ಪಂಜಾಬ್ ನಲ್ಲಿ 8 ಉಗ್ರರು, ಗುಪ್ತಚರ ಇಲಾಖೆಯಿಂದ ದಾಳಿಯ ಎಚ್ಚರಿಕೆ
ಚಂಡೀಗಢ, ಆಗಸ್ಟ್ 31: ಪಂಜಾಬ್ ರಾಜ್ಯದಲ್ಲಿ 8 ಜೈಷ್ ಎ ಮೊಹಮ್ಮದ್ ಉಗ್ರರು ಅಡಗಿಕೊಂಡಿದ್ದಾರೆ. ಜಮ್ಮು ಮತ್ತು ಕಾಶ್ಮೀರದ ಪೂಂಛ್ ಭಾಗದಿಂದ ಗಡಿ ದಾಟಿ ಈ ಉಗ್ರರು ಭಾರತದೊಳಕ್ಕೆ ಒಳನುಸುಳಿದ್ದು ಸದ್ಯ ಪಂಜಾಬ್ ನಲ್ಲಿದ್ದಾರೆ. ಇವರೆಲ್ಲಾ ಪಠಾಣ್ ಕೋಟ್ ರೀತಿಯ ದಾಳಿಗೆ ಯೋಜನೆ ರೂಪಿಸಿದ್ದಾರೆ ಎಂದು ಗುಪ್ತಚರ ಇಲಾಖೆ ಮುನ್ನೆಚ್ಚರಿಕೆ ನೀಡಿದೆ.
ವಿಶೇಷವೆಂದರೆ ಈ 8 ಜನ ಉಗ್ರರು ಕಳೆದ ವಾರ ಪುಲ್ವಾಮದಲ್ಲಿ ದಾಳಿ ನಡೆಸಿದ 11 ಜನರ ತಂಡದ ಒಂದು ಭಾಗ ಎಂದು ತಿಳಿದು ಬಂದಿದೆ. ಪುಲ್ವಾಮಾ ದಾಳಿಯಲ್ಲಿ 8 ಸೈನಿಕರು ಅಸುನೀಗಿದ್ದರು.

ಪಂಜಾಬ್ ನಲ್ಲಿ ಉಗ್ರರು ಇರುವ ಬಗ್ಗೆ ಪೊಲೀಸರಿಗೆ ಮುನ್ನೆಚ್ಚರಿಕೆ ನೀಡಲಾಗಿದ್ದು ಭದ್ರತೆಯನ್ನು ಬಲಗೊಳಿಸುವಂತೆ ಸೂಚನೆ ನೀಡಲಾಗಿದೆ. ಇನ್ನು ಉಗ್ರರು ಗುರುದಾಸ್ ಪುರದತ್ತ ಹೊರಟಿದ್ದಾರೆ ಎಂದು ಗುಪ್ತಚರ ಇಲಾಖೆ ಸ್ಪಷ್ಟ ಸಂದೇಶ ನೀಡಿದೆ.
ಸದ್ಯ ಪಾಕಿಸ್ತಾನ ಜೈಷ್ ಎ ಮೊಹಮ್ಮದ್ ಉಗ್ರರನ್ನೇ ಭಾರತಕ್ಕೆ ಕಳುಹಿಸುತ್ತಿದೆ ಎನ್ನಲಾಗಿದೆ. ಪಠಾನ್ ಕೋಟ್, ಸಂಸತ್ ದಾಳಿಯಂಥ ಪ್ರಮುಖ ದಾಳಿಯನ್ನು ಈ ಸಂಘಟನೆ ನಡೆಸುತ್ತಾ ಬಂದಿದ್ದು, ಜೈಷ್ ಎ ಮೊಹಮ್ಮದ್ ದೊಡ್ಡ ದೊಡ್ಡ ದಾಳಿಗಳಿಗೆ ಹೆಸರುವಾಸಿಯಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications