1993ರ ಮುಂಬೈ ಸರಣಿ ಸ್ಫೋಟ; ಅಬು ಸಲೇಂ, ಮುಸ್ತಾಫಾ ಅಪರಾಧಿ: ಟಾಡಾ ಕೋರ್ಟ್
ಮುಂಬೈ ಬಾಂಬ್ ಸ್ಫೋಟದ ರೂವಾರಿಗಳಿಗೆ ಸಹಾಯ ಮಾಡಿದ್ದ ಆರೋಪದ ಮೇರೆಗೆ ಮುಸ್ತಫಾ ದೊಸ್ಸಾ ಹಾಗೂ ಮೊಹಮ್ಮದ್ ದೊಸ್ಸಾ ಎಂಬ ಸಹ ಆರೋಪಿಗಳನ್ನು ಟಾಡಾ ನ್ಯಾಯಾಲಯ ಅಪರಾಧಿಗಳೆಂದು ಜೂನ್ 16, 2017ರಂದು ಘೋಷಣೆ ಮಾಡಿದೆ. ಶಿಕ್ಷೆಯ ಪ್ರಮಾಣ ಪ್ರಕಟವಾಗಿಲ್ಲ.
ಮುಂಬೈ, ಜೂನ್ 16: 1993ರಲ್ಲಿ ನಡೆದಿದ್ದ ಮುಂಬೈ ಸರಣಿ ಸ್ಫೋಟ ಪ್ರಕರಣದ ಸಂಚು ರೂಪಿಸುವಲ್ಲಿ ನೆರವಾಗಿದ್ದ ಆರೋಪ ಹೊತ್ತಿದ್ದ ಅಬು ಸಲೇಂ ಅಪರಾಧಿಯೆಂದು ಟಾಡಾ ನ್ಯಾಯಾಲಯ ತೀರ್ಪಿತ್ತಿದೆ.
ಮುಂಬೈ ಸ್ಫೋಟದ ರೂವಾರಿ ಟೈಗರ್ ಮೆನನ್ ಜತೆಯಲ್ಲಿ ಬಾಂಬ್ ಸ್ಫೋಟದ ಯೋಜನೆಗೆ ನೆರವಾಗಿದ್ದನೆಂಬ ಆರೋಪ ಅಬು ಸಲೇಂ ಮೇಲಿದೆ.

ಇನ್ನು, ಇದೇ ಪ್ರಕರಣದ ಸಹ ಆರೋಪಿಗಳಾಗಿದ್ದ ಮುಸ್ತಫಾ ದೌಸಾ ಹಾಗೂ ಆತನ ಸಹೋದರ ಮೊಹಮ್ಮದ್ ದೌಸಾ ಅವರನ್ನು ದೋಷಿಗಳೆಂದು ನ್ಯಾಯಾಲಯ ತೀರ್ಪಿತ್ತಿದೆ.
ಇವರೊಂದಿಗೆ, ಫಿರೋಜ್ ಅಬ್ದುಲ್ ರಶೀದ್ ಖಾನ್, ತಾಹಿತ್ ಮರ್ಚೆಂಟ್ ಅವರನ್ನೂ ದೋಷಿಯೆಂದು ನ್ಯಾಯಾಲಯ ತೀರ್ಮಾನ ಮಾಡಿದೆ.
ಪ್ರಕರಣದ ವಿಚಾರಣೆ ನಡೆಸಿದ ಟಾಡಾ ಸೆಷನ್ಸ್ ನ್ಯಾಯಾಲಯ, ಸ್ಫೋಟದ ರೂವಾರಿಗಳಿಂದ ಆಜ್ಞೆ ಪಡೆದು ಪ್ರಮುಖ ಆರೋಪಿಗಳಿಗೆ ಶಸ್ತ್ರಾಸ್ತ್ರ ಹಾಗೂ ಕಚ್ಚಾ ವಸ್ತುಗಳನ್ನು ಪೂರೈಕೆ ಮಾಡಿದ ಆರೋಪವನ್ನು ಮುಸ್ತಫಾ ದೌಸಾ ಹಾಗೂ ಮೊಹಮ್ಮದ್ ದೌಸಾ ಹೊತ್ತಿದ್ದಾರೆ.

1993ರ ಮಾರ್ಚ್ 12ರಂದು ಒಟ್ಟು 12 ಬಾಂಬ್ ಗಳು ಮುಂಬೈನ ವಿವಿಧೆಡೆ ಸ್ಫೋಟಗೊಂಡು ಘೋರ ಪರಿಣಾಮವನ್ನು ಬೀರಿದ್ದವು. ಈ ಸ್ಫೋಟಗಳಲ್ಲಿ ಒಟ್ಟಾರೆ 257 ಮಂದಿ ಸಾವನ್ನಪ್ಪಿದ್ದರೆ, 713 ಮಂದಿ ಭೀಕರವಾಗಿ ಗಾಯಗೊಂಡಿದ್ದರು.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications