ಏನಿದು ಕಾಂಗ್ರೆಸ್ ಆಕ್ರೋಶ: ಮಹಾತ್ಮ ಗಾಂಧಿ ಬಗ್ಗೆ ಅಮಿತ್ ಶಾ ಹೇಳಿದ್ದೇನು
ರಾಷ್ಟ್ರಪಿತ ಮಹಾತ್ಮ ಗಾಂಧಿ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ಅವಹೇಳನಕಾರಿ ಪದ ಬಳಸಿದ್ದಾರೆಂದು, ಶಾ ಕ್ಷಮೆಗೆ ಪಟ್ಟು ಹಿಡಿದ ಕಾಂಗ್ರೆಸ್.
ರಾಯಪುರ, ನವದೆಹಲಿ, ಜೂ 10: ರಾಷ್ಟ್ರಪಿತ ಮಹಾತ್ಮ ಗಾಂಧಿಯ ಬಗ್ಗೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಶಾ ನೀಡಿರುವ ಹೇಳಿಕೆ ಹೊಸ ವಿವಾದವನ್ನು ಹುಟ್ಟುಹಾಕಿದೆ. ಅಮಿತ್ ಶಾ ಹೇಳಿಕೆಯನ್ನು ವಿರೋಧಿಸಿರುವ ಕಾಂಗ್ರೆಸ್ ಕ್ಷಮೆಯಾಚನೆಗೆ ಪಟ್ಟು ಹಿಡಿದಿದೆ.
ಮುಂದಿನ ವರ್ಷ ನಡೆಯಲಿರುವ ಛತ್ತೀಸಗಢ ವಿಧಾನಸಭೆಗೆ ಪೂರ್ವತಯಾರಿಗಾಗಿ ಮೂರು ದಿನಗಳ ಪ್ರವಾಸದಲ್ಲಿರುವ ಅಮಿತ್ ಶಾ, ಮಹಾತ್ಮ ಗಾಂಧಿ ಒಬ್ಬ 'ಚತುರ್ ಬನಿಯಾ' ಆಗಿದ್ದರು ಎಂದು ಶಾ ಹೇಳಿದ್ದರು.
ಅಮಿತ್ ಶಾ ಅವರ ಚತುರ್ ಬನಿಯಾ (ಬನಿಯಾ ಎನ್ನುವುದೊಂದು ಜಾತಿ) ಹೇಳಿಕೆಗೆ, ಅಮಿತ್ ಶಾ ಒಬ್ಬ 'ಅಧಿಕಾರದ ವ್ಯಾಪಾರಿ' ಎಂದು ಕಾಂಗ್ರೆಸ್ ತಿರುಗೇಟು ನೀಡಿದೆ.
ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ಎಡಪಕ್ಷದ ಪ್ರಕಾಶ್ ಕಾರಟ್, ಸುಧಾಕರ ರೆಡ್ಡಿ ಸೇರಿದಂತೆ ಹಲವು ಮುಖಂಡರು ಅಮಿತ್ ಶಾ ಹೇಳಿಕೆಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಾರೆ.
ಅಮಿತ್ ಶಾ ಹೇಳಿಕೆ ಸಾಮಾಜಿಕ ತಾಣದಲ್ಲಿ ಟ್ರೆಂಡಿಂಗ್ ನಲ್ಲಿದ್ದು, ಪರವಿರೋಧ ಅಭಿಪ್ರಾಯಗಳು ವ್ಯಕ್ತವಾಗುತ್ತಿವೆ. ಅಮಿತ್ ಶಾ, ಕಾಂಗ್ರೆಸ್ ಮತ್ತು ಮಹಾತ್ಮ ಗಾಂಧಿ ಬಗ್ಗೆ ಹೇಳಿದ್ದೇನು, ಮುಂದೆ ಓದಿ..

