ಮಂಗಳಯಾನ ನಂತರ ಇಸ್ರೋದಿಂದ ಮತ್ತೊಂದು ಮೈಲಿಗಲ್ಲು
ಚೆನ್ನೈ, ಮಾ.29: ಮಂಗಳಯಾನದ ಯಶಸ್ಸಿನ ನಂತರ ಭಾರತೀಯ ಬಾಹ್ಯಾಕಾಶ ಸಂಶೋಧನಾ ಕೇಂದ್ರ(ಇಸ್ರೋ) ಮತ್ತೊಂದು ಮೈಲಿಗಲ್ಲು ದಾಟಿದೆ. ಅಮೆರಿಕದ ಜಿಪಿಎಸ್ ಗೆ ಸೆಡ್ಡು ಹೊಡೆಯಬಲ್ಲ ದೇಶಿ ತಂತ್ರಜ್ಞಾನದ ದಿಕ್ಸೂಚಿ ಉಪಗ್ರಹವನ್ನು ಸುರಕ್ಷಿತವಾಗಿ ಕಕ್ಷೆಗೆ ಸೇರಿಸಲಾಗಿದೆ.
ಅಮೆರಿಕದ ಜಿಪಿಎಸ್ ಜೊತೆಗೆ ಭಾರತದ ಐಆರ್ ಎನ್ ಎಸ್ಎಸ್ 1-ಡಿ ಹೋಲಿಕೆ ಮಾಡಿ ಪ್ರಶ್ನೆ ಕೇಳಿದಾಗ ಇಸ್ರೋ ಅಧ್ಯಕ್ಷ ಕನ್ನಡಿಗ ಕೆಎಸ್ ಕಿರಣ್ ಕುಮಾರ್ ಅವರು ಉತ್ತರಿಸಿದ್ದು ಹೀಗೆ: The globe comes later, the country comes first. [ಜಿಪಿಎಸ್ ತಂತ್ರಜ್ಞಾನದಲ್ಲಿ ಭಾರತ ಆಗಲಿದೆ ಸಾರ್ವಭೌಮ]
ಐಆರ್ ಎನ್ ಎಸ್ಎಸ್ 1-ಡಿ ಯನ್ನು ಪಿಎಸ್ ಎಲ್ ವಿ ಸಿ -27 ಮೂಲಕ ಕಕ್ಷೆಗೆ ತಲುಪಿಸುವ ಮೂಲಕ ದೇಶಿ ತಂತ್ರಜ್ಞರು ಹೆಮ್ಮೆಯಿಂದ ಸಂಭ್ರಮಪಟ್ಟಿದ್ದಾರೆ. ಅದರೆ, ಈ ದಿಕ್ಸೂಚಿ ಯೋಜನೆ ಪೂರ್ಣಗೊಳ್ಳಲು ಈ ಸರಣಿಯ ಇನ್ನೂ ಮೂರು ಉಪಗ್ರಹಗಳನ್ನು ಯಶಸ್ವಿಯಾಗಿ ಉಡಾಯಿಸಬೇಕಿದೆ.

ಸುಮಾರು 1,420 ಕೋಟಿ ರು ವೆಚ್ಚದ ಐಆರ್ ಎನ್ ಎಸ್ಎಸ್ ಯೋಜನೆ ಈ ವರ್ಷಾಂತ್ಯಕ್ಕೆ ಪೂರ್ಣಗೊಳಿಸಲಾಗುವುದು. ಶನಿವಾರ(ಮಾ.28, 2015) ಉಡಾವಣೆಗೂ ಮುನ್ನ ಜುಲೈ1, 2013, ಏ.4 2014 ಹಾಗೂ ಅ.16, 2014ರಂದು ಯಶಸ್ವಿಯಾಗಿ ಉಪಗ್ರಹಗಳು ಕಕ್ಷೆ ಸೇರಿವೆ.
Launch of satellite IRNSS-1D is yet another manifestation of the exemplary efforts & utmost brilliance of our scientists. Congrats to them.
— Narendra Modi (@narendramodi) March 28, 2015 ವೆಹಿಕಲ್ ಟ್ರಾಫಿಕಿಂಗ್, ನೌಕೆಗಳ ಪಥ ನಿರ್ವಹಣೆ, ಪ್ರಯಾಣಿಕರಿಗೆ ಮಾರ್ಗ ಸೂಚಿ, ಚಾಲಕರಿಗೆ ದಿಕ್ಸೂಚಿ, ಗಡಿ ಮತ್ತು ಸಾಗರ ದಿಕ್ಸೂಚಿ ಹೀಗೆ ಅಮೆರಿಕದ ಜಿಪಿಎಸ್ ತಂತ್ರಜ್ಞಾನ ನೀಡುವ ಎಲ್ಲಾ ಸೌಲಭ್ಯಗಳನ್ನು ನಮ್ಮ ಉಪಗ್ರಹದ ಮೂಲಕ ಪಡೆದುಕೊಳ್ಳಬಹುದು. ಈ ಮೂಲಕ ಅಮೆರಿಕದ ತಂತ್ರಜ್ಞಾನದ ಮೇಲೆ ಅವಲಂಬನೆ ತಪ್ಪಿಸಬಹುದು ಎಂದು ಇಸ್ರೋ ಪ್ರಕಟಿಸಿದೆ. ಇಸ್ರೋ ವಿಜ್ಞಾನಿಗಳ ಈ ಸಾಧನೆಗೆ ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವಾರು ಗಣ್ಯರು ಶುಭ ಹಾರೈಸಿದ್ದಾರೆ.
