ಸಿಬಿಐ ಮುಖ್ಯಸ್ಥರಾಗಿ ಅಲೋಕ್ ವರ್ಮ ನೇಮಕ
ದೆಹಲಿ ಪೊಲೀಸ್ ಆಯುಕ್ತ ಅಲೋಕ್ ವರ್ಮ ಅವರನ್ನು ಸಿಬಿಐ ಮುಖ್ಯಸ್ಥರಾಗಿ ನೇಮಿಸಲಾಗಿದೆ. ಪ್ರಧಾನಿ ಮೋದಿ ಅವರು ಗುರುವಾರ ಸಂಜೆ ನೇಮಕಕ್ಕೆ ಸಮ್ಮತಿ ಸೂಚಿಸಿದ್ದಾರೆ.
ನವದೆಹಲಿ, ಜನವರಿ 19: ದೆಹಲಿ ಪೊಲೀಸ್ ಆಯುಕ್ತ ಅಲೋಕ್ ವರ್ಮ ಅವರನ್ನು ಸಿಬಿಐ ಮುಖ್ಯಸ್ಥರಾಗಿ ನೇಮಿಸಲಾಗಿದೆ. ಪ್ರಧಾನಿ ಮೋದಿ ಅವರು ಗುರುವಾರ ಸಂಜೆ ನೇಮಕಕ್ಕೆ ಸಮ್ಮತಿ ಸೂಚಿಸಿದ್ದಾರೆ. ಮುಂದಿನ ಎರಡು ವರ್ಷ ಅವಧಿಗೆ ಮುಖ್ಯಸ್ಥರಾಗಿ ಅಲೋಕ್ ಅವರು ಕಾರ್ಯನಿರ್ವಹಿಸಲಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ, ಲೋಕಸಭೆಯ ಪ್ರತಿಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಹಾಗೂ ಸುಪ್ರೀಂ ಕೋರ್ಟ್ ನ ಮುಖ್ಯ ನ್ಯಾಯಮೂರ್ತಿ ಖೇಹರ್ ಅವರುಳ್ಳ ಆಯ್ಕೆ ಸಮಿತಿಯು ಸೋಮವಾರ ಸಂಜೆ ಸಭೆ ಸೇರಿ ಆಯ್ಕೆ ಬಗ್ಗೆ ನಿರ್ಣಯ ಕೈಗೊಂಡಿದ್ದರು. ಮೊದಲಿಗೆ ಅಲೋಕ್ ಬಗ್ಗೆ ಅಪಸ್ವರ ಹಾಡಿದ್ದ ಕಾಂಗ್ರೆಸ್ ನಂತರ ತನ್ನ ನಿಲುವು ಬದಲಾಯಿಸಿತು.

ಅಲೋಕ್ ವರ್ಮಾ ಮಾತ್ರವಲ್ಲದೆ, ಹಿರಿಯ ಐಪಿಎಸ್ ಮಹಿಳಾ ಅಧಿಕಾರಿ ಅರ್ಚನಾ ರಾಮಸುಂದರಂ ಸೇರಿದಂತೆ ಹಿರಿಯ ಐಪಿಎಸ್ ಅಧಿಕಾರಿಗಳಾದ ಎಂ.ಸಿ. ಬೊರ್ವಾಂಕರ್, ಕೃಷ್ಣಾ ಚೌಧರಿ, ಆರ್.ಕೆ. ದತ್ತಾ, ಅರುಣಾ ಬಹುಗಣ ಹಾಗೂ ಸತೀಶ್ ಮಾಥುರ್ ಅವರ ಹೆಸರುಗಳು ಕೇಳಿಬಂದಿತ್ತು.
#JustNow: PM approves appointment of Alok Verma as CBI Chief for 2 years.
— ET NOW (@ETNOWlive) January 19, 2017
ವಿಶೇಷವಾಗಿ, 1979 ಹಾಗೂ 1982 ಬ್ಯಾಚ್ ಗಳ ಕೆಲ ಹಿರಿಯ ಐಪಿಎಸ್ ಅಧಿಕಾರಿಗಳ ಬಗ್ಗೆ ಸರ್ಕಾರ ಗಮನ ಹರಿಸಿತ್ತು. 1976ರ ತಂಡದ ಅಧಿಕಾರಿ ಆಗಿರುವ ಅಲೋಕ್ ವರ್ಮ ಸೆರೆಮನೆಗಳ ಮಹಾ ನಿರ್ದೇಶಕರಾಗಿ ಕಾರ್ಯನಿರ್ವಹಿಸುತ್ತಿದ್ದರು.
ಇತ್ತೀಚೆಗೆ, ಗುಜರಾತ್ ಮೂಲದ ಐಪಿಎಸ್ ಅಧಿಕಾರಿ ರಾಕೇಶ್ ಆಸ್ತಾನಾ ಅವರನ್ನು ಸಿಬಿಐಯ ಹಂಗಾಮಿ ಮುಖ್ಯಸ್ಥರನ್ನಾಗಿ ಕೇಂದ್ರ ಸರ್ಕಾರ ಘೋಷಿಸಿತ್ತು. ಇದು ವಿವಾದಕ್ಕೆ ಕಾರಣವಾಗಿ ಈ ಪ್ರಕರಣ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದೆ. ಹಾಗಾಗಿ, ಎರಡು ತಿಂಗಳಿಂದ ಇಲ್ಲಿಯವರೆಗೂ ಸಿಬಿಐ ಮುಖ್ಯಸ್ಥರ ಹುದ್ದೆ ತೆರವಾಗಿತ್ತು. (ಒನ್ಇಂಡಿಯಾ ಸುದ್ದಿ)
-
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ?












Click it and Unblock the Notifications