ಅಮೆರಿಕಾದಲ್ಲಿ ಗುಂಡೇಟಿಗೆ ಬಲಿಯಾದ ಶ್ರೀನಿವಾಸ್ ಅಂತ್ಯಕ್ರಿಯೆ ಇಂದು
ಅಮೆರಿಕದ ಕನ್ಸಾಸ್ ನಲ್ಲಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಹೈದರಾಬಾದ್ ಮೂಲದ ಎಂಜಿನಿಯರ್ ಶ್ರೀನಿವಾಸ್ ಕುಚಿಭೋತ್ಲಾ ಪಾರ್ಥೀವ ಶರೀರದ ಅಂತ್ಯಕ್ರೀಯೆ ಇಂದು (ಫೆ. 28) ಹೈದರಾಬಾದಿನಲ್ಲಿ ನಡೆಯಲಿದೆ.
ಹೈದರಾಬಾದ್, ಫೆಬ್ರವರಿ 28: ಅಮೆರಿಕಾದ ಕನ್ಸಾಸ್ ನಲ್ಲಿ ದುಷ್ಕರ್ಮಿಗಳ ಗುಂಡಿಗೆ ಬಲಿಯಾದ ಹೈದರಾಬಾದ್ ಮೂಲದ ಎಂಜಿನಿಯರ್ ಶ್ರೀನಿವಾಸ್ ಕುಚಿಭೋತ್ಲಾ ಪಾರ್ಥೀವ ಶರೀರದ ಅಂತ್ಯಕ್ರಿಯೆ ಇಂದು (ಫೆ. 28) ಹೈದರಾಬಾದಿನಲ್ಲಿ ನಡೆಯಲಿದೆ.
ಶ್ರೀನಿವಾಸ್ ಕುಚಿಭೋತ್ಲಾ ಮೃತ ದೇಹ ಸೋಮವಾರ ಭಾರತಕ್ಕೆ ಆಗಮಿಸಿದ್ದು, ಮಂಗಳವಾರ ಬೆಳಿಗ್ಗೆ ಕುಟುಂಬದವರಿಗೆ ಹಸ್ತಾಂತರಿಸಲಾಯಿತು. ನಂತರ ಅಲ್ಲಿಂದ ಹೈದರಾಬಾದ್ ನಗರದ ಹೊರವಲಯದಲ್ಲಿರು ಬಚುಪಲ್ಲಿ ನಿವಾಸಕ್ಕೆ ಕೊಂಡೊಯ್ಯಲಾಯಿತು. ಶ್ರೀನಿವಾಸ್ ಪತ್ನಿ ಸುನಾಯಾನ ದುಮಾಲ ಮತ್ತು ಕೆಲ ಸಂಬಂಧಿಕರು ವಿಮಾನದಲ್ಲಿ ಮೃತ ದೇಹದ ಜತೆ ಆಗಮಿಸಿದರು.[ಗೆಟ್ ಔಟ್ ಎಂದು ಕಿರುಚಿ ಅಮೆರಿಕದಲ್ಲಿ ಭಾರತೀಯನ ಹತ್ಯೆ]

ಇಂದು ಹೈದರಾಬಾದ್ ನಗರದ ಜುಬಿಲಿ ಹಿಲ್ಸ್ ನಲ್ಲಿ ಅಂತ್ಯ ಸಂಸ್ಕಾರ ನಡೆಯಲಿದೆ. ಈಗಾಗಲೇ ಶ್ರೀನಿವಾಸ್ ಅಂತಿಮ ದರ್ಶನ ಪಡೆಯಲು ಸಾವಿರಾರು ಜನ ಆಗಮಿಸಿದ್ದಾರೆ. ಮೃತ ದೇಹಕ್ಕೆ ತೆಲಂಗಾಣ ಸಾರಿಗೆ ಸಚಿವ ಮಹೇಂದ್ರ ರೆಡ್ಡಿ ಅಂತಿಮ ನಮನ ಸಲ್ಲಿಸಿದರು.['ನನಗೆ ಉತ್ತರ ಬೇಕು' ಟ್ರಂಪ್ ಗೆ ಶ್ರೀನಿವಾಸ್ ಪತ್ನಿಯ ಬೇಡಿಕೆ]

ಇನ್ನು ಶೂಟೌಟಿನಲ್ಲಿ ಪಾಲ್ಗೊಂಡ ಆರೋಪಿಗಳನ್ನು ಬಂಧಿಸಿ ತಕ್ಷಣ ಶಿಕ್ಷೆ ನೀಡುವಂತೆ ಭಾರತೀಯ ರಾಯಭಾರಿ ಕಚೇರಿ ಒತ್ತಾಯಿಸಿದ್ದು ಅಮೆರಿಕಾ ಸರಕಾರಕ್ಕೆ ಮನವಿಯನ್ನೂ ಸಲ್ಲಿಸಿದೆ.
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications