ರೋಗಿಯ ಸಂಬಂಧಿಗಳು ಮಾಡಿದ ಹಲ್ಲೆಯಿಂದ ಆ ವೈದ್ಯನ ಕಣ್ಣೇ ಹೋಯ್ತು!
ಧುಲೆ (ಮಹಾರಾಷ್ಟ್ರ), ಮಾರ್ಚ್ 14: ಅಪಘಾತಕ್ಕೊಳಗಾಗಿ ಆಸ್ಪತ್ರೆಗೆ ದಾಖಲಾಗಿದ್ದ ವ್ಯಕ್ತಿಯೊಬ್ಬನಿಗೆ ತಕ್ಷಣವೇ ಚಿಕಿತ್ಸೆ ನೀಡಲಿಲ್ಲ ಎಂಬ ಕಾರಣ ನೀಡಿದ ವ್ಯಕ್ತಿಯ ಸಂಬಂಧಿಗಳು ವೈದ್ಯರೊಬ್ಬರ ಮೇಲೆ ಅಮಾನುಷವಾಗಿ ಹಲ್ಲೆ ಮಾಡಿರುವ ಘಟನೆ ಧುಲೆ ಸರ್ಕಾರಿ ಆಸ್ಪತ್ರೆಯಲ್ಲಿ ನಡೆದಿದೆ. ಈ ಭೀಕರ ಹಲ್ಲೆಗೊಳಗಾದ ವೈದ್ಯರ ಎಡಗಣ್ಣಿನ ದೃಷ್ಟಿಯೇ ಹೊರಟು ಹೋಗಿದೆ.
ಹಲ್ಲೆಗೊಳಗಾದ ವ್ಯಕ್ತಿಯ ಹೆಸರು ಡಾ. ರೋಹನ್ ಮೊಮೊರ್ಕರ್ ಎಂದು ಹೇಳಲಾಗಿದೆ.
ಆಸ್ಪತ್ರೆಯ ಮೂಲಗಳ ಪ್ರಕಾರ, ತಲೆಗೆ ಪೆಟ್ಟುಬಿದ್ದಿದ್ದ ವ್ಯಕ್ತಿಯೊಬ್ಬನನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಆದರೆ, ಚಿಕಿತ್ಸೆ ನೀಡಿದ ನಂತರ, ಆ ವ್ಯಕ್ತಿಗೆ ನರತಜ್ಞರ ಸಲಹೆ ಅವಶ್ಯಕತೆಯೆಂದು ಭಾವಿಸಿದ ವೈದ್ಯರು ಆತನನ್ನು ಬೇರೊಂದು ಆಸ್ಪತ್ರೆಗೆ ಕೊಂಡೊಯ್ಯಲು ಸೂಚಿಸಿದರು.
ಆದರೆ, ಇದರಿಂದ ರೊಚ್ಚಿಗೆದ್ದ ವ್ಯಕ್ತಿಯ ಸಂಬಂಧಿಗಳು ವೈದ್ಯರ ಮೇಲೆ ಹಲ್ಲೆ ನಡೆಸಿದ್ದಾರೆ. ಈ ಭೀಕರ ಹಲ್ಲೆಯಿಂದಾಗಿ, ರೋಹನ್ ಅವರ ಎಡಗಣ್ಣಿನ ದೃಷ್ಟಿ ಹೊರಟುಹೋಗಿದ್ದು, ಅವರ ಎದೆ, ಹೊಟ್ಟೆಯ ಭಾಗಗಳಿಗೆ ತೀವ್ರವಾದ ಪೆಟ್ಟು ಬಿದ್ದಿರುವುದಾಗಿ ರೋಹನ್ ಅವರ ಸಹೋದ್ಯೋಗಿಗಳು ತಿಳಿಸಿದ್ದಾರೆ.
-
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ -
ಹೋಟೆಲ್, ರೆಸ್ಟೋರೆಂಟ್ ಮಾಲೀಕರಿಗೆ ಶಾಕ್: ವಾಣಿಜ್ಯ ಗ್ಯಾಸ್ ಸಿಲಿಂಡರ್ ಬೆಲೆಯಲ್ಲಿ ಬರೋಬ್ಬರಿ 195 ರೂ. ಭಾರಿ ಏರಿಕೆ












Click it and Unblock the Notifications