ರಜನಿಕಾಂತ್ 'ಲಿಂಗಾ' ವಿರುದ್ಧದ ಕೇಸ್ ರದ್ದು
ಚೆನ್ನೈ, ಡಿ.3: ಸೂಪರ್ ಸ್ಟಾರ್ ರಜನಿಕಾಂತ್ ಅಭಿನಯದ ಲಿಂಗಾ ಚಿತ್ರದ ಕಥೆ ಕದಿಯಲಾಗಿದೆ ಎಂದು ನಿರ್ದೇಶಕರೊಬ್ಬರು ಆರೋಪಿಸಿದ್ದ ಪ್ರಕರಣ ಮುರಿದು ಬಿದ್ದಿದೆ. ಮದ್ರಾಸ್ ಹೈಕೋರ್ಟಿನ ಮದುರೈ ಪೀಠ ರಿಟ್ ಅರ್ಜಿಯನ್ನು ಬುಧವಾರ ತಿರಸ್ಕರಿಸಿದೆ. ಹೀಗಾಗಿ ಚಿತ್ರದ ಬಿಡುಗಡೆಗೂ ಮುನ್ನ ಇದ್ದ ಅಡ್ಡಿ ಆತಂಕ ದೂರಾಗಿದೆ. ಡಿ.12ರಂದು ವಿಶ್ವದೆಲ್ಲೆಡೆ ಬಿಡುಗಡೆಯಾಗಲಿದೆ.
ಲಿಂಗಾ ಚಿತ್ರದ ಕಥೆ ಕದಿಯಲಾಗಿದೆ ಎಂದು ನಿರ್ದೇಶಕ ಕೆ.ಆರ್ ರವಿ ರತ್ನಂ ಆರೋಪಿಸಿದ್ದರು. ವಿವಾದ ಕೋರ್ಟ್ ಮೆಟ್ಟಿಲೇರಿತ್ತು, ಮದ್ರಾಸ್ ಹೈಕೋರ್ಟ್ ಜಸ್ಟೀಸ್ ಎಂ. ವೇಣುಗೋಪಾಲ್ ದೂರು ಸ್ವೀಕರಿಸಿ ನಟ ರಜನಿಕಾಂತ್ ಹಾಗೂ ತಮಿಳುನಾಡಿನ ಪೊಲೀಸ್ ಮಹಾನಿರ್ದೇಶಕ, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಚಿತ್ರಕಥೆಗಾರ ಬಿ ಪೊನ್ನುಕುಮಾರ್, ನಿರ್ದೇಶಕ ಕೆಎಸ್ ರವಿಕುಮಾರ್ ಅವರಿಗೆ ನೋಟಿಸ್ ಜಾರಿ ಮಾಡಿದ್ದರು. [ರಜನಿಕಾಂತ್ ಗೆ ಹೈಕೋರ್ಟಿನಿಂದ ನೋಟಿಸ್]

ಇದು ಖಾಸಗಿ ವ್ಯಾಜ್ಯವಾಗಿದ್ದು, ಸಿವಿಲ್ ಅಥವಾ ಕ್ರಿಮಿನಲ್ ಮೊಕದ್ದಮೆ ದಾಖಲಿಸಬಹುದಾಗಿದೆ ಅದರೆ, ರಿಟ್ ಅರ್ಜಿ ವ್ಯಾಪ್ತಿಗೆ ಬರುವುದಿಲ್ಲ. ಹೀಗಾಗಿ ಚಿತ್ರಕ್ಕೆ ನಿರ್ಬಂಧ ಹೇರಲು ಸಾಧ್ಯವಿಲ್ಲ ಎಂದು ಸಂವಿಧಾನದ 226ನೇ ಪರಿಚ್ಛೇದವನ್ನು ಉಲ್ಲೇಖಿಸಿ ಹೈಕೋರ್ಟ್ ಜಸ್ಟೀಸ್ ವೇಣುಗೋಪಾಲ್ ಅವರು ತೀರ್ಪು ನೀಡಿದ್ದಾರೆ.
ಚಿತ್ರದ ಹೀರೋ ಆದ ಮಾತ್ರಕ್ಕೆ ರಜನಿ ನೋಟಿಸ್ ನೀಡಲಾಗಿದೆಯೇ? ಎಂಬ ಪ್ರಶ್ನೆಯನ್ನು ಅಭಿಮಾನಿಗಳು ಕೇಳಿದ್ದರು. ಆದರೆ, ಅರ್ಜಿದಾರ ಕೆ.ಆರ್ ರವಿ ರತ್ನಂ ಅವರ ಪರವಾಗಿ ವಾದಿಸಿದ ಪೀಟರ್ ರಮೇಶ್ ಕುಮಾರ್ ಅವರು ಮಾತನಾಡಿ, ರಜನಿಕಾಂತ್ ಅವರು ಚಿತ್ರಕ್ಕೆ ಕಥೆ ಒದಗಿಸುವಲ್ಲಿ ಯಾವುದೇ ಪಾತ್ರವಹಿಸಿಲ್ಲ ನಿಜ, ಅದರೆ, ಚಿತ್ರದ ವಿತರಣೆ ಹಕ್ಕು ಇನ್ನಿತರ ರೀತಿಯಲ್ಲಿ ಚಿತ್ರದ ಪ್ರಚಾರದಲ್ಲಿ ನಿರತರಾಗಿದ್ದಾರೆ. ಹೀಗಾಗಿ ದೂರಿನಲ್ಲಿ ರಜನಿ ಅವರ ಹೆಸರು ಸೇರಿಸಲಾಗಿದೆ ಎಂದಿದ್ದರು.
ಏನಿದು ತಕರಾರು?: ತಮಿಳುನಾಡು ಹೌಸಿಂಗ್ ಬೋರ್ಡಿನ ಅರ್ಜಿದಾರ ರವಿ ರತ್ನಂ ಪ್ರಕಾರ ಲಿಂಗಾ ಚಿತ್ರದ ಕಥೆಯನ್ನು ಅವರೆ ಬರೆದಿದ್ದಂತೆ. ಮುಲ್ಲೈ ವಾನಂ 999 ಎಂಬ ಮುಲ್ಲಪೆರಿಯಾರ್ ಅಣೆಕಟ್ಟು ಕುರಿತ ಚಿತ್ರ ಬಗ್ಗೆ ಜಾನ್ ಪೆನ್ನಿಕ್ಯೂಕ್ ಬರೆದಿರುವ ಲೇಖನ ಆಧಾರಿಸಿ ಚಿತ್ರ ಮಾಡಲು ಹೊರಟಾಗ ಈ ಕಥೆ ಬರೆದಿದ್ದರಂತೆ. ಈ ಕಥೆಯನ್ನು ಲಿಂಗಾ ಚಿತ್ರತಂಡ ಕದ್ದಿದೆ ಎಂದು ಆರೋಪಿಸಲಾಗಿದೆ.
ರಜಿನಿ ಕೌಂಟರ್ ಅಫಿಡವಿಟ್ : ನೋಟಿಸ್ ಗೆ ಉತ್ತರಿಸಿದ್ದ ರಜನಿ ಅವರು ಕೌಂಟರ್ ಅಫಿಡವಿಟ್ ಸಲ್ಲಿಸಿ, ಎರಡು ಚಿತ್ರದ ಕಥೆಯನ್ನು ಎಸ್ ಪೊನ್ ಕುಮಾರನ್ ಬರೆದಿದ್ದಾರೆ. 2010ರಲ್ಲಿ ಕಿಂಗ್ ಖಾನ್ ಎಂಬ ಹೆಸರಿನಲ್ಲಿ ಕಥೆಯನ್ನು ದಕ್ಷಿಣ ಭಾರತದ ಚಿತ್ರಕಥೆಗಾರರ ಒಕ್ಕೂಟದಲ್ಲಿ ನೋಂದಾಯಿಸಿದ್ದಾರೆ ಎಂದು ದಾಖಲೆಗಳನ್ನು ಒದಗಿಸಿದ್ದರು.[ರಜನಿ 'ಲಿಂಗಾ' ಚಿತ್ರದ ಹೈಲೈಟ್ಸ್]
ಕೋರ್ಟ್ ನೋಟಿಸ್ ಬಂದ ಮೇಲೆ ಮದುರೈ ಪೊಲೀಸ್ ಆಯುಕ್ತರು ರಿಟ್ ಅರ್ಜಿಯ ಪ್ರತಿಯನ್ನು ತಲ್ಲಕುಲಂ ಪೊಲೀಸ್ ಠಾಣೆಗೆ ಕಳಿಸಿ ತನಿಖೆ ನಡೆಸುವಂತೆ ಆದೇಶಿಸಿದ್ದರು. ಅದರೆ, ಅರ್ಜಿದಾರರ ಹಾಗೂ ಲಿಂಗಾ ಚಿತ್ರತಂಡವಾಗಲಿ ವಿವಾದಕ್ಕೆ ಕಾರಣವಾಗಿರುವ ಕಥೆಯ ಪ್ರತಿಯನ್ನು ಠಾಣೆಗೆ ಕಳಿಸಿರಲಿಲ್ಲ ಎಂಬುದು ಗಮನಾರ್ಹ.
-
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral -
Ananya Birla: ಆರ್ಸಿಬಿ ಅಭಿಮಾನಿಗಳು ಹಾಗೂ ಸಹೋದರನಿಗೆ ಅನನ್ಯಾ ಬಿರ್ಲಾ ವಿಶೇಷ ಸಂದೇಶ -
Karnataka Weather: ಬಿಸಿಲಿನಿಂದ ಕಂಗೆಟ್ಟಿದ್ದ ಕರುನಾಡಿಗೆ ತಂಪೆರೆಯಲಿದ್ದಾನೆ ವರುಣ; ಎಲ್ಲೆಲ್ಲಿ ಮಳೆ? ಇಲ್ಲಿದೆ ಮಾಹಿತಿ -
March 25 Horoscope: ಈ 3 ರಾಶಿಗಳಿಗೆ ಅದೃಷ್ಟದ ಬಾಗಿಲು ತೆರೆದುಕೊಳ್ಳಲಿದೆ -
SSLC ಇಂಗ್ಲೀಷ್ ಪರೀಕ್ಷೆ ಮುಕ್ತಾಯ: ಪೇಪರ್ ಹೇಗಿತ್ತು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಏನಂತಾರೆ? ಇಲ್ಲಿದೆ ವಿಶ್ಲೇಷಣೆ -
Karnataka Rains: ಧಾರಾಕಾರ ಮಳೆ! 7 ಜಿಲ್ಲೆಗಳಿಗೆ 'ಆರೆಂಜ್', 15ಕ್ಕೂ ಹೆಚ್ಚು ಜಿಲ್ಲೆಗಳಿಗೆ 'ಯೆಲ್ಲೋ' ಅಲರ್ಟ್ -
Gold: ಚಿನ್ನ ಖರೀದಿ ಮತ್ತು ಮಾರಾಟಕ್ಕೆ ಇದು ಒಳ್ಳೆಯ ಸಮಯವಲ್ಲ ಎಂದ ಅರ್ಥಶಾಸ್ತ್ರಜ್ಞೆ ಮೇರಿ ಜಾರ್ಜ್ -
ಡಬಲ್ ಡೆಕ್ಕರ್ ಫ್ಲೈಓವರ್ ಸಹಿತ ನಮ್ಮ ಮೆಟ್ರೋ ಕಾರಿಡಾರ್: ಯೋಜನೆಗೆ ಜೈಕಾದಿಂದ 6,775 ರೂ ಸಾಲ: BMRCL -
ಐಪಿಎಲ್ ಇತಿಹಾಸದಲ್ಲೇ ಆರ್ಸಿಬಿಯ ಹೊಸ ಅಧ್ಯಾಯ: 16,000 ಕೋಟಿಗೆ ಫ್ರಾಂಚೈಸಿ ಖರೀದಿಸಿದ ಆರ್ಯಮನ್ ಬಿರ್ಲಾ ಯಾರು? -
Gold Rate: ದಿಢೀರ್ ಏರಿಕೆ ಕಂಡ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಚಿನ್ನದ ದರ ಹೀಗಿದೆ.. -
Kishore Kumar Huli: ಮೋದಿ ಹೇಳಿಕೆ ಹಂಚಿಕೊಂಡು ನಿಮಗೆ ನಾಚಿಕೆ ಇದೆಯೇ ಎಂದ ನಟ ಕಿಶೋರ್ ಕುಮಾರ್ -
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್












Click it and Unblock the Notifications