-
Bengaluru: ಬೆಳ್ಳಂಬೆಳಗ್ಗೆ ಬೆಂಗಳೂರಿನ ಸಮಸ್ಯೆಗಳು: ಬೇರೆ ಊರುಗಳಿಂದ ಬಂದ ಮೆಜೆಸ್ಟಿಕ್ನಲ್ಲಿ ಸಂಕಷ್ಟ, 7 ಪ್ರಮುಖ ಸಂಕಷ್ಟಗಳು -
Karnataka Weather: ಇಂದು ರಾಜ್ಯದ ಈ ಜಿಲ್ಲೆಗಳಲ್ಲಿ ಗುಡುಗು, ಬಿರುಗಾಳಿ ಸಹಿತ ಮಳೆಯಾಗುವ ಮುನ್ಸೂಚನೆ -
Jobs: ಕಂದಾಯ ಇಲಾಖೆಯಲ್ಲಿ 500 ಹೊಸ ಗ್ರಾಮ ಆಡಳಿತ ಅಧಿಕಾರಿ ಹುದ್ದೆಗಳಿಗೆ ಶೀಘ್ರದಲ್ಲೇ ನೇಮಕಾತಿ -
March 24 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
ಕೂಲಿಗೆ ಹೋಗಿದ್ದ ವಿದ್ಯಾರ್ಥಿನಿಯನ್ನು ದ್ರಾಕ್ಷಿ ತೋಟದಿಂದಲೇ ಕರೆತಂದು SSLC ಪರೀಕ್ಷೆ ಬರೆಸಿದ ಗದಗ ಬಿಇಒ -
Bengaluru Land: ಕಾಡುಗೋಡಿಯಲ್ಲಿ 78 ಜಾಗ ಹಿಂತಿರುಗಿಸುವಂತೆ ಎಂಬೆಸ್ಸಿಗೆ ಕೆಐಎಸಿಬಿ ಆದೇಶ -
Train Ticket: ರೈಲು ಟಿಕೆಟ್ ರದ್ದತಿ, ಮರುಪಾವತಿ ರೂಲ್ಸ್ ಬದಲಾವಣೆ: ಏಪ್ರಿಲ್ನಿಂದ ಹೊಸ ನಿಯಮ -
Mutton: ಕುಕ್ಕರ್ 20 ಬಾರಿ ಕೂಗಿದರೂ ಬೇಯದ ತಲೆ ಮಟನ್: ಪೊಲೀಸ್ ಠಾಣೆಗೆ ಪಾತ್ರೆ ಹಿಡಿದು ಬಂದು ರಾದ್ಧಾಂತ -
Viral Post: 'ಬೆಂಗಳೂರು ಟ್ರಾಫಿಕ್' ಕಿರಿಕಿರಿ ತಪ್ಪಿಸಲು ಆಫೀಸ್ನಿಂದ ಮನೆಗೆ ನಡೆದುಕೊಂಡು ಹೋಗುತ್ತಿರುವ ಮಹಿಳೆ -
Gas: ಬೆಳಗಾವಿಯಲ್ಲಿ ಸಿಲಿಂಡರ್, ಇಂಧನ ಲಭ್ಯತೆಯ ಬಗ್ಗೆ: ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಅಪ್ಡೇಟ್ಸ್ -
Liquor Ban: ಬೆಂಗಳೂರಲ್ಲಿ 48 ಗಂಟೆಗಳ ಕಾಲ ಮದ್ಯ ಮಾರಾಟ ನಿಷೇಧ, ಎಲ್ಲೆಲ್ಲಿ - ಯಾಕೆ ಇಲ್ಲಿದೆ ಮಾಹಿತಿ -
Bengaluru property: ಬೆಂಗಳೂರು ಆಸ್ತಿ ತೆರಿಗೆ ಬಾಕಿದಾರರಿಗೆ ಇದೀಗ ಬಿಗ್ ಶಾಕ್: ಪಾಲಿಕೆಗಳೇ ಆಸ್ತಿ ಖರೀದಿ












Click it and Unblock the Notifications