ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಹಿಂದೂ ಯುವ ವಾಹಿನಿಯಿಂದ ಮತಾಂತರ ಆರೋಪ, ಚರ್ಚ್ ಪ್ರಾರ್ಥನೆಗೆ ತಡೆ

ಉತ್ತರ ಪ್ರದೇಶದಲ್ಲಿ ಬ್ರಿಟಿಷರ ಕಾಲದಿಂದ ಇರುವ ಚರ್ಚ್ ವೊಂದರ ಮೇಲೆ ಮತಾಂತರದ ಆರೋಪ ಮಾಡಿದ ಕಾರಣಕ್ಕೆ ಅಲ್ಲಿನ ಪ್ರಾರ್ಥನಾ ಸಭೆಯನ್ನು ನಿಲ್ಲಿಸಿದ ಪೊಲೀಸರು ವಿಚಾರಣೆ ನಡೆಸಿದ್ದಾರೆ. ಆರೋಪ ಮಾಡಿದವರು ಹಿಂದೂ ಯುವ ವಾಹಿನಿ ಸದಸ್ಯರು

By ವಿಕಾಸ್ ನಂಜಪ್ಪ
|
Google Oneindia Kannada News

ಲಖನೌ, ಏಪ್ರಿಲ್ 8: ಮತಾಂತರ ಮಾಡಲಾಗುತ್ತಿದೆ ಎಂಬ ದೂರು ಬಂದ ಹಿನ್ನೆಲೆಯಲ್ಲಿ ವಿಚಾರಣೆ ಮಾಡುವ ಕಾರಣಕ್ಕೆ ಉತ್ತರ ಪ್ರದೇಶದ ಪೊಲೀಸರು ಚರ್ಚ್ ನಲ್ಲಿ ಪ್ರಾರ್ಥನೆ ನಿಲ್ಲಿಸಿದ್ದಾರೆ. ಮಹಾರಾಜ್ ಗಂಜ್ ಜಿಲ್ಲಾ ಪೊಲೀಸರ ಬಳಿ ಈ ಬಗ್ಗೆ ಹಿಂದೂ ಯುವ ವಾಹಿನಿಯವರು ಆರೋಪ ಮಾಡಿದ್ದರು.

ಮತಾಂತರ ಮಾಡುವ ಉದ್ದೇಶದಿಂದಲೇ ಪ್ರಾರ್ಥನಾ ಸಭೆ ನಡೆಸಲಾಗುತ್ತಿದೆ ಎಂದು ಹಿಂದೂ ಯುವ ವಾಹಿನಿಯ ಗುಂಪು ಆರೋಪ ಮಾಡಿತ್ತು. ಆದರೆ ಈ ಆರೋಪವನ್ನು ಚರ್ಚ್ ನವರು ನಿರಾಕರಿಸಿದ್ದಾರೆ. ಆದರೆ ಪೊಲೀಸರು ತಕ್ಷಣವೇ ಕಾರ್ಯಾಚರಣೆಗೆ ಇಳಿದು, ಈ ವಿಚಾರದ ಬಗ್ಗೆ ವಿಚಾರಣೆ ನಡೆಸಿದ್ದಾರೆ.[ಮತಾಂತರಕ್ಕಾಗಿ ಕ್ರಿಶ್ಚಿಯನ್ ಸಂಘಟನೆಗಳಿಂದ ಎನ್ ಜಿಒಗಳಿಗೆ 17 ಸಾವಿರ ಕೋಟಿ]

Church prayer stopped in UP over conversion charges

ಪೊಲೀಸರ ವಿಚಾರಣೆ ವೇಳೆ ಸಹ ಚರ್ಚ್ ನಲ್ಲಿ ಮತಾಂತರ ನಡೆಯುತ್ತಿರುವ ಬಗ್ಗೆ ಯಾವುದೇ ಸಾಕ್ಷ್ಯಾಧಾರ ದೊರೆತಿಲ್ಲ ಎಂದು ತಿಳಿದುಬಂದಿದೆ. ಆರೋಪ ಕೇಳಿಬಂದಿರುವ ಚರ್ಚ್ ಬ್ರಿಟಿಷರ ಕಾಲದಲ್ಲಿ ಆರಂಭವಾಗಿದ್ದು, ಇದೇ ಮೊದಲ ಬಾರಿಗೆ ಮತಾಂತರದ ಆರೋಪ ಕೇಳಿಬಂದಿದೆ.[ಮದರ್ ತೆರೇಸಾ ಭಾರತಕ್ಕೆ ಯಾಕೆ ಬಂದಿದ್ರು? ಆಸ್ಕ್ ಆರೆಸ್ಸೆಸ್]

ಅಂದ ಹಾಗೆ, ಹಿಂದೂ ಯುವ ವಾಹಿನಿ ಸಂಘಟನೆಯ ಸ್ಥಾಪಕರು ಈಗ ಉತ್ತರ ಪ್ರದೇಶದ ಮುಖ್ಯಮಂತ್ರಿಯಾಗಿರುವ ಯೋಗಿ ಆದಿತ್ಯನಾಥ್ ಎಂಬುದನ್ನು ಇಲ್ಲಿ ಸ್ಮರಿಸಬಹುದು.

English summary
The police in Uttar Pradesh halted a Church prayer to investigate charges of religious conversion. The allegations were made before the Maharajganj district police by the Hindu Yuva Vahini.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X