ಹುಬ್ಬಳ್ಳಿಯಲ್ಲಿ ಶಾಲಾ ಬಾಲಕಿ ಪ್ರಾಣ ತೆಗೆದ ಲಾರಿ ಚಾಲಕ
ಹುಬ್ಬಳ್ಳಿ, ಜನವರಿ, 21: ದಾರಿಯಲ್ಲಿ ಹೋಗುತ್ತಿದ್ದ ಶಾಲಾ ಬಾಲಕಿಗೆ ಲಾರಿ ಡಿಕ್ಕಿ ಹೊಡೆದ ಪರಿಣಾಮ ಆಕೆ ಸ್ಥಳದಲ್ಲಿಯೇ ಮೃತಪಟ್ಟ ಘಟನೆ ನಗರ ಬಂಕಾಪುರ ಚೌಕ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಬುಧವಾರ ಸಂಜೆ ನಡೆದಿದೆ.
ರಸ್ತೆ ಅಪಘಾತದಲ್ಲಿ ಮೃತಪಟ್ಟ ಶಾಲಾ ಬಾಲಕಿಯೇ ಸ್ನೇಹಾ ಹೊನ್ನಪ್ಪ ಜಂಬಲದಿನ್ನಿ(8). ಈ ಅಪಘಾತದ ವಿರುದ್ದ ಪ್ರತಿಭಟನೆ ಆರಂಭಿಸಿದ ಜನತೆ ಲಾರಿಯನ್ನು ಸ್ಥಳದಲ್ಲಿಯೇ ಸುಟ್ಟು ಹಾಕಿದ್ದು, ಒಂದು ಗಂಟೆಗೂ ಹೆಚ್ಚು ಕಾಲ ರಸ್ತೆ ತಡೆ ನಡೆಸಿ ತಮ್ಮ ಆಕ್ರೋಶ ವ್ಯಕ್ತಪಡಿಸಿದರು.[1 ಬಾಟಲಿ ನೀರು ಖರೀದಿಸಿದ್ರೆ ಒಂದು ಲೀ. ಪೆಟ್ರೋಲ್ ಫ್ರೀ!]
ಲಾರಿ ಚಾಲಕ ಕಿವಿಗೆ ಈಯರ್ ಫೋನ್ ಹಾಕಿಕೊಂಡು ಕುಡಿದ ಮತ್ತಿನಲ್ಲಿ ಲಾರಿ ಚಲಾಯಿಸುತ್ತಿದ್ದನು. ಬಂಕಾಪುರ ಚೌಕ್ ಬಳಿಯ ರಾಷ್ಟ್ರೀಯ ಹೆದ್ದಾರಿಯಲ್ಲಿ ಆತನ ನಿರ್ಲಕ್ಷದಿಂದ ಶಾಲಾ ಬಾಲಕಿ ಸಾವನ್ನಪ್ಪಿದ್ದು, ಲಾರಿ ಚಾಲಕ ಪರಾರಿಯಾಗಿದ್ದಾನೆ.[ವೇಗಯುತ ದ್ವಿಚಕ್ರ ವಾಹನಗಳಿಗೆ ಬ್ರೇಕ್ ಹಾಕುತ್ತಾ ಸರ್ಕಾರ?]
ಸ್ನೇಹಾ ನಗರದ ಸರಕಾರಿ ಪ್ರಾಥಮಿಕ ಶಾಲೆ 3ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿದ್ದನು. ಮೃತ ಬಾಲಕಿ ಸ್ನೇಹಾಳ ತಂದೆ ಆಟೋ ಚಾಲಕರಾಗಿದ್ದಾರೆ. ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸ್ ಸಿಬ್ಬಂದಿ ಲಾರಿಗೆ ಬೆಂಕಿ ಹಚ್ಚಿದ ಮತ್ತು ಅಪಘಾತ ಕುರಿತು ಪ್ರತ್ಯೇಕ ಪ್ರಕರಣ ದಾಖಲಿಸಿಕೊಂಡಿದ್ದಾರೆ.