ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದವನು ಕಂಬಿ ಹಿಂದೆ
ಬಸ್ಸಿಗಾಗಿ ಕಾಯುತ್ತಿದ್ದ ಶಿಕ್ಷಕಿಗೆ ಸಹಾಯ ಮಾಡುವ ನೆಪದಲ್ಲಿ ಆಕೆ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದ ಯುವಕನನ್ನು ಗರಗ ಪೊಲೀಸರು ಬಂಧಿಸಿದ್ದಾರೆ. ಆತ ಅದಕ್ಕೂ ಮುನ್ನ ಇತರ ಮಹಿಳೆಯರ ಅತ್ಯಾಚಾರಕ್ಕೂ ಯತ್ನಿಸಿದ್ದ ಎಂದು ತಿಳಿದುಬಂದಿದೆ
ಧಾರವಾಡ, ಮಾರ್ಚ್ 18: ಬಸ್ ಗಾಗಿ ಕಾಯುತ್ತಿದ್ದ ಶಿಕ್ಷಕಿಯೊಬ್ಬರ ಅತ್ಯಾಚಾರಕ್ಕೆ ಪ್ರಯತ್ನಿಸಿದ ವ್ಯಕ್ತಿಯೊಬ್ಬನೀಗ ಪೊಲೀಸರ ಅತಿಥಿಯಾಗಿದ್ದಾನೆ. ಈ ಸಂಬಂಧ ಗರಗ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಧಾರವಾಡ ತಾಲೂಕಿನ ಪ್ರಭುನಗರ-ಹೊನ್ನಾಪುರದ ನಿವಾಸಿ ಶಿವಾನಂದ ಕಮತಿ ಅತ್ಯಾಚಾರಕ್ಕೆ ಯತ್ನಿಸಿದ ಆರೋಪಿ.
ಶಾಲೆಗೆ ತೆರಳುವ ಸಲುವಾಗಿ ಧಾರವಾಡ ತಾಲೂಕು ಮದಿಕೊಪ್ಪದ ಶಿಕ್ಷಕಿ ಶುಕ್ರವಾರ ಬೆಳಗ್ಗೆ ಬೆಳಗಾವಿ ರಸ್ತೆಯಲ್ಲಿರುವ ತೇಗೂರ ಬಳಿ ಮದಿಕೊಪ್ಪ ಕ್ರಾಸ್ ನಲ್ಲಿ ಬಸ್ ನಿಂದ ಇಳಿದಿದ್ದಾರೆ. ಅಲ್ಲಿಂದ ತಮ್ಮ ಗ್ರಾಮಕ್ಕೆ ತೆರಳುವ ಬಸ್ ಗಾಗಿ ಕಾಯುತ್ತಾ ನಿಂತಿದ್ದಾಗ ಶಿವಾನಂದ ಬೈಕ್ ನಲ್ಲಿ ಬಂದಿದ್ದಾನೆ. "ಬೈಕ್ ನಲ್ಲಿ ಕರೆದುಕೊಂಡು ಹೋಗ್ತೀನಿ ಬನ್ನಿ" ಎಂದು ಹತ್ತಿಸಿಕೊಂಡಿದ್ದಾನೆ.[ಸ್ನಾನ ಮಾಡುವುದನ್ನು ಇಣುಕಿ ನೋಡಿ ಹಲ್ಲೆ ಮಾಡಿದ ಭೂಪ..!]

ಮದಿಕೊಪ್ಪಕ್ಕೆ ಹೋಗುವ ಮಾರ್ಗ ಮಧ್ಯೆ ಜನರ ಸಂಚಾರ ಇಲ್ಲದ ಕಡೆ ಆ ಶಿಕ್ಷಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ. ಗಾಬರಿಗೊಂಡು ಆಕೆ ಕೂಗಿಕೊಂಡಿದ್ದಾರೆ. ಆಕೆಯ ಅದೃಷ್ಟಕ್ಕೆ ಇಬ್ಬರು ಸ್ಥಳಕ್ಕೆ ಬಂದಿದ್ದಾರೆ. ಅವರನ್ನು ನೋಡುತ್ತಿದ್ದ ಹಾಗೆ ಶಿವಾನಂದ ಬೈಕ್ ನಲ್ಲಿ ಹೊರಟುಬಿಟ್ಟಿದ್ದಾನೆ. ಆದರೆ ಬೈಕ್ ನ ನಂಬರ್ ನ ಸಹಾಯದಿಂದ ಆತನನ್ನು ಪತ್ತೆ ಹಚ್ಚಿ, ಬಂಧಿಸಲಾಗಿದೆ.[ಬೆಂಗಳೂರಿನಲ್ಲಿ ಯುವಕನ ನಾಲಗೆ ಕತ್ತರಿಸಿದ ದುಷ್ಕರ್ಮಿಗಳು]
ಆರೋಪಿ ಶಿವಾನಂದ್ ಈ ಹಿಂದೆ ಕೂಡ ಇಂಥ ಕೃತ್ಯಕ್ಕೆ ಪ್ರಯತ್ನಿಸಿದ್ದ ಎಂಬ ಸಂಗತಿ ವಿಚಾರಣೆ ವೇಳೆ ಬಾಯಿಬಿಟ್ಟಿದ್ದಾನೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications