70 ಜನರ ಸಾವಿಗೆ ಕಾರಣರಾದ ಮೋದಿಯನ್ನು ಬಂಧಿಸಿ : ಕಾಂಗ್ರೆಸ್ ಮುಖಂಡ
ಸರಿಯಾಗಿ ಪೂರ್ವ ತಯಾರಿ ನಡೆಸದೇ ದೊಡ್ಡ ನೋಟನ್ನು ನಿಷೇಧಿಸಿ, ಎಪ್ಪತ್ತು ಅಮಾಯಕರ ಸಾವಿಗೆ ಪ್ರಧಾನಿ ಕಾರಣರಾಗಿದ್ದಾರೆ. ಅವರ ವಿರುದ್ದ ಕೇಸ್ ದಾಖಲಿಸಿ, ಬಂಧಿಸಬೇಕೆಂದು ಕಾಂಗ್ರೆಸ್ ಮುಖಂಡರೊಬ್ಬರು ಒತ್ತಾಯಿಸಿದ್ದಾರೆ.
ಮುಂಬೈ, ನ 22: ಸರಿಯಾಗಿ ಪೂರ್ವ ತಯಾರಿ ನಡೆಸದೇ ದೊಡ್ಡ ನೋಟನ್ನು ನಿಷೇಧಿಸಿ, ಎಪ್ಪತ್ತು ಅಮಾಯಕರ ಸಾವಿಗೆ ಪ್ರಧಾನಿ ಕಾರಣರಾಗಿದ್ದಾರೆ. ಅವರ ವಿರುದ್ದ ಕೇಸ್ ದಾಖಲಿಸಿ, ಬಂಧಿಸಬೇಕೆಂದು ಕಾಂಗ್ರೆಸ್ ಮುಖಂಡರೊಬ್ಬರು ಒತ್ತಾಯಿಸಿದ್ದಾರೆ.
ಸಾವಿರಾರು ಜನ ಮೋದಿಯ ತಪ್ಪು ನಿರ್ಧಾರದಿಂದ ತಮ್ಮದೇ ಹಣವನ್ನು ವಾಪಸ್ ಪಡೆಯಲಾಗದೇ ಮತ್ತು ಚಿಲ್ಲರೆ ಸಮಸ್ಯೆಯಿಂದ ಒಪ್ಪತ್ತಿನ ಊಟಕ್ಕೂ ಪರದಾಡುವಂತಾಗಿದೆ ಎಂದು ಮುಂಬೈ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಂಜನ್ ನಿರುಪಮ್ ಹೇಳಿದ್ದಾರೆ. (ನೋಟು ರದ್ದು ಬಗ್ಗೆ ಜನ ಏನಂತಾರೆ)
ನೋಟು ನಿಷೇಧಿಸಿ ಇಷ್ಟು ದಿನವಾದರೂ ಜನರು ದೊಡ್ಡ ಸರತಿಯಲ್ಲಿ ನಿಲ್ಲುವುದು ತಪ್ಪಲಿಲ್ಲ. ಕೇಂದ್ರದ ಮೋದಿ ಸರಕಾರದ ತಪ್ಪು ನಿರ್ಧಾರದಿಂದ ಇದುವರೆಗೆ ಎಪ್ಪತ್ತಕ್ಕೂ ಹೆಚ್ಚು ಜನ ಸಾವನ್ನಪ್ಪಿದ್ದಾರೆ.
ತಮ್ಮದೇ ದುಡ್ಡನ್ನು ತೆಗೆಯಲು ಜನ ಪರದಾಡುವಂತಾಗಿದೆ. ಅಮಾಯಕರ ಸಾವಿಗೆ ಪ್ರಧಾನಿ ನರೇಂದ್ರ ಮೋದಿಯವರೇ ನೇರ ಕಾರಣ. ಅವರ ವಿರುದ್ದ ಕೇಸ್ ದಾಖಲಿಸಿ, ಬಂಧಿಸಬೇಕೆಂದು ಸಂಜಯ್ ನಿರುಪಮ್ ಆಗ್ರಹಿಸಿದ್ದಾರೆ.
ಇತ್ತ, ಮಂಗಳವಾರ (ನ 22) ಬಿಜೆಪಿ ಸಂಸದೀಯ ಮಂಡಳಿಯ ಸಭೆಯಲ್ಲಿ ಮಾತನಾಡುತ್ತಿದ್ದ ಪ್ರಧಾನಿ ಮೋದಿ, ಕಪ್ಪುಹಣ ಮತ್ತು ಭ್ರಷ್ಟಾಚಾರದ ವಿರುದ್ದದ ಹೋರಾಟ ಈಗ ಆರಂಭವಾಗಿದೆ ಎಂದಿದ್ದಾರೆ. ವಿರೋಧ ಪಕ್ಷಗಳನ್ನು ತರಾಟೆಗೆ ತೆಗೆದುಕೊಂಡ ಮೋದಿ, ಮುಂದೆ ಓದಿ..

ಸಂಜಯ್ ನಿರುಪಮ್
70ಕ್ಕೂ ಹೆಚ್ಚು ಜನರ ಸಾವಿಗೆ ಕಾರಣರಾದ ಮೋದಿ ವಿರುದ್ದ ಐಪಿಸಿ ಸೆಕ್ಷನ್ 302ರ ಪ್ರಕಾರ ಕೇಸ್ ದಾಖಲಿಸಬೇಕು. ಇಷ್ಟೂ ಜನರ ಸಾವಿಗೆ ಮೋದಿ ಒಬ್ಬರೇ ನೇರ ಕಾರಣ - ಮುಂಬೈ ಕಾಂಗ್ರೆಸ್ ಘಟಕದ ಅಧ್ಯಕ್ಷ ಸಂಜಯ್ ನಿರುಪಮ್.

ನೋಟ್ ಪೇ ಚರ್ಚಾ
ಜನರ ಸಮಸ್ಯೆಗಳನ್ನು ಆಲಿಸಲು 'ನೋಟ್ ಪೇ ಚರ್ಚಾ'ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದ ಸಂಜಯ್, ಸುಮಾರು ಐದು ಲಕ್ಷ ಕೋಟಿ ರೂಪಾಯಿ ಬ್ಯಾಂಕಿಗೆ ಇದುವರೆಗೆ ಜಮೆಯಾಗಿದೆ. ಆದರೆ ಶೇ. 25ರಷ್ಟು ಜನ ಮಾತ್ರ ತಮ್ಮ ಹಣವನ್ನು ವಾಪಸ್ ಪಡೆಯಲು ಸಾಧ್ಯವಾಗಿದೆ ಎಂದು ಸಂಜಯ್ ನಿರುಪಮ್ ಹೇಳಿದ್ದಾರೆ.
|
ರಿಸರ್ವ್ ಬ್ಯಾಂಕ್
ಕೇಂದ್ರ ಸರಕಾರ ಮತ್ತು ರಿಸರ್ವ್ ಬ್ಯಾಂಕ್ ಇನ್ನಾದರೂ ಸೂಕ್ತ ಕ್ರಮ ತೆಗೆದುಕೊಂಡು ಜನರ ಸಮಸ್ಯೆಗೆ ಸ್ಪಂದಿಸಲಿ. ಕರೆನ್ಸಿ ನೋಟನ್ನು ಸರಿಯಾದ ಸಮಯಕ್ಕೆ ಸಿಗುವಂತೆ ಮಾಡಿ ಜನರ ಬವಣೆಯನ್ನು ತಪ್ಪಿಸಲಿ - ಸಂಜಯ್ ನಿರುಪಮ್.

ಬಿಜೆಪಿ ಸಂಸದೀಯ ಮಂಡಳಿ ಸಭೆ
ಮಂಗಳವಾರ ನಡೆದ ಸಂಸದೀಯ ಮಂಡಳಿ ಸಭೆಯಲ್ಲಿ ಮಾತನಾಡುತ್ತಾ ಪ್ರಧಾನಿ ಮೋದಿ, ಕಪ್ಪುಹಣದ ವಿರುದ್ದ ಹೋರಾಟ ಈಗ ಆರಂಭವಾಗಿದೆ. ಇದು ಕಡೇ ಅಸ್ತ್ರವಲ್ಲ, ಆರಂಭ - ಮೋದಿ.

ಪ್ರತಿಪಕ್ಷಗಳ ವಿರುದ್ದ ಮೋದಿ ವಾಗ್ದಾಳಿ
ವಿರೋಧ ಪಕ್ಷಗಳು ಕಪ್ಪುಹಣದ ಪರವಾಗಿ ನಿಂತಿದ್ದಾರೆ. ಇವರಿಗೆ ಜನರು ಮುಂದಿನ ದಿನದಲ್ಲಿ ಪಾಠ ಕಲಿಸಲಿದ್ದಾರೆ. ನೋಟು ನಿಷೇಧವನ್ನು ಭಾರತೀಯರು ಒಪ್ಪಿಕೊಂಡಿದ್ದಾರೆಂದು ಮೋದಿ ಸಭೆಯಲ್ಲಿ ಹೇಳಿದ್ದಾರೆ.
-
April 9 Horoscope: 12 ರಾಶಿಗಳಿಗೆ ಇಂದು ಸಂತೋಷ, ಸವಾಲು ಮತ್ತು ಅವಕಾಶಗಳ ಮಿಶ್ರ ಫಲ -
Viral: ಬೆಂಗಳೂರಿಗೆ ಕಾಲಿಟ್ಟಿತೇ ಡೇಂಜರಸ್ 'ಜಾಂಬಿ ಡ್ರಗ್'?: ಯುವಕನ ವಿಡಿಯೋ ನೋಡಿ ಬೆಚ್ಚಿಬಿದ್ದ ಸಿಲಿಕಾನ್ ಸಿಟಿ ಜನ -
PUC Results: 2026ರ ದ್ವಿತೀಯ PUC ಪರೀಕ್ಷೆ ಫಲಿತಾಂಶ ಪ್ರಕಟ, ಇವರೇ ನೋಡಿ ಟಾಪರ್ -
Dhurandhar-2 OTT: ನೆಟ್ಫ್ಲಿಕ್ಸ್ ಅಲ್ಲ, ಈ ಒಟಿಟಿಯಲ್ಲಿ 'ಧರಂಧರ-2' ಅಬ್ಬರ, ಯಾವಾಗ? -
Ragi Price Today: ಕರ್ನಾಟಕದ ಮಾರುಕಟ್ಟೆಗಳಲ್ಲಿ ಇಂದಿನ "ರಾಗಿ' ಬೆಲೆ ಎಷ್ಟಿದೆ? ಲೇಟೆಸ್ಟ್ ಅಪ್ಡೇಟ್ -
Rain in Karnataka: ಕರ್ನಾಟಕದ ಕರಾವಳಿಯಲ್ಲಿ ಭಾರೀ ಬಿಸಿಲು; ಬೆಂಗಳೂರು ಸೇರಿ ಈ ಭಾಗಗಳಲ್ಲಿ ಮಳೆ: ಐಎಂಡಿ -
Election Commission: ಚುನಾವಣೆ ಸಮಯದಲ್ಲೇ ಭಾರತೀಯ ಚುನಾವಣಾ ಆಯೋಗದ ಟ್ವೀಟ್ ಎಡವಟ್ಟು, ಬಿಜೆಪಿ ಪರ ಎಂದ ವಿರೋಧ ಪಕ್ಷಗಳು -
Dhurandhar 2: ದುರಂಧರ್ 2 ಸಿನಿಮಾ: ಬಾಕ್ಸ್ ಆಫೀಸ್ನಲ್ಲಿ 1,000 ಕೋಟಿ ದಾಖಲೆಯ ನಡುವೆ ಹೊಸ ಸಂಕಷ್ಟ -
Zombis Drug: ಬೆಂಗಳೂರಲ್ಲಿ ಜಾಂಬಿ ಡ್ರಗ್ಸ್ ಸೇವಿಸಿ ಯುವಕನ ವಿಚಿತ್ರ ವರ್ತನೆ: ನಟ ದುನಿಯಾ ವಿಜಯ್ ವಿಡಿಯೋ ವೈರಲ್ -
Assembly Elections 2026: ಕೇರಳಂ, ಅಸ್ಸಾಂ, ಪುದುಚೇರಿ ವಿಧಾನಸಭೆ ಚುನಾವಣೆ ಮತದಾನ ಪ್ರಾರಂಭ -
Karnataka 2nd Puc Results 2026: ದ್ವಿತೀಯ ಪಿಯುಸಿ ಫಲಿತಾಂಶ ಪ್ರಕಟ; ರಾಜ್ಯದಲ್ಲಿ ಯಾವ ಜಿಲ್ಲೆ ಎಷ್ಟನೇ ಸ್ಥಾನ? -
Chandrika Dixit: ಒಂದು ರಾತ್ರಿ ನನ್ನ ಜೊತೆ ಮಲಗಿದ್ರೆ 50 ಲಕ್ಷ ಕೊಡ್ತೇನೆ; ಚಂದ್ರಿಕಾಗೆ ಖ್ಯಾತ ಉದ್ಯಮಿ ಆಫರ್












Click it and Unblock the Notifications