ಚಾಮರಾಜನಗರ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಪ್ರಾಮಾಣಿಕತೆ ಮೆರೆದ ಹೆಪ್ಸಿಬಾ ರಾಣಿ ಎತ್ತಂಗಡಿ

By ಮೈಸೂರು ಪ್ರತಿನಿಧಿ
|
Google Oneindia Kannada News

ಚಾಮರಾಜನಗರ, ಫೆಬ್ರವರಿ 11: ಶಿಸ್ತು ಹಾಗೂ ಪ್ರಾಮಾಣಿಕತೆಯಿಂದ ಕೆಲಸ ಮಾಡಲು ಮುಂದಾದ ಮಹಿಳಾ ಐಎಎಸ್ ಅಧಿಕಾರಿ ಹೆಪ್ಸಿಬಾ ರಾಣಿ ಅವರನ್ನು ಒಂಬತ್ತು ತಿಂಗಳಲ್ಲೇ ವರ್ಗಾವಣೆ ಮಾಡಲಾಗಿದೆ.

ಚಾಮರಾಜನಗರ ಜಿಲ್ಲಾ ಪಂಚಾಯತ್ ಸಿಇಓ ಆಗಿ ಅಧಿಕಾರ ಸ್ವೀಕರಿಸಿದ್ದ ಹೆಪ್ಸಿಬಾ ರಾಣಿ ಕೊರ್ಲಾಪಟಿ ಅವರನ್ನು 9 ತಿಂಗಳಲ್ಲೇ ಐಟಿ ಮತ್ತು ಬಿಟಿ ಇಲಾಖೆಯ ನಿರ್ದೇಶಕರನ್ನಾಗಿಸಿ ಆದೇಶ ಹೊರಡಿಸಿ ವರ್ಗಾವಣೆ ಮಾಡಲಾಗಿದೆ.[ಕೂಡ್ಲಗಿ ಡಿವೈಎಸ್‌ಪಿ ಅನುಪಮಾ ಶೆಣೈ ದಿಢೀರ್ ರಾಜೀನಾಮೆ]

ಹೆಪ್ಸಿಬಾ ಅವರು ನರೇಗಾ ಕೆಲಸದ ಬಿಲ್ ಗಳನ್ನು ಕ್ಲಿಯರ್ ಮಾಡಲು ನಿರಾಕರಿಸಿದ್ದರಿಂದ ಅವರನ್ನು ಎತ್ತಂಗಡಿ ಮಾಡಲಾಗಿದೆ. ಯೋಜನೆಯ ನಿಗದಿತ ಮಟ್ಟದಲ್ಲಿ ಕೆಲಸಗಳನ್ನು ಪೂರೈಸಿರಲಿಲ್ಲ, ಜೊತೆಗೆ ಕೂಲಿ ಕೆಲಸಗಾರರ ಬದಲು ಯಂತ್ರಗಳನ್ನು ಉಪಯೋಗಿಸಿ ಕೆಲಸ ಮಾಡಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ಅವರು ನರೇಗಾ ಯೋಜನೆಯ ಬಿಲ್ ಗಳನ್ನು ಕ್ಲಿಯರ್ ಮಾಡಲು ನಿರಾಕರಿಸಿದ್ದರು ಎಂದು ಮೂಲಗಳು ತಿಳಿಸಿವೆ.

The transfer of an honest woman IAS Officer of chamrajnagar

ಜಿಲ್ಲಾ ಪಂಚಾಯತ್ ಸಭೆಗಳಿಗೆ ಮಹಿಳಾ ಸದಸ್ಯರ ಬದಲು ಅವರ ಪತಿಯರು ಹಾಜರಾಗುತ್ತಿದ್ದರು. ಇದಕ್ಕೆ ಸಿಇಓ ವಿರೋಧಿಸಿದ್ದಲ್ಲದೇ ಸದಸ್ಯರೇ ಸಭೆಗೆ ಹಾಜರಾಗಬೇಕೆಂದು ಆದೇಶಿಸಿದ್ದರು, ಇದಕ್ಕೆ ಮಹಿಳಾ ಸದಸ್ಯರು ಬಹಿರಂಗವಾಗಿ ಅಸಮಾಧಾನ ವ್ಯಕ್ತ ಪಡಿಸಿದ್ದರು.

ಗುತ್ತಿಗೆದಾರರು ಹಾಗೂ ರಾಜಕಾರಣಿಗಳು ಪ್ರಾಮಾಣಿಕ ಅಧಿಕಾರಿಯ ಕೈಕೆಳಗೆ ಕೆಲಸ ಮಾಡಲು ಒಪ್ಪದೇ, ತಮ್ಮ ಪ್ರಭಾವ ಬಳಸಿ ಐಎಎಸ್ ಅಧಿಕಾರಿಣಿಯನ್ನು ವರ್ಗಾವಣೆ ಮಾಡಿಸಿದ್ದಾರೆ, ಇನ್ನು ಜನ ಪ್ರತಿನಿಧಿಗಳನ್ನು ತಮ್ಮ ವಿಶ್ವಾಸಕ್ಕೆ ತೆಗೆದುಕೊಳ್ಳದೇ ಇರುವುದೇ ಹಪ್ಸಿಬಾ ಅವರ ಎತ್ತಂಗಡಿಗೆ ಕಾರಣ ಎಂದು ಹೇಳಲಾಗುತ್ತಿದೆ.[ಬಳ್ಳಾರಿಯಿಂದ ಭಟ್ಕಳಕ್ಕೆ ಹೊರಟ ಅನುಪಮಾ ಶೆಣೈ]

ಹಪ್ಸಿಬಾ ಅವರ ವರ್ಗಾವಣೆಯಿಂದ ಚಾಮರಾಜನಗರ ಜಲ್ಲೆಯ ಜನತೆಗೆ ಬೇಸರ ವ್ಯಕ್ತಪಡಿಸಿದ್ದು, ಗ್ರಾಮಗಳಲ್ಲಿ ಶೌಚಾಲಯ ನಿರ್ಮಿಸುವುದು ಹಾಗೂ ಎಸ್ ಎಸ್ ಎಲ್ ಸಿ ಫಲಿತಾಂಶದಲ್ಲಿ ಸುಧಾರಣೆ ತರುವುದು ಅವರ ಮುಖ್ಯ ಉದ್ದೇಶವಾಗಿತ್ತು ಎಂದು ಆಶಾ ಕಾರ್ಯಕರ್ತೆ ಲಕ್ಷ್ಮಿ ಹೇಳುತ್ತಾರೆ, ಇನ್ನು ಎರಡು ತಿಂಗಳಲ್ಲಿ 10 ಸಾವಿರ ಶೌಚಾಲಯ ನಿರ್ಮಿಸಲು ಪಣ ತೊಟ್ಟಿದ್ದರು ಎಂದು ಗ್ರಾಮಸ್ಥರು ಹಪ್ಸಿಬಾ ಅವರ ಕಾರ್ಯಗಳ ಬಗ್ಗೆ ಶ್ಲಾಘಿಸಿದ್ದಾರೆ.

English summary
The transfer of an honest woman IAS Officer Hepsika Rani of Chamarajanagar
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X