ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಕುಡಿಯುವ ನೀರಿಗಾಗಿ ದೇಶಪಾಂಡೆ ಫೌಂಡೇಶನ್ ನಿಂದ ಸಹಾಯವಾಣಿ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ,ಮಾರ್ಚ್,07: ಉತ್ತರ ಕರ್ನಾಟಕದ ಗದಗ, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳ ಜನತೆಯ ನೆಮ್ಮದಿಗೆಡಿಸಿರುವ ಬರಗಾಲ ಪರಿಸ್ಥಿತಿಯನ್ನು ಕಡಿಮೆ ಮಾಡುವ ಉದ್ದೇಶ ಹೊಂದಿದ ಹುಬ್ಬಳ್ಳಿಯ ದೇಶಪಾಂಡೆ ಫೌಂಡೇಶನ್ ನಾಗರಿಕರಿಗಾಗಿ ಸಹಾಯವಾಣಿ ಸ್ಥಾಪಿಸಿದೆ. ಜನರ ಬರಗಾಲದ ಬವಣೆ ನೀಗಿಸಲು ಕಂಕಣ ಬದ್ದವಾಗಿದೆ.

ಗದಗ, ಹಾವೇರಿ ಮತ್ತು ಧಾರವಾಡ ಜಿಲ್ಲೆಗಳು ಸತತವಾಗಿ ಕುಡಿಯುವ ನೀರಿನ ಸಮಸ್ಯೆಯಿಂದ ಬಳಲುತ್ತಿವೆ. ಈ ಎಲ್ಲ ಸಮಸ್ಯೆಗಳನ್ನು ತಿಳಿದ ದೇಶಪಾಂಡೆ ಫೌಂಡೇಶನ್ ಗ್ರಾಮೀಣ ಜನರಿಗೆ ಅನುಕೂಲ ಕಲ್ಪಿಸಲು ಉದ್ದೇಶಿಸಿದೆ ಎಂದು ದೇಶಪಾಂಡೆ ಫೌಂಡೇಶನ್ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ನವೀನ್ ಝಾ ಮಾಹಿತಿ ನೀಡಿದರು.["ನೀರು ಕೇಳಿದವರ ರಕ್ತ ಬಸಿದ ನಿಮಗೆ ನಾಚಿಕೆಯಾಗಲ್ವಾ"?]

Deshpande Foundation launched helpline for drinking water in Hubballi

ಮಾರ್ಚ್ ಮೊದಲ ವಾರದಿಂದ ಆರಂಭವಾಗಿರುವ ಈ ಸಹಾಯವಾಣಿ ಮೇ ಅಂತ್ಯದವರೆಗೂ ಜಾರಿಯಲ್ಲಿರುತ್ತದೆ. ನೀರಿನ ಸಮಸ್ಯೆಯಿಂದ ಬಳಲುತ್ತಿರುವ ಮೇಲ್ಕಂಡ ಮೂರು ಜಿಲ್ಲೆಗಳ ಜನತೆ 180030101221 ಗೆ ಕರೆ ಮಾಡಿ ತಮ್ಮ ಹೆಸರು, ಊರು ತಿಳಿಸಬಹುದು. ತಾವು ಎದುರಿಸುತ್ತಿರುವ ಸಮಸ್ಯೆ ಬಗ್ಗೆ ಹೇಳಿಕೊಳ್ಳಬಹುದು.[ಕರ್ನಾಟಕದಲ್ಲಿ ಭೀಕರ ಬರಗಾಲ, ಹೇಳುವವರಿಲ್ಲ ಕೇಳುವವರಿಲ್ಲ]

ಈ ಮೂರು ಜಿಲ್ಲೆಗಳ ಜನತೆಯಿಂದ ಬಂದ ಕರೆಗಳ ಮಾಹಿತಿಯನ್ವಯ ದೇಶಪಾಂಡೆ ಫೌಂಡೇಶನ್ ಸರಕಾರಿ ಅಧಿಕಾರಿಗಳಿಗೆ ಕೂಡಲೇ ಸಮಸ್ಯೆಯನ್ನು ಮನವರಿಕೆ ಮಾಡಲಿದೆ. ಜನರು ಇದರ ಸದುಪಯೋಗ ಪಡೆದುಕೊಳ್ಳಬೇಕೆಂದು ನವೀನ್ ಝಾ ಹೇಳಿದರು.

English summary
Hubballi Deshpande Foundation have launched drinking water helpline on Monday, March 7th. This helpline helps to Gadag, Dharwad, Haveri people.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X