ಕಾರ್ಯಕರ್ತರನ್ನು ಉದ್ದೇಶಿಸಿ ಶಾ ಭಾಷಣ
ರಾಯಪುರದಲ್ಲಿ ಪಕ್ಷದ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಅಮಿತ್ ಶಾ, ಮಹಾತ್ಮ ಗಾಂಧಿ ಬಹಳ ಚತುರ ಬನಿಯಾ ಆಗಿದ್ದರು. ಕಾಂಗ್ರೆಸ್ ಯಾವ ಸಿದ್ದಾಂತದ ಮೇಲೂ ಹುಟ್ಟಿದ ಪಕ್ಷವಲ್ಲ. ದೇಶದ ಸ್ವಾತಂತ್ರ್ಯ ಹೋರಾಟಕ್ಕಾಗಿ ಹುಟ್ಟಿದ ಪಕ್ಷ - ಅಮಿತ್ ಶಾ.

ಕಾಂಗ್ರೆಸ್ ವಿಸರ್ಜಿಸುವಂತೆ ಗಾಂಧಿ ಸೂಚಿಸಿದ್ದರು
ನಿರ್ದಿಷ್ಠ ಉದ್ದೇಶವನ್ನು ಇಟ್ಟುಕೊಂಡು ಬಿಜೆಪಿ ಸ್ಥಾಪನೆಗೊಂಡಿತ್ತು. ಸ್ವಾತಂತ್ರ್ಯ ಬಂದ ನಂತರ ಕಾಂಗ್ರೆಸ್ ವಿಸರ್ಜಿಸುವಂತೆ ಗಾಂಧಿ ಸೂಚಿಸಿದ್ದರೂ ವಿಸರ್ಜನೆಗೊಂಡಿರಲಿಲ್ಲ. ಈಗ ಕಾಂಗ್ರೆಸ್ ನಿರ್ನಾಮವಾಗುವ ಕೆಲಸವನ್ನು ಈಗಿನ ಗಾಂಧಿಗಳು ಮಾಡುತ್ತಿದ್ದಾರೆ - ಅಮಿತ್ ಶಾ.
|
ಅಮಿತ್ ಶಾ ಕ್ಷಮೆಯಾಚಿಸಬೇಕು, ಕಾಂಗ್ರೆಸ್
ರಾಷ್ಟ್ರಪಿತ ಮಹಾತ್ಮ ಗಾಂಧಿಯವರನ್ನು ಅವಮಾನಿಸಿದ್ದಕ್ಕಾಗಿ ಅಮಿತ್ ಶಾ ಕ್ಷಮೆಯಾಚಿಸಬೇಕೆಂದು ಕಾಂಗ್ರೆಸ್ ಮುಖಂಡ ಸಂಜಯ್ ನಿರುಪಮ್ ಆಗ್ರಹಿಸಿದ್ದಾರೆ.
|
ಏನು ಬೇಕಾದರೂ ಹೇಳಿಕೆ ನೀಡಬಹುದು
ಅಂಬೇಡ್ಕರ್ ಹೊರತಾಗಿ ದೇಶ, ದೇಶದ ಯಾವ ಮುಖಂಡರ ಮೇಲೆ ಏನು ಬೇಕಾದರೂ ಹೇಳಿಕೆ ನೀಡಬಹುದು - ರಾಜದೀಪ್ ಸರ್ದೇಸಾಯಿ
|
ಸಚಿನ್ ಪೈಲಟ್ ಟ್ವೀಟ್
ಮಹಾತ್ಮ ಗಾಂಧಿ ಜಾತಿ, ಕೋಮಿಗಿಂತ ಮೇಲಾದವರು, ಬಿಜೆಪಿ ಕ್ಷಮೆಯಾಚಿಸಲಿ - ಸಚಿನ್ ಪೈಲಟ್
|
ಕಾಂಗ್ರೆಸ್ ಮಾಡಿರುವ ಟ್ವೀಟ್
ಅಮಿತ್ ಶಾ, ಮಹಾತ್ಮ ಗಾಂಧಿ ಬಗ್ಗೆ ನೀಡಿರುವ ಹೇಳಿಕೆಗೆ ತಿರುಗೇಟು ನೀಡಲು ಸೂಕ್ತವಾದ ಕೋಟ್ ಯಾವುದು?
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications