ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ತಿರುಪತಿಯ ಪಟಾಕಿ ಗೋದಾಮಿಗೆ ಬೆಂಕಿ, ಇಬ್ಬರು ಬಲಿ

By Mahesh
|
Google Oneindia Kannada News

ತಿರುಪತಿ, ಜುಲೈ 31: ತಿರುಪತಿಯಲ್ಲಿ ಸೋಮವಾರ ಬೆಳಗ್ಗೆ ನಡೆದ ಬೆಂಕಿ ಅಪಘಾತಕ್ಕೆ ಬಾಲಕರಿಬ್ಬರು ಬಲಿಯಾಗಿದ್ದಾರೆ. ತಿರುಪತಿಯ ರೇಣುಗುಂಟ ರಸ್ತೆಯಲ್ಲಿರುವ ಪಟಾಕಿ ಗೋದಾಮಿಗೆ ಬೆಂಕಿ ತಗುಲಿ ಈ ದುರಂತ ಸಂಭವಿಸಿದೆ.

ಈ ದುರ್ಘಟನೆಯಲ್ಲಿ ಗಾಯಗೊಂಡಿರುವ ಓರ್ವ ಮಹಿಳೆಯನ್ನು ಸಮೀಪದ ಆಸ್ಪತ್ರೆಗೆ ಸೇರಿಸಿ ಚಿಕಿತ್ಸೆ ಕೊಡಿಸಲಾಗಿದೆ. ಅವರು ಪ್ರಾಣಾಪಾಯದಿಂದ ಪಾರಾಗಿದ್ದಾರೆ.

2 boys killed in cracker godown fire mishap in Tirupati


ಗೋದಾಮಿನಲ್ಲಿ ಸುಟ್ಟು ಕರಕಲಾದ 10 ಹಾಗೂ 14 ವರ್ಷ ವಯಸ್ಸಿನ ಬಾಲಕರ ಶವವನ್ನು ಹೊರಕ್ಕೆ ತರಲಾಗಿದ್ದು, ಮರಣೋತ್ತರ ಪರೀಕ್ಷೆಗೆ ಕಳಿಸಲಾಗಿದೆ. ಮಿತ್ರ ಗಾಂಧೀಪುರಮ್ ಪ್ರದೇಶದಲ್ಲಿರುವ ಈ ಗೋದಾಮಿಗೆ ತಗುಲಿದ್ದ ಬೆಂಕಿಯನ್ನು ನಂದಿಸಲಾಗಿದೆ.

ಬೆಂಕಿ ತಗುಲಲು ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು ಎಂದು ಶಂಕಿಸಲಾಗಿದೆ. ಗೋದಾಮಿನ ಮಾಲೀಕ ಬಾಬು ಅಲಿಯಾಸ್ ಖಳನಾಯಕ್ ತಲೆಮರೆಸಿಕೊಂಡಿದ್ದಾನೆ. ಮೃತ ಇಬ್ಬರು ಬಾಲಕರು ಹಾಗೂ ಗಾಯಗೊಂಡಿರುವ ಮಹಿಳೆ ಒಂದೇ ಕುಟುಂಬದವರು ಎಂದು ತಿಳಿದು ಬಂದಿದೆ. ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು, ತನಿಖೆ ಮುಂದುವರೆಸಿದ್ದಾರೆ.

English summary
Two boys were charred to death and a woman was injured when crackers stored in a godown here exploded following a fire mishap today, police said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X