ಕೇಂದ್ರ ಸರ್ಕಾರ ಜಯಾ ಸಾವಿನ ತನಿಖೆ ನಡೆಸಲಿ: ಪನ್ನೀರ್ ಸೆಲ್ವಂ ಆಗ್ರಹ
ಎಐಎಡಿಎಂಕೆ ಪಕ್ಷದಲ್ಲಿ ಕುಟುಂಬ ರಾಜಕೀಯವನ್ನು ತಂದಿದ್ದಾರೆಂದು ಶಶಿಕಲಾ ನಟರಾಜನ್ ವಿರುದ್ಧ ಹರಿಹಾಯ್ದ ಮಾಜಿ ಮುಖ್ಯಮಂತ್ರಿ
ಚೆನ್ನೈ, ಫೆಬ್ರವರಿ 24: ತಮಿಳುನಾಡಿನ ಮುಖ್ಯಮಂತ್ರಿ ಜೆ. ಜಯಲಲಿತಾ ಸಾವು ಪ್ರಕರಣದ ತನಿಖೆ ನಡೆಸಬೇಕು ಎಂದು ತಮಿಳುನಾಡಿನ ಮಾಜಿ ಮುಖ್ಯಮಂತ್ರಿ ಹಾಗೂ ಎಐಎಡಿಎಂಕೆ ಪಕ್ಷದ ಉಚ್ಛಾಟಿತ ನಾಯಕ ಪನ್ನೀರ್ ಸೆಲ್ವಂ ಆಗ್ರಹಿಸಿದ್ದಾರೆ.
ಜಯಲಲಿತಾ ಅವರ ಸಾವಿನ ಬಗ್ಗೆ ಇಡೀ ತಮಿಳುನಾಡಿನ ಜನತೆಯಲ್ಲಿ ಅನೇಕ ಪ್ರಶ್ನೆಗಳಿಗೆ ಈ ಪ್ರಶ್ನೆಗಳಿಗೆ ಸೂಕ್ತ ಉತ್ತರ ದೊರಕಬೇಕೆಂದರೆ ಆ ಬಗ್ಗೆ ನಿಷ್ಪಕ್ಷಪಾತವಾದ ತನಿಖೆಯಾಗಬೇಕು ಎಂದು ಅವರು ಆಶಿಸಿದರು.[ಸಂಕಷ್ಟದಲ್ಲಿರುವ ಶಶಿಕಲಾ ನಟರಾಜನ್ ಮಾಡಿದ 5 ನಿರ್ಣಾಯಕ ತಪ್ಪುಗಳು]
ಆನಂತರ, ಶಶಿಕಲಾ ಅವರ ಸಂಬಂಧಿಗಳಿಗೆ ಎಐಎಡಿಎಂಕೆಯ ಪ್ರಮುಖ ಸ್ಥಾನಗಳಿಗೆ ನೇಮಕ ಮಾಡಿರುವುದರ ವಿರುದ್ಧ ಕಿಡಿಕಾರಿದ ಅವರು, ''ಎಐಎಡಿಎಂಕೆಯ ಸಂಸ್ಥಾಪಕ ಎಂಜಿ ರಾಮಚಂದ್ರನ್ ಅವರು ನಿಧನರಾದಾಗಲೂ ಇಂಥ ಕೌಟುಂಬಿಕ ರಾಜಕಾರಣ ಪಕ್ಷದೊಳಗೆ ಬರುವ ಪ್ರಮೇಯವೇರ್ಪಟ್ಟಿತ್ತು. ಆದರೆ, ಅದಕ್ಕೆ ಅಂದು ಜಯಲಲಿತಾ ಅವರು ತಡೆಯೊಡ್ಡಿದ್ದರು.[ಜಯಲಲಿತಾ ಗೆಳತಿ ಶಶಿಕಲಾ ನಟರಾಜನ್ ಕೈದಿ ನಂಬರ್ 9934]
ಪಕ್ಷದೊಳಗೆ ಕುಟುಂಬ ರಾಜಕಾರಣ ಬರಕೂಡದೆಂಬುದು ಅವರ ನಿಲುವಾಗಿತ್ತು. ಆದರೆ, ಈಗ, ಶಶಿಕಲಾ ಅವರು ಪಕ್ಷದಲ್ಲಿ ತಮ್ಮ ಸಂಬಂಧಿಕರನ್ನು ಕರೆತಂದು ಅವರಿಗೆ ಪ್ರಮುಖ ಸ್ಥಾನಗಳನ್ನು ನೀಡಿರುವುದು ಪಕ್ಷದಲ್ಲಿ ಕುಟುಂಬ ರಾಜಕೀಯಕ್ಕೆ ನಾಂದಿ ಹಾಡಿದಂತಾಗಿದೆ. ಇದರ ವಿರುದ್ಧ ಹೋರಾಡುತ್ತೇವೆ ಎಂದು ಅವರು ತಿಳಿಸಿದರು.