ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚೆನ್ನೈ ಐಟಿ ದಾಳಿ: ಶೇಖರ್ ರೆಡ್ಡಿ ಸೇರಿದಂತೆ 3 ಜನ ಬಂಧನ

ಮನಿ ಲಾಂಡ್ರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಟಿಡಿ ಮಾಜಿ ಬೋರ್ಡ್ ಸದಸ್ಯ ಜೆ ಶೇಖರ್ ರೆಡ್ಡಿ ಸೇರಿದಂತೆ ಮೂವರನ್ನು ಸಿಬಿಐ ತಂಡ ಬುಧವಾರ ಬಂಧಿಸಿದೆ.

By Mahesh
|
Google Oneindia Kannada News

ಚೆನ್ನೈ, ಡಿಸೆಂಬರ್ 21: ಮನಿ ಲಾಂಡ್ರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಟಿಟಿಡಿ ಮಾಜಿ ಬೋರ್ಡ್ ಸದಸ್ಯ ಜೆ ಶೇಖರ್ ರೆಡ್ಡಿ ಸೇರಿದಂತೆ ಮೂವರನ್ನು ಸಿಬಿಐ ತಂಡ ಬುಧವಾರ ಬಂಧಿಸಿದೆ.

ಶೇಖರ್ ರೆಡ್ಡಿ, ಶ್ರೀನಿವಾಸ್ ರೆಡ್ಡಿ ಹಾಗೂ ಪ್ರೇಮ್ ಅವರನ್ನು ವಿಶೇಷ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗಿದ್ದು, ಜನವರಿ 03ರ ತನಕ ನ್ಯಾಯಾಂಗ ಬಂಧನ ವಿಧಿಸಲಾಗಿದೆ. [ಮುಖ್ಯ ಕಾರ್ಯದರ್ಶಿ ಸಂಬಂಧಿಕರ ಮನೇಲಿ ಸಿಕ್ತು ಕೆಜಿಗಟ್ಟಲೆ ಚಿನ್ನ]

Chennai IT raids: CBI arrests Sekhar Reddy, others

ಆದಾಯ ತೆರಿಗೆ ಅಧಿಕಾರಿಗಳು ಚೆನ್ನೈನ ಸಚಿವಾಲಯದ ಮೇಲೆ ದಾಳಿ ನಡೆಸಿದ ಬಳಿಕ ಅದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರ ಮನೆ, ಕಚೇರಿ ಮೇಲೆ ದಾಳಿ ನಡೆಸಿ 170 ಕೋಟಿ ರು ನಗದು ಹಾಗೂ 130 ಕೆಜಿ ಚಿನ್ನ ಹಾಗೂ ಆಭರಣವನ್ನು ಜಪ್ತಿ ಮಾಡಿದ್ದರು. ಚೆನ್ನೈ ನ ಎಂಟು ಕಡೆಗಳಲ್ಲಿ, ವೆಲ್ಲೂರು ಹಾಗೂ ಮುಂತಾದೆಡೆಗಳಲ್ಲಿ ದಾಳಿ ನಡೆಸಲಾಗಿತ್ತು.

Chennai IT raids: CBI arrests Sekhar Reddy, others

ಭ್ರಷ್ಟಾಚಾರ ನಿಯಂತ್ರಣ ಕಾಯ್ದೆ 1988, ಮನಿ ಲಾಂಡ್ರಿಂಗ್ ನಿಯಂತ್ರಣ ಕಾಯ್ದೆ (PMLA) ಉಲ್ಲಂಘನೆ ಆರೋಪದ ಮೇಲೆ ಸಿಬಿಐ ಈ ಮೂವರ ಮೇಲೆ ಎಫ್ ಐಆರ್ ದಾಖಲಿಸಿದೆ. ಜಾರಿ ನಿರ್ದೇಶನಾಲಯ ಕೂಡಾ ಐಪಿಸಿ ಸೆಕ್ಷನ್ 120 ಬಿ, 409, 420 ಅನ್ವಯ ಪ್ರಕರಣ ದಾಖಲಿಸಿಕೊಂಡಿದೆ.

English summary
The Central Bureau of Investigation on Wednesday arrested three businessmen for illegal monetary transactions. Sekhar Reddy, Srinivas Reddy and Prem were produced before a special CBI court in Chennai that sent them to judicial custody till January 3.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X