ಜಲ್ಲಿಕಟ್ಟು: ತಮಿಳುನಾಡಿನಿಂದ ಸುಪ್ರಿಂ ಕೋರ್ಟಿಗೆ ಕೇವಿಯಟ್ ಸಲ್ಲಿಕೆ
ಚೆನ್ನೈ, ಜನವರಿ 22: ತಮಿಳುನಾಡು ಸರಕಾರ ಸುಗ್ರೀವಾಜ್ಞೆ ಜಾರಿಗೊಳಿಸಿರುವ ಬೆನ್ನಿಗೆ, ಮುಂಜಾಗ್ರತಾ ಕ್ರಮವಾಗಿ ಸುಪ್ರಿಂ ಕೊರ್ಟಿಗೆ ಕೇವಿಯಟ್ ಅರ್ಜಿ ಸಲ್ಲಿಸಿದೆ. ಸುಗ್ರೀವಾಜ್ಞೆಗೆ ಸುಪ್ರಿಂ ಕೋರ್ಟ್ ತಕರಾರು ತೆಗೆಯುವ ಸಾಧ್ಯತೆಗಳಿದ್ದು, ಇದೀಗ ಕೇವಿಯಟ್ ಸಲ್ಲಿಸಿರುವುದರಿಂದ ಜಲ್ಲಿಕಟ್ಟು ವಿಚಾರವಾಗಿ ಸುಪ್ರಿಂ ಕೋರ್ಟ್ ಅಂತಿಮ ಆದೇಶ ನೀಡುವ ಮುನ್ನ ತಮಿಳುನಾಡು ವಾದವನ್ನು ಆಲಿಸಲೇಬೇಕಾಗಿದೆ.[ಜಲ್ಲಿಕಟ್ಟು: ಸುಗ್ರೀವಾಜ್ಞೆ ಜಾರಿಯಾದರೂ ನಿಲ್ಲದ ಪ್ರತಿಭಟನೆ]
ಸುಗ್ರೀವಾಜ್ಞೆಯನ್ನು ಸುಪ್ರಿಂ ಕೋರ್ಟಿನಲ್ಲಿ ಪ್ರಶ್ನಿಸುವ ಎಲ್ಲಾ ಸಾಧ್ಯತೆಗಳಿವೆ. ಇಂಥಹ ಹಲವು ಸಂದರ್ಭಗಳಲ್ಲಿ ಕೋರ್ಟ್ ಪ್ರತಿವಾದಿಯ ವಾದವನ್ನೂ ಆಲಿಸದೆ ನೇರವಾಗಿ ಮಧ್ಯಂತರ ತಡೆ ನೀಡಿ ಬಿಡುತ್ತದೆ. ಹೀಗಾಗದಿರಲಿ ಎಂದು ಕೇವಿಯಟ್ ಅರ್ಜಿ ಸಲ್ಲಿಸಲಾಗಿದೆ. ಈಗ ನಿಯಮಗಳ ಪ್ರಕಾರ ಸುಪ್ರಿಂ ಕೋರ್ಟ್ ಮಧ್ಯಂತರ ತಡೆ ನೀಡುವ ಮೊದಲು ತಮಿಳುನಾಡು ಸರಕಾರದ ವಾದವನ್ನು ಕೇಳಲೇಬೇಕಾಗಿದೆ.[ಟ್ವಿಟರ್ ನಲ್ಲಿ ಕಂಬಳಕ್ಕಾಗಿ ಕನ್ನಡಿಗರು ಏನಂದ್ರು?]

ಶನಿವಾರವಷ್ಟೆ ತಮಿಳುನಾಡು ಸರಕಾರದ ಸುಗ್ರೀವಾಜ್ಞೆಗೆ ರಾಜ್ಯಪಾಲರು ಸಹಿ ಹಾಕಿದ್ದರು. ಇದೀಗ ತಮಿಳುನಾಡು ವಿಧಾನಸಭೆಯ ಮುಂದೆ ಮಸೂದೆಯೂ ಮಂಡನೆಯಾಗಲಿದ್ದು, ನಂತರ ಅದು ಕಾನೂನಾಗಲಿದೆ.
ಸದ್ಯ ಜಲ್ಲಿಕಟ್ಟು ಪ್ರಕರಣ ಸುಪ್ರಿಂ ಕೋರ್ಟಿನಲ್ಲಿದ್ದು ವಿಚಾರಣೆ ನಡೆಯುತ್ತಿದೆ. ಈ ಹಿಂದೆ ಜಲ್ಲಿಕಟ್ಟಿಗೆ ಅವಕಾಶ ನೀಡಿ ಕೇಂದ್ರ ಸರಕಾರ ಹೊರಡಿಸಿದ ಅಧಿಸೂಚನೆ ಅದು ಮಧ್ಯಂತರ ತಡೆ ಹಿಡಿದಿ. ಈ ವಿಚಾರವಾಗಿ ಸುಪ್ರಿಂಂ ಕೋರ್ಟ್ ಇನ್ನೂ ತನ್ನ ಅಂತಿಮ ಆದೇಶ ನೀಡಿಲ್ಲ. ಇದೀಗ ಆದೇಶಕ್ಕೂ ಮುನ್ನ ಸುಗ್ರೀವಾಜ್ಞೆನ್ನೂ ಸುಪ್ರಿಂ ಕೋರ್ಟ್ ಗಮನಿಸಬೇಕಾಗಿದೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications