ತ್ವರಿತ ಅಲರ್ಟ್ ಗಳಿಗಾಗಿ
For Daily Alerts
ನಾಲ್ವರು ಉಗ್ರರನ್ನು ಹೊಡೆದುರುಳಿಸಿದ ಭಾರತೀಯ ಯೋಧರು
ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಗಡಿ ನುಸುಳಲು ಯತ್ನಿಸುತ್ತಿದ್ದ ನಾಲ್ವರು ಉಗ್ರರನ್ನು ಭಾರತೀಯ ಗಡಿ ಭದ್ರತಾ ಪಡೆ ಯೋಧರು ಹೊಡೆದುರುಳಿಸಿದ್ದಾರೆ.
ಜಮ್ಮು ಮತ್ತು ಕಾಶ್ಮೀರ, ಏಪ್ರಿಲ್ 10 : ಜಮ್ಮು ಮತ್ತು ಕಾಶ್ಮೀರದ ಕುಪ್ವಾರದಲ್ಲಿ ಗಡಿ ನುಸುಳಲು ಯತ್ನಿಸುತ್ತಿದ್ದ ನಾಲ್ವರು ಉಗ್ರರನ್ನು ಭಾರತೀಯ ಗಡಿ ಭದ್ರತಾ ಪಡೆ ಯೋಧರು ಹೊಡೆದುರುಳಿಸಿದ್ದಾರೆ.
ಗಡಿಯಲ್ಲಿ ಕಾವಲು ಕಾಯುತ್ತಿದ್ದ ಯೋಧರು ಉಗ್ರರು ಗಡಿ ನುಸುಳುತ್ತಿದ್ದನ್ನು ಗಮನಿಸಿ ಅವರ ಮೇಲೆ ಗುಂಡಿನ ದಾಳಿ ನಡೆಸಿದ್ದಾರೆ. ದಾಳಿಯಲ್ಲಿ ನಾಲ್ವರು ಉಗ್ರರು ಮೃತಪಟ್ಟಿದ್ದಾರೆ.
ಶ್ರೀನಗರದ ಬುದ್ಗಾಮ್ ಜಿಲ್ಲೆಯ ಲೋಕಸಭೆ ಉಪ ಚುನಾವಣೆ ಮತದಾನದ ವೇಳೆ ಪ್ರತಿಭಟನಾಕಾರರು ಮತ್ತು ಗಡಿ ಭದ್ರತಾ ಯೋಧರ ನಡುವಿನ ಸಂಘರ್ಷವನ್ನು ಅಸ್ತ್ರವಾಗಿಸಿಕೊಂಡು ಮತ್ತೊಷ್ಟು ಗಲಭೆ ಸೃಷ್ಟಿಸಲು ಈ ಉಗ್ರರು ಗಡಿ ನುಸುಳುತ್ತಿದ್ದರು ಎನ್ನಲಾಗಿದೆ.
#FLASH: Four Pakistani infiltrators killed by Army in Kupwara's Keran (Jammu and Kashmir), operation underway pic.twitter.com/26K9DrqEPJ
— ANI (@ANI_news) April 10, 2017
ಮೃತ ಉಗ್ರರು ಲಷ್ಕರ್ ಎ ತೋಯ್ಬಾ ಸಂಘಟನೆಯ ಉಗ್ರರು ಎಂದು ಹೇಳಲಾಗುತ್ತಿದ್ದು ಭಾರತೀಯ ಸೇನೆ ಕಾರ್ಯಾಚರಣೆಯನ್ನು ಮುಂದುವರೆಸಿದೆ.
Comments
English summary
Four terrorists who were trying to cross over into Kashmir were killed by security forces. The four terrorists suspected to be part of the Lashkar-e-Tayiba were trying to gain entry through Keran when they were intercepted by security forces and killed.