ಬಟ್ಟೆ ವ್ಯಾಪಾರಿಯ ಮನೆಯಲ್ಲಿ 45 ಕೋಟಿ ಹಳೆ ನೋಟು ಪತ್ತೆ
ರಾಮಲಿಂಗಂ ಅಂಡ್ ಕೋ ಸಂಸ್ಥೆಯ ಮಾಲೀಕರಾಗಿರುವ ದಂಡಪಾಣಿ ಇತ್ತೀಚೆಗೆ ಪೊಲೀಸ್ ಇಲಾಖೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ಸಮವಸ್ತ್ರಗಳನ್ನು ವಿತರಿಸಿದ್ದರು. ಇದರಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ದೂರಿನ ಮೇಲೆ ಪೊಲೀಸರು ದಾಳಿ ನಡೆಸಿದ್ದರು.
ಚೆನ್ನೈ, ಮೇ 18: ಚೆನ್ನೈ ಪೊಲೀಸರು ಇಲ್ಲಿನ ಬಟ್ಟೆ ವ್ಯಾಪಾರಿಯೊಬ್ಬರ ಮನೆ ಕಂ ಅಂಗಡಿಯಿಂದ 45 ಕೋಟಿ ಹಳೆ ನೋಟುಗಳನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
ದಂಡಪಾಣಿ ಎಂಬವರ ಬಟ್ಟೆ ಉದ್ಯಮಿಯಾಗಿದ್ದು ವಕೀಲರೂ ಆಗಿದ್ದಾರೆ. ಕೊಡಂಬಕ್ಕಂನ ಸೆಕೆಂಡ್ ಸ್ಟ್ರೀಟ್ ನ ಝಕಾರಿಯಾ ಕಾಲೊನಿಯಲ್ಲಿ ಇವರ ಮನೆ ಇದೆ. ಇದರ ಮೇಲೆ ಚೆನ್ನೈ ಪೊಲೀಸರು ದಾಳಿ ನಡೆಸಿದಾಗ ಈ ನಿಷೇಧಿಸಲ್ಪಟ್ಟ ಹಳೆಯ 500 ಮತ್ತು 1,000 ಮುಖಬೆಲೆಯ ನೋಟುಗಳು ಸಿಕ್ಕಿವೆ.

ಪೊಲೀಸರು ದಾಳಿ ನಡೆಸಿದಾಗ ದಂಡಪಾಣಿಯವರ ಅಂಗಡಿ ಕಂ ಮನೆಯಲ್ಲಿ ಬರೋಬ್ಬರಿ 45 ಕೋಟಿ ಹಣ ಪತ್ತೆಯಾಗಿದೆ. ಇವುಗಳನ್ನು ರಟ್ಟಿನ ಬಾಕ್ಸುಗಳಲ್ಲಿ ಜೋಡಿಸಿಡಲಾಗಿತ್ತು.
ಇವರು ಶಾಲೆಗಳಿಗೆ, ಪೊಲೀಸರಿಗೆ ಹಾಗೂ ಮಿಲಿಟರಿಯವರಿಗೆ ಸಮವಸ್ತ್ರಗಳನ್ನು ಪೂರೈಕೆ ಮಾಡುತ್ತಿದ್ದರು. ರಾಮಲಿಂಗಂ ಅಂಡ್ ಕೋ ಸಂಸ್ಥೆಯ ಮಾಲೀಕರಾಗಿರುವ ದಂಡಪಾಣಿ ಇತ್ತೀಚೆಗೆ ಪೊಲೀಸ್ ಇಲಾಖೆಗೆ ಲಕ್ಷಾಂತರ ರೂಪಾಯಿ ಮೌಲ್ಯದ ಸಮವಸ್ತ್ರಗಳನ್ನು ವಿತರಿಸಿದ್ದರು. ಇದರಲ್ಲಿ ಭಾರೀ ಅವ್ಯವಹಾರ ನಡೆದಿದೆ ಎಂಬ ಆರೋಪದ ಮೇಲೆ ಪೊಲೀಸರು ಇಂದು ಮುಂಜಾನೆ ಅವರ ಮನೆ ಕಂ ಅಂಗಡಿ ಮೇಲೆ ದಾಳಿ ನಡೆಸಿದ್ದಾರೆ. ಈ ವೇಳೆ ಈ ಭಾರಿ ಮೊತ್ತದ ಹಣ ಪತ್ತೆಯಾಗಿದೆ.
Chennai: Demonetized notes worth 45 cr recovered from textile shop in Kodambakkam,owner claims it belonged to a jeweler & was to be changed pic.twitter.com/ptG3RphcWl
— ANI (@ANI_news) May 18, 2017
ಕೊಡಂಬಕ್ಕಂ ಪೊಲೀಸ್ ಠಾಣೆಗೆ ದಂಡಪಾಣಿಯವರನ್ನು ಪೊಲೀಸರು ಕರೆ ತಂದು ವಿಚಾರಣೆ ನಡೆಸಿದ್ದಾರೆ. ಈ ವೇಳೆ ಇದು ನನಗೆ ಸೇರಿದ ಹಣವಲ್ಲ. ನನ್ನಲ್ಲಿ ಭದ್ರವಾಗಿ ಇರುತ್ತದೆ ಎಂಬ ಕಾರಣಕ್ಕೆ ನನ್ನ ಅಂಗಡಿಯಲ್ಲಿ ಇಡಲಾಗಿತ್ತು. ಇದು ಬೇರೊಬ್ಬರ ಹಣ ಎಂದು ದಂಡಪಾಣಿ ಹೇಳಿದ್ದಾರೆ.
ಈ ಪ್ರಕರಣದ ಬಗ್ಗೆ ಜಾರಿ ನಿರ್ದೇಶನಾಲಯ ಮತ್ತು ಆದಾಯ ತೆರಿಗೆ ಇಲಾಖೆ ಅಧಿಕಾರಿಗಳಿಗೆ ಪೊಲೀಸರು ಮಾಹಿತಿ ನೀಡಿದ್ದು ತನಿಖೆ ಚುರುಕುಗೊಳಿಸಿದ್ದಾರೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications