ಪಿ.ಯು. ಪ್ರಶ್ನೆಪತ್ರಿಕೆ ಸೋರಿಕೆ: ಸರ್ಕಾರಕ್ಕೆ ಸವಾಲೇ, ಕಂಠಕಪ್ರಾಯವೇ?
ಚಾಮರಾಜನಗರ: ಕಳೆದ ವರ್ಷ ಪಿ.ಯು. ಪ್ರಶ್ನೆಪತ್ರಿಕೆ ಸೋರಿಕೆ ಮೇಲೆ ಸೋರಿಕೆಯಾಗಿ ವಿದ್ಯಾರ್ಥಿಗಳು ಹಾಗೂ ಪೋಷಕರು ಹೈರಾಣಾಗಿದ್ದು ವಿದ್ಯಾಭ್ಯಾಸವೇ ಬೇಡ ಎಂದುಕೊಂಡವರೆಷ್ಟೋ! ಕೊನೆಗೂ ಸರ್ಕಾರ ಪ್ರಮುಖ ಆರೋಪಿಗಳನ್ನು ಪತ್ತೆ ಹಚ್ಚಿಸುವಲ್ಲಿ ನಿಯೋಜಿಸಿದ ತಂಡ ಯಶಸ್ವಿಯಾಯಿತು.
ಕಳೆದ ಸಾಲಿನಲ್ಲಿ ಪಿ.ಯು. ಪ್ರಶ್ನೆಪತ್ರಿಕೆ ಸೋರಿಕೆಯಿಂದ ರೊಚ್ಚಿಗೆದ್ದ ಪೋಷಕರು ವಿದ್ಯಾರ್ಥಿಗಳು ಪಿ.ಯು ಮಂಡಳಿ ಘೇರಾವ್ ಹಾಕಿ ಪ್ರತಿಭಟಿಸಿದ್ದರು. ಪರೀಕ್ಷೆಯನ್ನೇ ಬರೆಯುವುದಿಲ್ಲ, ಕೃಪಾಂಕ ನೀಡಿ ಉತ್ತೀರ್ಣ ಮಾಡಿ ಎಂದೂ, ಪಿ.ಯು ಆಡಳಿತ ಮಂಡಳಿ ನಿರ್ದೇಶಕರು ರಾಜೀನಾಮೆ ನೀಡಿ ಸಂಪೂರ್ಣ ಜವಾಬ್ದಾರಿ ಹೊರತಕ್ಕದು ಎಂದು ಎಚ್ಚರಿಕೆ ನೀಡಿದ್ದರು.[ಮೌಲ್ಯಮಾಪನ ಬಹಿಷ್ಕರಿಸುವ ಉಪನ್ಯಾಸಕರಿಗೆ ಜೈಲು ಶಿಕ್ಷೆ!]

ಕೊನೆಗೂ ಎಚ್ಚೆತ್ತ ಸರ್ಕಾರ ಮಾಡದ ತಪ್ಪಿಗೆ ಪಿ.ಯು ಆಡಳಿತ ಮಂಡಳಿಯ ಕೆಲವರನ್ನು ವರ್ಗಾವಣೆ ಮಾಡಿ ಶಿಕ್ಷೆ ವಿಧಿಸಿದರೆ ಇನ್ನು ಕೆಲವರನ್ನು ರಾಜಕೀಯ ಲಾಭಿಯಿಂದ ರಕ್ಷಿಸಿತ್ತು. ಸರ್ಕಾರ ಪ್ರಮುಖವಾಗಿ ರಚಿಸಿದ್ದ ನಾಲ್ಕು ತಂಡ ಆರೋಪಿಗಳ ಪತ್ತೆಗಾಗಿ ತುಮಕೂರು, ಹಾನಗಲ್,ಮಂಗಳೂರು, ಧಾರವಾಡ, ವಿವಿಧೆಡೆ ಶೋಧ ಕಾರ್ಯನಡೆಸಿತ್ತು. ಅವರ ಗಾಳಕ್ಕೆ ಮೀನು ಸಿಕ್ಕಿದಂತೆ ಆರೋಪಿಗಳು ಒಬ್ಬರಾಗಿ ಸಿಕ್ಕಿಹಾಕಿಕೊಂಡರು.
ಈಗಾಗಲೇ ಪ್ರಕರಣಕ್ಕೆ ಸಂಬಂಧಿಸಿದಂತೆ ಕೆಲವರು ಜಾಮೀನಿನ ಮೇಲೆ ಹೊರಬಂದರೆ ಇನ್ನು ಕೆಲವರು ನ್ಯಾಯಾಂಗ ಬಂಧನದಲ್ಲಿದ್ದಾರೆ. ರಾಜ್ಯದಲ್ಲಿನ ಖಜಾನೆಗಳೇ ಸುರಕ್ಷಿತವಾಗಿಲ್ಲದಿರುವುದು ಸೋರಿಕೆಗೆ ಪ್ರಮುಖ ಕಾರಣವಾಯಿತು. ಟ್ಯುಟೋರಿಯಲ್ ಮಾಫಿಯಾಗಳು ಹೆಚ್ಚು ಫಲಿತಾಂಶ ತರಲು ಇದನ್ನೇ ಅಡ್ಡದಾರಿಯನ್ನಾಗಿ ಬಳಸಿಕೊಂಡವು.
