ಬಜೆಟ್ ಅಧಿವೇಶನ ಆರಂಭ, ಸದನ ಉದ್ದೇಶಿಸಿ ಪ್ರಣಬ್ ಭಾಷಣ
ಕಪ್ಪುಹಣ ಮತ್ತು ಭ್ರಷ್ಟಾಚಾರದ ವಿರುದ್ಧದ ನಮ್ಮ ಸರಕಾರದ ಹೋರಾಟ ನಡೆದಿರುವಾಗ ದೇಶದ ಜನರು, ಅದರಲ್ಲಿಯೂ ಬಡಜನರು ತೋರಿರುವ ಸಂಯಮ ನಿಜಕ್ಕೂ ಶ್ಲಾಘನೀಯ - ಪ್ರಣಬ್ ಮುಖರ್ಜಿ.
ನವದೆಹಲಿ, ಜನವರಿ 31 : ಉತ್ತರಪ್ರದೇಶ ಸೇರಿದಂತೆ 5 ರಾಜ್ಯಗಳ ಚುನಾವಣೆ ಹೊಸ್ತಿಲಲ್ಲೇ ಇರುವಾಗ, ಅಪನಗದೀಕರಣದ ನಂತರ ಮಂಡಿಸಲಾಗುತ್ತಿರುವ ಕೇಂದ್ರ ಬಜೆಟ್ ಈಬಾರಿ ಎಲ್ಲಿಲ್ಲದ ಮಹತ್ವ ಪಡೆದುಕೊಂಡಿದೆ.
ಮಂಗಳವಾರ ಬೆಳಿಗ್ಗೆ 11 ಗಂಟೆಗೆ ಬಜೆಟ್ ಅಧಿವೇಶನ ಆರಂಭವಾಗಿದ್ದು, ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಅವರು ಉಭಯ ಸದನವನ್ನುದ್ದೇಶಿಸಿ ಬಜೆಟ್ ಮಂಡನೆಯ ಪೂರ್ವಭಾವಿ ಭಾಷಣವನ್ನು ಮಾಡುತ್ತಿದ್ದಾರೆ.
ಈ ಆಯವ್ಯಯದ ವೈಶಿಷ್ಟ್ಯವೇನೆಂದರೆ, ಇದೇ ಮೊದಲ ಬಾರಿ ಕೇಂದ್ರ ಬಜೆಟ್ ಮತ್ತು ರೈಲ್ವೆ ಬಜೆಟ್ಟನ್ನು ಒಗ್ಗೂಡಿಸಿ ಒಂದೇ ಬಜೆಟ್ಟನ್ನು ಮಂಡಿಸಲಾಗುತ್ತಿದೆ ಎಂದು ಪ್ರಣಬ್ ಮುಖರ್ಜಿ ಅವರು ತಮ್ಮ ಭಾಷಣವನ್ನು ಆರಂಭಿಸಿದರು.

ಭಾಷಣದ ಮುಖ್ಯಾಂಶಗಳು
* ಶ್ರಮಿಕ ವರ್ಗಕ್ಕಾಗಿ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಸರಕಾರ ಹಮ್ಮಿಕೊಂಡಿದೆ. ಶ್ರಮೇವ ಜಯತೆ ಎಂಬುದು ಸರಕಾರದ ನೀತಿಗಳಲ್ಲಿ ಪ್ರಮುಖವಾಗಿದೆ.
* ನಮ್ಮ ದೇಶದ ಜನಸಂಖ್ಯೆಯ ಶೇ.65ಕ್ಕೂ ಹೆಚ್ಚಿನವರು 35 ವಯೋಮಾನದವರಿಗಿಂತ ಕೆಳಗಿದ್ದಾರೆ. ಯುವಕ ಯುವತಿಯರೇ ನಮ್ಮ ಶಕ್ತಿ. ಯುವಜನತೆಯಲ್ಲಿ ನಾನಾವಿಧದ ನೈಪುಣ್ಯತೆ ಬೆಳೆಯಲು, ಅವರಿಗೆ ಉದ್ಯೋಗ ಕಲ್ಪಿಸಲು ಸರಕಾರ ಬದ್ಧವಾಗಿದೆ.
* ಕಪ್ಪುಹಣ ಮತ್ತು ಭ್ರಷ್ಟಾಚಾರದ ವಿರುದ್ಧದ ನಮ್ಮ ಸರಕಾರದ ಹೋರಾಟ ನಡೆದಿರುವಾಗ ದೇಶದ ಜನರು, ಅದರಲ್ಲಿಯೂ ಬಡಜನರು ತೋರಿರುವ ಸಂಯಮ ನಿಜಕ್ಕೂ ಶ್ಲಾಘನೀಯ.
A Government that is dedicated to the welfare of the poor and marginalised. pic.twitter.com/0k4fb7YGGd
— PMO India (@PMOIndia) January 31, 2017
* ಬಡವರು, ಪೀಡಿತರು, ದಲಿತರು ಮತ್ತು ವಂಚಿತರ ಕಲ್ಯಾಣವೇ ನಮ್ಮ ಸರಕಾರದ ಮೂಲಮಂತ್ರ. ಬಡವರ ಜೀವನಮಟ್ಟ ಸುಧಾರಿಸಲು, ಜನರಿಗೆ ಸೂರು ಕಲ್ಪಿಸಲು ಸರಕಾರ ಬದ್ಧವಾಗಿದೆ.
* ಎಲ್ಲರ ವಿಕಾಸ ಎಂಬ ಕೇಂದ್ರ ಸರಕಾರದ ನೀತಿಗೆ ನಾವು ಬದ್ಧರಾಗಿದ್ದೇವೆ. ಸ್ವಯಂಪ್ರೇರಿತರಾಗಿ ಎಲ್ ಪಿಜಿ ಸಬ್ಸಿಡಿ ಬಿಟ್ಟುಕೊಟ್ಟಿದ್ದು ದೇಶದ ಬಡಜನತೆಗೆ ಸಹಾಯವಾಗಿದೆ.
* ಮಹಿಳೆಯರೂ ಸಮಾನ ಅವಕಾಶಕ್ಕೆ ಅರ್ಹರು. ನಾರಿಶಕ್ತಿ ನಮ್ಮ ದೇಶದ ಬೆಳವಣಿಗೆಯ ಅವಿಭಾಜ್ಯ ಅಂಗ. ಪಿವಿ ಸಿಂಧು, ಸಾಕ್ಷಿ ಮಲಿಕ್, ದೀಪಾ ಕರ್ಮಕರ್ ನಮ್ಮ ನಾರಿಯರ ಶಕ್ತಿಯ ಸಂಕೇತವಾಗಿದ್ದಾರೆ. ಅಲ್ಲದೆ, ಮಹಿಳೆಯರ ಮುಂದಾಳತ್ವದ ಸರಕಾರಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು.
Focus on holistic development of agriculture sector. pic.twitter.com/SMeUj23LKL
— PMO India (@PMOIndia) January 31, 2017
* ರಾಷ್ಟ್ರದ ರೈತರ ಜೀವನ ಸುಧಾರಿಸಲು ನಮ್ಮ ಸರಕಾರ ಹಲವಾರು ಕ್ರಮಗಳನ್ನು ತೆಗೆದುಕೊಂಡಿದೆ. ಕೃಷಿ ಉದ್ಯಮದ ಅಮೂಲಾಗ್ರ ಬೆಳವಣಿಗೆಯ ಮೇಲೆ ಹೆಚ್ಚಿನ ಒತ್ತು ನೀಡಲಾಗುತ್ತದೆ.
-
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ












Click it and Unblock the Notifications