'ಆಕಸ್ಮಿಕ ಪಿಎಂ' ಎಂಎಂ ಸಿಂಗ್ ಪಾತ್ರದಲ್ಲಿ ಅನುಪಮ್ ಖೇರ್
ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಪಾತ್ರದಲ್ಲಿ ನಟ ಅನುಪಮ್ ಖೇರ್ ಅವರು ಕಾಣಿಸಿಕೊಳ್ಳುವುದು ಖಾತ್ರಿಯಾಗಿದೆ. 2019ರ ಲೋಕಸಭೆ ಚುನಾವಣೆಗೂ ಕೆಲ ತಿಂಗಳುಗಳ ಮೊದಲು ಚಿತ್ರ ರಿಲೀಸ್ ಆಗುವ ಸಾಧ್ಯತೆಯಿದೆ.
ನವದೆಹಲಿ, ಜೂನ್ 06: ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಜೀವನ ಕುರಿತ ಚಿತ್ರ ನಿರ್ಮಾಣ ಹಂತದಲ್ಲಿರುವುದು ತಿಳಿದಿರಬಹುದು. ಈಗ ಚಿತ್ರದ ಮುಖ್ಯಪಾತ್ರಧಾರಿ, ಚಿತ್ರ ರಿಲೀಸ್ ಡೇಟ್ ಬಗ್ಗೆ ಮಾಹಿತಿ ಹೊರಬಂದಿದೆ.
ಮುಖ್ಯ ಪಾತ್ರದಲ್ಲಿ ನಟ ಅನುಪಮ್ ಖೇರ್ ಅವರು ಕಾಣಿಸಿಕೊಳ್ಳುವುದು ಖಾತ್ರಿಯಾಗಿದೆ. 2019ರ ಲೋಕಸಭೆ ಚುನಾವಣೆಗೂ ಕೆಲ ತಿಂಗಳುಗಳ ಮೊದಲು ಚಿತ್ರ ರಿಲೀಸ್ ಆಗುವ ಸಾಧ್ಯತೆಯಿದೆ.2017ರ ವೇಳೆಗೆ ಚಿತ್ರ ಬಿಡುಗಡೆಯಾಗುವ ನಿರೀಕ್ಷೆಯಿತ್ತು.[ಮಾಜಿ ಪ್ರಧಾನಿ ಸಿಂಗ್ ಟ್ರಾವೆಲ್ ಶೀಟ್ ಬಹಿರಂಗ]

ಮನಮೋಹನ್ ಸಿಂಗ್ ಆಡಳಿತಾವಧಿ 2004 ರಿಂದ 2008 ರವರೆಗೆ ಅವರ ಮಾಧ್ಯಮ ಸಲಹೆಗಾರರಾಗಿದ್ದ ಸಂಜಯ್ ಬರು ಅವರ 'ದಿ ಆಕ್ಸಿಡೆಂಟಲ್ ಪ್ರೈಮ್ ಮಿನಿಸ್ಟರ್ : ಮೇಕಿಂಗ್ ಆಂಡ್ ಅನ್ವೆುೕಕಿಂಗ್ ಆಫ್ ಮನಮೋಹನ್ ಸಿಂಗ್' ಎಂಬ ಕಾದಂಬರಿ ಕಮ್ ಜೀವನಚರಿತ್ರೆ ಈಗಾಗಲೇ ಸಾಕಷ್ಟು ಸದ್ದು ಮಾಡಿದೆ. ಈಗ ಇದೇ ಪುಸ್ತಕ ಆಧಾರಿತ ಚಿತ್ರ ನಿರ್ಮಾಣ ಹಂತದಲ್ಲಿದೆ.
ಮನಮೋಹನ್ಸಿಂಗ್ ಹೇಗೆ ಕಾಂಗ್ರೆಸ್ ಯುಪಿಎ ಸರ್ಕಾರದ ಕೈಗೊಂಬೆಯಾಗಿದ್ದರು, ಮಾಜಿ ಪ್ರಧಾನಿ ಪಿವಿ ನರಸಿಂಹ ರಾವ್ ಅವರಿಗೆ ಸರ್ಕಾರಿ ಗೌರವದಿಂದ ಅಂತ್ಯಸಂಸ್ಕಾರ ನಡೆಸಲಿಲ್ಲ ಏಕೆ? ಸೇರಿದಂತೆ ಅನೇಕ ಅಂಶಗಳು ಚಿತ್ರಿತವಾಗಲಿವೆ. ಈ ಚಿತ್ರವು 12 ಕ್ಕೂ ಹೆಚ್ಚು ಭಾಷೆಯಲ್ಲಿ ಬಿಡುಗಡೆಗೊಳ್ಳಲಿದೆ ಎಂದು ಚಿತ್ರ ನಿರ್ಮಾಣ ಮಾಡುತ್ತಿರುವ ಸುನಿಲ್ ಬೊಹ್ರಾ ಮತ್ತು ತಂಡದವರು ಎಕಾನಾಮಿಕ್ಸ್ ಟೈಮ್ಸ್ ಗೆ ತಿಳಿಸಿದ್ದಾರೆ.
ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಪಾತ್ರವನ್ನು ಯಾರು ನಿರ್ವಹಿಸಲಿದ್ದಾರೆ ಎಂಬ ಕುತೂಹಲ ಎಲ್ಲರಲ್ಲೂ ಮನೆ ಮಾಡಿದೆ. ವಿಜಯ್ ರತ್ನಾಕರ್ ಅವರು ನಿರ್ದೇಶನ ಮಾಡುತ್ತಿದ್ದು, ರಾಷ್ಟ್ರ ಪ್ರಶಸ್ತಿ ವಿಜೇತ ಹನ್ಸಲ್ ಮೆಹ್ತಾ ಅವರು ಚಿತ್ರಕಥೆ ಬರೆದಿದ್ದಾರೆ.
-
Pratham: ನಟ ಪ್ರಥಮ್ ಬೆಂಗಳೂರು ತೊರೆಯಲು ದರ್ಶನ್ ಅಭಿಮಾನಿಗಳ ಗಲಾಟೆ ಕಾರಣವೇ? ಅಸಲಿ ಕಾರಣ ಬಿಚ್ಚಿಟ್ಟ ಒಳ್ಳೆ ಹುಡುಗ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್












Click it and Unblock the Notifications