ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಉಸಿರಾಟದ ತೊಂದರೆ, ಡಿಎಂಕೆ ಮುಖ್ಯಸ್ಥ ಕರುಣಾನಿಧಿ ಆಸ್ಪತ್ರೆಗೆ

By ವಿಕಾಸ್ ನಂಜಪ್ಪ
|
Google Oneindia Kannada News

ಚೆನ್ನೈ, ಆಗಸ್ಟ್ 16: ಅನಾರೋಗ್ಯದ ಕಾರಣಕ್ಕೆ ಡಿಎಂಕೆ ಮುಖ್ಯಸ್ಥ ಎಂ.ಕರುಣಾನಿಧಿ ಇಲ್ಲಿನ ಆಸ್ಪತ್ರೆಗೆ ದಾಖಲಾಗಿದ್ದಾರೆ. ಉಸಿರಾಟದ ತೊಂದರೆಯಿಂದ ಅವರು ಕಾವೇರಿ ಆಸ್ಪತ್ರೆಗೆ ಸೇರಿದ್ದಾರೆ.

ವರದಿಗಳ ಪ್ರಕಾರ, ಕೃತಕ ಆಹಾರ ಪೂರೈಕೆ ಪೈಪ್ ಬದಲಾವಣೆಗಾಗಿ ಕರುಣಾನಿಧಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಒಂದು ಗಂಟೆಯೊಳಗಾಗಿ ಅವರು ಮನೆಗೆ ಹಿಂತಿರುಗುತ್ತಾರೆ.

ಡಿಎಂಕೆ ಮುಖವಾಣಿಗೆ 75: ವೇದಿಕೆಯಲ್ಲಿ ಕಮಲ್, ಪ್ರೇಕ್ಷಕರ ನಡುವೆ ರಜನಿಡಿಎಂಕೆ ಮುಖವಾಣಿಗೆ 75: ವೇದಿಕೆಯಲ್ಲಿ ಕಮಲ್, ಪ್ರೇಕ್ಷಕರ ನಡುವೆ ರಜನಿ

ಕಳೆದ ವರ್ಷ ಡಿಸೆಂಬರ್ ಹದಿನೈದರಂದು ಅನಾರೋಗ್ಯದ ಕಾರಣಕ್ಕೆ ಆಸ್ಪತ್ರೆಗೆ ದಾಖಲಾಗಿದ್ದರು. ಆಳ್ವಾರ್ ಪೇಟ್ ನಲ್ಲಿರುವ ಕಾವೇರಿ ಆಸ್ಪತ್ರೆಗೆ ಮತ್ತೆ ಸೇರಿದ್ದಾರೆ. ಉಸಿರಾಟದ ತೊಂದರೆ, ಗಂಟಲು ಹಾಗೂ ಶ್ವಾಸಕೋಶದ ಸೋಂಕಿನ ಕಾರಣಕ್ಕೆ ಅವರು ಆಸ್ಪತ್ರೆಗೆ ದಾಖಲಾಗಿದ್ದರು.

DMK chief Karunanidhi admitted to hospital

ಇನ್ನು ಕಳೆದ ವರ್ಷ ಡಿಸೆಂಬರ್ ಒಂದರಂದು ಅತಿಸಾರದಿಂದ ಬಳಲುತ್ತಿದ್ದ ಅವರು ಡಿಸೆಂಬರ್ ಏಳರ ರಾತ್ರಿ ಡಿಸ್ ಚಾರ್ಜ್ ಆಗಿದ್ದರು. ಕೆಲವು ದಿನಗಳ ಕಾಲ ಮನೆಯಲ್ಲೇ ವಿಶ್ರಾಂತಿ ಪಡೆಯುವಂತೆ ಕರುಣಾನಿಧಿ ಅವರಿಗೆ ಸೂಚಿಸಲಾಗಿತ್ತು.

English summary
Karunanidhi has been admitted to hospital after he complained of uneasiness. He has been admitted to the Kaveri hospital due to uneasiness in breathing. There has been no official bulletin as yet as doctors continue to monitor the DMK chief.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X