ಆರೋಪಿಗಳನ್ನು ಬಂಧಿಸಿದ ಮೇಲೂ ಈ ವರ್ಷ ಪ್ರಶ್ನೆ ಪತ್ರಿಕೆ ಸೋರಿಕೆಯಾದರೆ ಆರೋಪಿಗಳೆಲ್ಲರೂ ಸೆರೆಸಿಕ್ಕಿಲ್ಲವೆಂದಾಗುತ್ತದೆ. ಮತ್ತೆ ಹೆಚ್ಚಿನ ತನಿಖೆ ನಡೆಸಬೇಕಾಗುತ್ತದೆ. ಜೈಲಿನಲ್ಲೇ ಇದ್ದುಕೊಂಡು ಪ್ರಶ್ನೆಪತ್ರಿಕೆ ಸೋರಿಕೆ ಮಾಡುವಂತಹ ಚಾಣಕ್ಷನಾಗಿರುವ ಶಿವಕುಮಾರ್ ಹಾಲಿ ನ್ಯಾಯಾಂಗ ಬಂಧನದಲ್ಲಿದ್ದಾರೆ. ಆದರೂ ಅವರ ಶಿಷ್ಯರು ಈ ಕೆಲಸ ಮಾಡಬಾರದೆಂದೇನಿಲ್ಲ.
ವಿದ್ಯಾರ್ಥಿಗಳ ಹಿತ ದೃಷ್ಟಿಯಿಂದ ಸರ್ಕಾರ ಈಗಲೇ ಹೆಚ್ಚಿನ ಮುಂಜಾಗ್ರತಾಕ್ರಮ ಕೈಗೊಳ್ಳುವ ಅಗತ್ಯವಿದೆ.
-
ಮಾರ್ಚ್ 5ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಅನಧಿಕೃತವಾಗಿ ಪ್ರವೇಶಿಸಿದರೆ ಗುಂಡು ಹಾರಿಸಲಾಗುವುದು: ಸಾಮಾಜಿಕ ಮಾಧ್ಯಮದಲ್ಲಿ ಚರ್ಚೆ ಹುಟ್ಟುಹಾಕಿದ ವಾಯುಪಡೆಯ ಸೂಚನಾ ಫಲಕ -
Tamarind Cultivation: ಹೊಸಪೇಟೆ ಹುಣಸೆ ಘಟಕಕ್ಕೆ ವಿಶ್ವಬ್ಯಾಂಕ್ ಉನ್ನತ ಮಟ್ಟದ ತಂಡ ಭೇಟಿ, ರೈತರಿಗೆ ಗುಡ್ನ್ಯೂಸ್ ನಿರೀಕ್ಷೆ -
Saaniya Chandok: ಕ್ರಿಕೆಟ್ ದೇವರು ಸಚಿನ್ ತೆಂಡ್ಯೂಲ್ಕರ್ ಕುಟುಂಬಕ್ಕೆ ಸೊಸೆಯಾಗಿ ಬಂದ ಸಾನಿಯಾ ಚಾಂದೋಕ್ ಯಾರು? -
Abhishek Sharma: 'ಅಭಿಷೇಕ್ ಶರ್ಮಾ ಒಬ್ಬ ಬ್ಲೈಂಡ್ ಸ್ಲಾಗರ್': ರೊಚ್ಚಿಗೆದ್ದ ಅಭಿಮಾನಿಗಳು -
Horoscope March 5: ಇಂದಿನ ದ್ವಾದಶ ರಾಶಿಗಳ ಫಲಾಫಲ ಇಲ್ಲಿದೆ, ಯಾರಿಗೆ ಶುಭ-ಯಾರಿಗೆ ಅಶುಭ -
Jacob Bethell: ಟೀಂ ಇಂಡಿಯಾ ವಿರುದ್ಧ ಸೋತರೂ ಕನ್ನಡಿಗರ ಮನಗೆದ್ದ 22 ವರ್ಷದ ಜೇಕಬ್ ಬೆಥೆಲ್ -
ಬೆಂಗಳೂರಿನಲ್ಲಿ 2ನೇ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ: ಬಜೆಟ್ನಲ್ಲಿ ಹೊಸ ಸುದ್ದಿ ಕೊಟ್ಟ ಸಿಎಂ ಸಿದ್ದರಾಮಯ್ಯ -
ಕರ್ನಾಟಕ ಬಜೆಟ್ 2026: ನಮ್ಮ ಮೆಟ್ರೋ 41 ಕಿ.ಮೀ ಹೆಚ್ಚುವರಿ ಮಾರ್ಗ ಶೀಘ್ರವಾಗಿ ಪೂರ್ಣ -
Bengaluru Viral Tweet: ಹೋಳಿ ಹಬ್ಬ: ಬೆಂಗಳೂರು ಬೋರಿಂಗ್ ಎಂದ ನಾರ್ಥಿ ಯುವತಿ ಟ್ವೀಟ್ ವೈರಲ್: ಕನ್ನಡಿಗರು ಹೇಳಿದ್ದೇನು -
Gold Rate Today: ಕರ್ನಾಟಕದ ಬೆಂಗಳೂರಿನಲ್ಲಿ ಬಂಗಾರ ದರ ಇಳಿಕೆ: ಇಲ್ಲಿದೆ ಮಾರ್ಚ್ 6ರ ದರಪಟ್ಟಿ -
Karnataka Budget 2026 PDF: ಕರ್ನಾಟಕ ಬಜೆಟ್ 2026-27 ಪಿಡಿಎಫ್ ಡಾಕ್ಯುಮೆಂಟ್ ಇಲ್ಲಿ ಡೌನ್ಲೋಡ್ ಮಾಡಿ












Click it and Unblock the Notifications