ಮಣ್ಣಲ್ಲಿ ಮಣ್ಣಾದ ಕ್ಷಿಪಣಿ ಮಾನವ ಡಾ. ಕಲಾಂ
ಚೆನ್ನೈ, ಜುಲೈ 30 : ಸೋಮವಾರ ನಿಧನರಾದ ಕ್ಷಿಪಣಿ ಮಾನವ, ಮಾಜಿ ರಾಷ್ಟ್ರಪತಿ ಅಬ್ದುಲ್ ಕಲಾಂ ಅವರ ಅಂತ್ಯಕ್ರಿಯೆ ತಮಿಳುನಾಡಿನ ರಾಮೇಶ್ವರಂನಲ್ಲಿ ನಡೆಯಿತು. ಪ್ರಧಾನಿ ನರೇಂದ್ರ ಮೋದಿ ಸೇರಿದಂತೆ ಹಲವು ಗಣ್ಯರು ರಾಮೇಶ್ವರಂಗೆ ಆಗಮಿಸಿ ಅಂತ್ಯಕ್ರಿಯೆಯಲ್ಲಿ ಪಾಲ್ಗೊಂಡರು. ಆಗಲಿದ ಚೇತನಕ್ಕೆ ಅಂತಿಮ ನಮನ ಸಲ್ಲಿಸಿದರು.
ಗುರುವಾರ ಬೆಳಗ್ಗೆ ಅಂತಿಮ ವಿಧಿವಿಧಾನಗಳು ಆರಂಭವಾದವು. ಕಲಾಂ ಅವರ ನಿವಾಸಕ್ಕೆ ಮೃತದೇಹವನ್ನು ತೆಗೆದುಕೊಂಡು ಹೋಗಿ ಕುಟುಂಬದವರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿಕೊಡಲಾಯಿತು. ಸಾವಿರಾರು ಜನರು ರಾಮೇಶ್ವರಂಗೆ ಆಗಮಿಸಿ, ಡಾ.ಕಲಾಂ ಅವರಿಗೆ ಅಂತಿಮ ನಮನ ಸಲ್ಲಿಸಿದರು.[ಕಲಾಂ ಆಡಿದ ಕೊನೆ ಘಳಿಗೆಯ ಮಾತುಗಳೇನು?]

ಕಲಾಂ ಅವರ ನಿವಾಸದಿಂದ ಸುಮಾರು 5 ಕಿ.ಮೀ.ದೂರದಲ್ಲಿರುವ ಪೆಯಿಕರಂಬು ಮೈದಾನದಲ್ಲಿ ಅಬ್ದುಲ್ ಕಲಾಂ ಅವರ ಅಂತ್ಯಕ್ರಿಯೆ ನಡೆಯಿತು. ಕಲಾಂ ಅವರ ನಿವಾಸದಿಂದ ಸೇನೆಯ ವಾಹನದಲ್ಲಿ ಪಾರ್ಥಿವ ಶರೀರವನ್ನು ಮೈದಾನಕ್ಕೆ ತೆಗೆದುಕೊಂಡು ಬರಲಾಯಿತು.
ಮೈದಾನದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ, ವಿವಿಧ ಕೇಂದ್ರ ಸಚಿವರು, ವಿವಿಧ ರಾಜ್ಯಗಳ ಮುಖ್ಯಮಂತ್ರಿಗಳು, ತಮಿಳುನಾಡು ರಾಜ್ಯಪಾಲ ರೋಸಯ್ಯ ಸೇರಿದಂತೆ ಹಲವಾರು ಗಣ್ಯರು ಅಂತಿಮ ನಮನ ಸಲ್ಲಿಸಿದರು. ನಂತರ ಮೃತದೇಹವನ್ನು ಕುಟುಂಬದವರಿಗೆ ಹಸ್ತಾಂತರ ಮಾಡಲಾಯಿತು. [ಅಬ್ದುಲ್ ಕಲಾಂರ ಜೀವನ ಮತ್ತು ಸಾಧನೆ ಚಿತ್ರಗಳು]
ಸಮಯ 12.05 : ಮಣ್ಣಲ್ಲಿ ಮಣ್ಣಾದ ಕ್ಷಿಪಣಿ ಮಾನವ, ಜನರ ರಾಷ್ಟ್ರಪತಿ ಅಬ್ದುಲ್ ಕಲಾಂ
#RIPKalam | Nation bids farewell to @APJAbdulKalamWATCH LIVE: http://t.co/lh3mmuHjX3 pic.twitter.com/CE4tYYyS8A
— CNN-IBN News (@ibnlive) July 30, 2015 ಸಮಯ 12 ಗಂಟೆ : ಅಂತ್ಯ ಸಂಸ್ಕಾರದ ಪ್ರಕ್ರಿಯೆಗಳು ಪೂರ್ಣ
ಸಮಯ 11.48 : ಕುಟುಂಬದವರಿಗೆ ಕಲಾಂ ಪಾರ್ಥಿವ ಶರೀರ ಹಸ್ತಾಂತರ
ಸಮಯ 11.40 : ಕಲಾಂ ಪಾರ್ಥಿವ ಶರೀರದ ಮೇಲಿದ್ದ ರಾಷ್ಟ್ರಧ್ವಜವನ್ನು ತೆಗೆದ ಸೇನಾ ಸಿಬ್ಬಂದಿ
ಸಮಯ 11.30 : ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತು ವಿವಿಧ ಕೇಂದ್ರ ಸಚಿವರು ಕಲಾಂಗೆ ಅಂತಿಮ ನಮನ ಸಲ್ಲಿಸಿದರು

ಸಮಯ 11.20 : ಅಂತಿಮ ನಮನ ಸಲ್ಲಿಸಿದ ಸಿದ್ದರಾಮಯ್ಯ, ಬಿ.ಎಸ್.ಯಡಿಯೂರಪ್ಪ
ಸಮಯ 11.14 : ಪ್ರಧಾನಿ ನರೇಂದ್ರ ಮೋದಿ ಅವರಿಂದ ಡಾ.ಕಲಾಂ ಪಾರ್ಥಿವ ಶರೀರಕ್ಕೆ ಅಂತಿಮ ನಮನ ಸಲ್ಲಿಕೆ
ಸಮಯ 11.03 : ಪೆಯಿಕರಂಬು ಮೈದಾನ ತಲುಪಿದ ಡಾ.ಕಲಾಂ ಪಾರ್ಥಿವ ಶರೀರ
ಸಮಯ 11 ಗಂಟೆ : 500ಕ್ಕೂ ಹೆಚ್ಚು ಗಣ್ಯರು ಡಾ.ಕಲಾಂ ಅವರ ಅಂತ್ಯಸಂಸ್ಕಾರದಲ್ಲಿ ಪಾಲ್ಗೊಳ್ಳಲು ರಾಮೇಶ್ವರಂಗೆ ಆಗಮಿಸಿದ್ದಾರೆ
Former President Dr. APJ Abdul Kalam's funeral procession in Rameswaram (TN) pic.twitter.com/As2fnubxss
— ANI (@ANI_news) July 30, 2015 ಸಮಯ 10.49 : ರಾವೇಶ್ವರಂಗೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಸಮಯ 10.35 : ಕೇರಳ ಸಿಎಂ ಉಮನ್ ಚಾಂಡಿ, ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಿಜೆಪಿ ರಾಷ್ಟ್ರೀಯ ಉಪಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ವಿವಿಧ ಕೇಂದ್ರ ಸಚಿವರು, ತಮಿಳುನಾಡು ಹಣಕಾಸು ಸಚಿವ ಪನ್ನೀರ್ ಸೆಲ್ವಂ ಮುಂತಾದವರು ರಾಮೇಶ್ವರಂಗೆ ಆಗಮಿಸಿದ್ದಾರೆ.[ಚಿತ್ರಗಳು : ಅಬ್ದುಲ್ ಕಲಾಂಗೆ ಅಂತಿಮ ನಮನ]
ಸಮಯ 10.27 : ಅಬ್ದುಲ್ ಕಲಾಂ ಅವರ ನಿವಾಸದಿಂದ ಪೆಯಿಕರಂಬು ಮೈದಾನಕ್ಕೆ ಮೃತದೇಹವನ್ನು ಮೆರವಣಿಗೆ ಮೂಲಕ ತೆಗೆದುಕೊಂಡು ಹೋಗಲಾಗುತ್ತಿದೆ.
Last rites of Former President APJ Abdul Kalam at Rameswaram, Tamil Nadu pic.twitter.com/ZYz0gvA7ZA
— ANI (@ANI_news) July 30, 2015 ಸಮಯ 10 ಗಂಟೆ : ಮಧುರೈ ವಿಮಾನ ನಿಲ್ದಾಣಕ್ಕೆ ಆಗಮಿಸಿದ ಪ್ರಧಾನಿ ನರೇಂದ್ರ ಮೋದಿ
ಸಮಯ 9.30 : ಮಧುರೈ ವಿಮಾನ ನಿಲ್ದಾಣಕ್ಕೆ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಆಗಮನ, ಹೆಲಿಕಾಪ್ಟರ್ ಮೂಲಕ ರಾಮೇಶ್ವರಂಗೆ ಪ್ರಯಾಣ
-
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ -
Bengaluru: ಪಬ್ನಲ್ಲಿ 150 ರೂ. ಕೊಟ್ಟು ಆರ್ಡರ್ ಮಾಡಿದ್ರೆ ಬಂದಿದ್ದು ಬರೀ ಹಪ್ಪಳ-ಸಂಡಿಗೆ: ದಂಗಾದ ಗ್ರಾಹಕ -
ಇಂಡೋನೇಷ್ಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಏಷ್ಯಾ ರಾಷ್ಟ್ರಗಳಲ್ಲಿ ಸುನಾಮಿ ಆತಂಕ, ಭಾರತದ ಮೇಲಾಗುವ ಪರಿಣಾಮವೇನು? -
Bengaluru House Rent: ಬೆಂಗಳೂರಿನ ಪ್ರೈಮ್ ಏರಿಯಾದಲ್ಲೂ ನಾನ್ವೆಜ್ ಪ್ರಿಯರಿಗೆ ಮನೆ ಸಿಗ್ತಿಲ್ಲ, ಸೋಷಿಯಲ್ ಮೀಡಿಯಾ ಚರ್ಚೆ -
Prakash Raj: ನಾಸ್ತಿಕನಾದರೂ ತಾಯಿಯ ನಂಬಿಕೆಗೆ ಗೌರವ ಕೊಟ್ಟು; ಕ್ರೈಸ್ತ ಧರ್ಮದ ಸಂಪ್ರದಾಯ ಪಾಲನೆ: ನಟ ಪ್ರಕಾಶ್ ರಾಜ್ -
Education: CBSE 9 ಮತ್ತು 10ನೇ ತರಗತಿಯ ಹೊಸ ಪಠ್ಯಕ್ರಮ ಇಂದು ಬಿಡುಗಡೆ -
ಮುಂದಿನ 2 ರಿಂದ 3 ವಾರಗಳಲ್ಲಿ ಇರಾನ್ ಮೇಲೆ ಅತ್ಯಂತ ಭೀಕರ ದಾಳಿ: ಟ್ರಂಪ್ ಎಚ್ಚರಿಕೆ -
ವಿದ್ಯಾರ್ಥಿಗಳ ಮೊಬೈಲ್ ಗೀಳಿಗೆ ಬ್ರೇಕ್: ಹೊಸ 'ಡಿಜಿಟಲ್ ನೀತಿ' ಪ್ರಕಟಿಸಿದ ಆರೋಗ್ಯ ಇಲಾಖೆ -
Raghav Chadha: ಸಂಸದ ರಾಘವ್ ಚಡ್ಡಾಗೆ ಶಾಕ್ ಕೊಟ್ಟ ಎಎಪಿ, ಬಿಜೆಪಿ ಸೇರಲಿದ್ದಾರೆಯೇ ಸ್ಟಾರ್ ರಾಜಕಾರಣಿ -
Nuwan Thushara: ಆರ್ಸಿಬಿಗಾಗಿ ಶ್ರೀಲಂಕಾ ಕ್ರಿಕೆಟ್ ಮಂಡಳಿಯ ವಿರುದ್ಧವೇ ತಿರುಗಿ ಬಿದ್ದ ಸ್ಟಾರ್ ಆಟಗಾರ ನುವಾನ್ ತುಷಾರ












Click it and Unblock the Notifications