ಅತಂಕ ಮೂಡಿಸಿದೆ.

English summary
Miscreants set fire to a Chamarajanagar temple Ratha Chamarajanagar on Saturday late night. The Chamarajanagar bandh on February 20 called by the Chamarajanagar temple administration.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X