ಧಾರವಾಡ ಸುದ್ದಿಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
Oneindia App Download

ಜೂನ್ ಅಂತ್ಯಕ್ಕೆ ಸಮವಸ್ತ್ರ ವಿತರಣೆ: ಕಿಮ್ಮನೆ

By ಹುಬ್ಬಳ್ಳಿ ಪ್ರತಿನಿಧಿ
|
Google Oneindia Kannada News

ಹುಬ್ಬಳ್ಳಿ, ಜೂನ್ 08: ಪ್ರಸಕ್ತ ಶೈಕ್ಷಣಿಕ ಸಾಲಿನ ವಿದ್ಯಾರ್ಥಿಗಳಿಗೆ ಜೂನ್ ಅಂತ್ಯದೊಳಗೆ ಬಟ್ಟೆ ಮತ್ತು ಪುಸ್ತಕಗಳನ್ನು ವಿತರಿಸಲಾಗುವುದು ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ ತಿಳಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಅಧಿಕಾರಕ್ಕೆ ಬಂದಾಗಿನಿಂದ ಶಿಕ್ಷಕರ ವರ್ಗಾವಣೆ ನೀತಿಯನ್ನು ಬದಲಾಯಿಸಿದೆ. ವರ್ಗಾವಣೆಯಲ್ಲಿದ್ದ ವಿವಿಧ ನೀತಿಗಳನ್ನು ಸರಿಪಡಿಸಿ ಗೊಂದಲ ನಿವಾರಣೆ ಮಾಡಲಾಗಿದೆ ಎಂದರು.[ದ್ವಿತೀಯ ಪಿಯು ಪರೀಕ್ಷೆಯಲ್ಲಿ ಫೇಲ್ ಆಗಿದ್ದ ಸರ್ಕಾರ!]

kimmane

ಕೆಲವೊಂದು ನಿಯಮಗಳಿಗೆ ತಿದ್ದುಪಡಿಗಳನ್ನು ತರಲಾಗಿದೆ. ಗಂಡ-ಹೆಂಡತಿಯ ವರ್ಗಾವಣೆ ವಿಷಯದಲ್ಲಿ ಶೇ. 5 ರಷ್ಟು ಇದ್ದ ವರ್ಗಗಳನ್ನು ಶೇ.8ಕ್ಕೆ ಏರಿಸಲಾಗಿದೆ.. ಪ್ರಾಥಮಿಕ ಶಾಲೆಯಲ್ಲಿನ ಶಿಕ್ಷಕನ್ನು ಮುಖ್ಯಾಧ್ಯಾಪಕರನ್ನಾಗಿಸಲಾಗಿದೆ ಎಂದು ತಿಳಿಸಿದರು.[ಹುಬ್ಬಳ್ಳಿ ಮೇಯರ್ ಮಂಜುಳಾರನ್ನೇ ಬಸ್ ಹತ್ತಿಸಿದ ಪಾಲಿಕೆ!]

ವರ್ಗಾವಣೆಯಲ್ಲಿನ ಕೆಲ ನೀತಿ ಬದಲಾವಣೆ ಮಾಡಿ 9 ಸಾವಿರ ಶಿಕ್ಷಕರಿಗೆ ಮುಖ್ಯಾಧ್ಯಾಪಕರಾಗಿ ಬಡ್ತಿ ನೀಡಲಾಗಿದೆ ಎಂದು ತಿಳಿಸಿದರು. ಸರಿಯಾದ ಸಮಯಕ್ಕೆ ಪಠ್ಯ ಪುಸ್ತಕ ವಿತರಣೆಯಾದರೆ ವಿದ್ಯಾರ್ಥಿಗಳಿಗೆ ಅನಗತ್ಯ ಗೊಂದಲ ತಪ್ಪಲಿದೆ.

English summary
Hubballi: The Karnataka State Government is ready to distribute books and uniforms to children's before end of June, Primary Education Minister Kimmane Ratnakar said at Hubballi.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X