Get Updates
Get notified of breaking news, exclusive insights, and must-see stories!

Heavy Rain Alert: ತಮಿಳುನಾಡು ಸೇರಿದಂತೆ ಈ ರಾಜ್ಯಗಳಲ್ಲಿ ಇನ್ನೆರಡು ದಿನ ಭಾರೀ ಮಳೆ ಸಾಧ್ಯತೆ

ನವದೆಹಲಿ: ಜನವರಿ 26ರಿಂದ 28ರವರೆಗೆ ಉತ್ತರ ಪಶ್ಚಿಮ ಭಾರತವನ್ನು ಮತ್ತೊಂದು ತೀವ್ರ ವಾಯುಚಲನೆ ಪ್ರಭಾವಿಸುವ ಸಾಧ್ಯತೆ ಇದೆ ಎಂದು ಭಾರತೀಯ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ. ಈ ವಾಯುಚಲನೆಯ ಪರಿಣಾಮವಾಗಿ ಜನವರಿ 27ರಂದು ಪಶ್ಚಿಮ ಹಿಮಾಲಯ ಪ್ರದೇಶಗಳಲ್ಲಿ ಕೆಲವೆಡೆ ಭಾರೀ ಮಳೆ ಹಾಗೂ ಹಿಮಪಾತ ಸಂಭವಿಸುವ ಸಾಧ್ಯತೆ ಇದೆ. ಈಗಾಗಲೇ ಜಮ್ಮು-ಕಾಶ್ಮೀರ-ಲಡಾಖ್ ಮತ್ತು ಹಿಮಾಚಲ ಪ್ರದೇಶಗಳ ಬಹುತೇಕ ಭಾಗಗಳಲ್ಲಿ ಲಘು ರಿಂದ ಮಧ್ಯಮ ಮಳೆ ಹಾಗೂ ಹಿಮಪಾತ ದಾಖಲಾಗಿದ್ದು, ಉತ್ತರಾಖಂಡದ ಕೆಲವೆಡೆ ಮಾತ್ರ ಮಳೆಯಾಗಿದೆ. ಜಮ್ಮು-ಕಾಶ್ಮೀರದ ಕೆಲವು ಪ್ರದೇಶಗಳಲ್ಲಿ ಭಾರೀ ಮಳೆಯೂ ಸಂಭವಿಸಿದೆ.

ಪಂಜಾಬ್, ಹರಿಯಾಣ, ಚಂಡೀಗಢ ಹಾಗೂ ದೆಹಲಿಯ ಬಹುತೇಕ ಪ್ರದೇಶಗಳಲ್ಲಿ ಮಧ್ಯಮ ಮಳೆಯಾಗಿದ್ದು, ರಾಜಸ್ಥಾನ ಹಾಗೂ ಪಶ್ಚಿಮ ಉತ್ತರ ಪ್ರದೇಶದ ಕೆಲವೆಡೆ ಮಾತ್ರ ಮಳೆ ದಾಖಲಾಗಿದೆ. ಜಮ್ಮು, ಪಂಜಾಬ್ ಹಾಗೂ ಪೂರ್ವ ರಾಜಸ್ಥಾನದಲ್ಲಿ ಕೆಲವೆಡೆ ಆಲಿಕಲ್ಲು ಮಳೆಯೂ ಸಂಭವಿಸಿದ್ದು, ರೈತರಿಗೆ ಆತಂಕ ತಂದಿದೆ. ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ ಮತ್ತು ಪಂಜಾಬ್‌ನ ಕೆಲವೆಡೆ ಗುಡುಗು ಸಹಿತ ಬಲವಾದ ಗಾಳಿಗಳು 60 ರಿಂದ 90 ಕಿ.ಮೀ ಪ್ರತಿಗಂಟೆ ವೇಗದಲ್ಲಿ ಬೀಸಿದರೆ, ಹರಿಯಾಣ, ಚಂಡೀಗಢ, ದೆಹಲಿ ಹಾಗೂ ಉತ್ತರಾಖಂಡದಲ್ಲಿ 30 ರಿಂದ 60 ಕಿ.ಮೀ ವೇಗದ ಬಿರುಗಾಳಿ ದಾಖಲಾಗಿದೆ.

Rain

ಈ ರಾಜ್ಯಗಳಲ್ಲಿ ದಟ್ಟ ಮಂಜು

ಮತ್ತೊಂದೆಡೆ, ಮೇಘಾಲಯದ ಕೆಲವೆಡೆ ದಟ್ಟ ಮಂಜು ಆವರಿಸಿದ್ದು, ಬಾರಾಪಾನಿಯಲ್ಲಿ ಗೋಚರತೆ ಕೇವಲ 50 ಮೀಟರ್‌ಗೆ ಇಳಿದಿದೆ. ಕನಿಷ್ಠ ತಾಪಮಾನಗಳ ವಿಚಾರದಲ್ಲಿ ಜಮ್ಮು-ಕಾಶ್ಮೀರ, ಹಿಮಾಚಲ ಪ್ರದೇಶ, ಉತ್ತರ ಪ್ರದೇಶ, ಮಧ್ಯ ಭಾರತ, ಬಿಹಾರ, ಗಂಗಾತೀರ ಪಶ್ಚಿಮ ಬಂಗಾಳ, ಅಸ್ಸಾಂ, ಮೇಘಾಲಯ ಹಾಗೂ ಅರುಣಾಚಲ ಪ್ರದೇಶಗಳಲ್ಲಿ ಸಾಮಾನ್ಯಕ್ಕಿಂತ 2ರಿಂದ 5 ಡಿಗ್ರಿ ಸೆಲ್ಸಿಯಸ್ ಹೆಚ್ಚು ದಾಖಲಾಗಿದೆ. ಆದರೆ ಜಾರ್ಖಂಡ್, ಛತ್ತೀಸ್‌ಗಢ, ತೆಲಂಗಾಣ, ಕರ್ನಾಟಕ, ಕೇರಳ, ಮಾಹೆ ಹಾಗೂ ತಮಿಳುನಾಡಿನಲ್ಲಿ ಕನಿಷ್ಠ ತಾಪಮಾನ 2ರಿಂದ 4 ಡಿಗ್ರಿ ಸೆಲ್ಸಿಯಸ್ ಕಡಿಮೆಯಾಗಿದೆ. ದೇಶದ ಉಳಿದ ಭಾಗಗಳಲ್ಲಿ ತಾಪಮಾನ ಸಾಮಾನ್ಯ ಮಟ್ಟದಲ್ಲಿದೆ ಎಂದು ಇಲಾಖೆ ತಿಳಿಸಿದೆ.

ಜಮ್ಮು-ಕಾಶ್ಮೀರ-ಲಡಾಖ್, ಹಿಮಾಚಲ ಪ್ರದೇಶ ಹಾಗೂ ಉತ್ತರಾಖಂಡದಲ್ಲಿ ವ್ಯಾಪಕ ಮಳೆ ಹಾಗೂ ಹಿಮಪಾತ ಸಂಭವಿಸುವ ಸಾಧ್ಯತೆ ಇದ್ದು, ಗುಡುಗು ಮತ್ತು 40ರಿಂದ 50 ಕಿಮೀ ವೇಗದ ಗಾಳಿ, ಕೆಲವೆಡೆ 60 ಕಿಮೀ ವೇಗದ ಗಾಳಿಯೂ ಬೀಸುವ ಸಾಧ್ಯತೆ ಇದೆ. ಜಮ್ಮು-ಕಾಶ್ಮೀರದಲ್ಲಿ ಕೆಲವೆಡೆ ಅತಿಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಪಂಜಾಬ್, ಹರಿಯಾಣ, ಚಂಡೀಗಢ, ಉತ್ತರ ರಾಜಸ್ಥಾನ ಹಾಗೂ ಉತ್ತರ ಉತ್ತರ ಪ್ರದೇಶಗಳಲ್ಲಿ ವ್ಯಾಪಕ ಮಳೆಯಾಗುವ ಸಾಧ್ಯತೆ ಇದ್ದು, ಪಂಜಾಬ್ ಹಾಗೂ ಹರಿಯಾಣದ ಕೆಲವೆಡೆ ಭಾರೀ ಮಳೆಯ ಸಂಭವವಿದೆ.

Rain

ಜನವರಿ 26ರವರೆಗೆ ಮಳೆ ಅಲರ್ಟ್‌

ದಕ್ಷಿಣ ಭಾರತದಲ್ಲಿಯೂ ಹವಾಮಾನ ಬದಲಾವಣೆ ಕಂಡುಬರುವ ಸಾಧ್ಯತೆ ಇದೆ. ತಮಿಳುನಾಡು, ಪುದುಚೇರಿ ಮತ್ತು ಕಾರೈಕಲ್‌ನಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆ ಇದ್ದು, ಕೆಲವೆಡೆ ಭಾರೀ ಮಳೆಯ ಎಚ್ಚರಿಕೆ ನೀಡಲಾಗಿದೆ. ಕೇರಳ ಮತ್ತು ಮಾಹೆ ಪ್ರದೇಶಗಳಲ್ಲಿ ಜನವರಿ 26ರಂದು ಮಳೆಯಾಗುವ ಸಾಧ್ಯತೆ ಇದೆ. ಉತ್ತರ ಭಾರತದ ಪಂಜಾಬ್, ಹರಿಯಾಣ ಹಾಗೂ ಚಂಡೀಗಢದಲ್ಲಿ ಜನವರಿ 24ರಿಂದ 26ರವರೆಗೆ ಬೆಳಗ್ಗೆ ಮತ್ತು ರಾತ್ರಿ ವೇಳೆ ದಟ್ಟ ಮಂಜು ಆವರಿಸುವ ಸಾಧ್ಯತೆ ಇದ್ದು, ಹಿಮಾಚಲ ಪ್ರದೇಶದ ಕೆಲವೆಡೆ ಜನವರಿ 25 ಹಾಗೂ 26ರಂದು ಶೀತ ಅಲೆ ಪರಿಸ್ಥಿತಿ ಎದುರಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇಂದು ದೆಹಲಿ ಹಾಗೂ ಸುತ್ತಮುತ್ತಲ ಪ್ರದೇಶಗಳಲ್ಲಿ ಆಕಾಶ ಸಾಮಾನ್ಯವಾಗಿ ಮೋಡ ಕವಿದಂತೆ ಇರಲಿದ್ದು, ಬೆಳಗಿನ ಸಮಯದಲ್ಲಿ ತೆಳ್ಳನೆಯಿಂದ ಮಧ್ಯಮ ಮಂಜು ಕಾಣಿಸಿಕೊಳ್ಳುವ ಸಾಧ್ಯತೆ ಇದೆ. ಗರಿಷ್ಠ ತಾಪಮಾನ 16ರಿಂದ 18 ಡಿಗ್ರಿ ಸೆಲ್ಸಿಯಸ್ ಮತ್ತು ಕನಿಷ್ಠ ತಾಪಮಾನ 6ರಿಂದ 8 ಡಿಗ್ರಿ ಸೆಲ್ಸಿಯಸ್ ನಡುವೆ ಇರಲಿದೆ. ಗರಿಷ್ಠ ತಾಪಮಾನ ಸಾಮಾನ್ಯಕ್ಕಿಂತ 2ರಿಂದ 4 ಡಿಗ್ರಿ ಕಡಿಮೆಯಾಗುವ ಸಾಧ್ಯತೆ ಇದ್ದು, ಉತ್ತರ ದಿಕ್ಕಿನಿಂದ ಬೀಸುವ ಗಾಳಿಯ ವೇಗ ಬೆಳಿಗ್ಗೆ 10 ಕಿಮೀಗಿಂತ ಕಡಿಮೆಯಾಗಿದ್ದು, ಮಧ್ಯಾಹ್ನ ಹಾಗೂ ಸಂಜೆ ವೇಳೆಗೆ ವಾಯುವ್ಯ ದಿಕ್ಕಿನಿಂದ 15 ಕಿಮೀ ವೇಗಕ್ಕೆ ಏರಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+