ಬಿಹಾರ ರೈಲು ದುರಂತಕ್ಕೆ ಪಾಕಿಸ್ತಾನದ ಐಎಸ್ಐ ಕೈವಾಡ
ಬಿಹಾರ, ಜನವರಿ 19: ರಾ (ರಿಸರ್ಚ್ ಆ್ಯಂಡ್ ಅನಾಲಿಸಿಸ್ ವಿಂಗ್) ಮತ್ತು ಎನ್ಐಎ (ರಾಷ್ಟ್ರೀಯ ತನಿಖಾ ದಳ) ಅಧಿಕಾರಿಗಳು ಬಿಹಾರ ರೈಲು ದುರಂತದಲ್ಲಿ ಪಾಕಿಸ್ತಾನ ಐಎಸ್ಐ ಕೈವಾಡವನ್ನು ಪತ್ತೆ ಹಚ್ಚಿದ್ದಾರೆ. ಶಂಕಿತ ಮೂವರು ಐಎಸ್ಐ ಏಜೆಂಟರನ್ನು ಅಧಿಕಾರಿಗಳು ಬಂಧಿಸಿ ವಿಚಾರಣೆಗೆ ಒಳಪಡಿಸಿದ್ದು, ರೈಲು ದುರಂತಕ್ಕೂ ಪಾಕಿಸ್ತಾನದ ಗುಪ್ತಚರ ಸಂಸ್ಥೆಯ ಏಜೆಂಟರಿಗೂ ಸಂಪರ್ಕ ಇರುವ ಸುಳಿವುಗಳು ಸಿಕ್ಕಿವೆ ಎನ್ನಲಾಗಿದೆ.
2016ರ ನವೆಂಬರ್ 20ರಂದು ಬಿಹಾರ-ಪಟ್ನಾ ಎಕ್ಸ್ ಪ್ರೆಸ್ ರೈಲು ದುರಂತಕ್ಕೀಡಾಗಿತ್ತು. ಈ ದುರಂತದ ತನಿಖೆ ಕೈಗೊಂಡಿದ್ದ ಬಿಹಾರ ಪೊಲೀಸರು ಘಟನೆಯಲ್ಲಿ ಐಎಸ್ಐ ಕೈವಾಡ ಇರುವ ಬಗ್ಗೆ ಶಂಕೆ ವ್ಯಕ್ತಪಡಿಸಿದ್ದರು.[ಪಾಟ್ನಾ- ಇಂದೋರ್ ರೈಲು ದುರಂತ: ಪಾಕ್ ಕೈವಾಡ]

ಒನ್ ಇಂಡಿಯಾ ಜತೆ ಮಾತನಾಡಿರುವ ಎನ್ಐಎ ಅಧಿಕಾರಿಯೊಬ್ಬರು, ವಿಚಾರಣೆ ವೇಳೆ ಪ್ರಮುಖ ಸುಳಿವುಗಳು ಸಿಕ್ಕಿರುವುದಾಗಿ ಹೇಳಿದ್ದಾರೆ. ಬೇರೆ ರೈಲು ದುರಂತಗಳಿಗೂ ಈ ವ್ಯಕ್ತಿಗಳಿಗೂ ಸಂಬಂಧ ಇದೆಯಾ ಎಂಬುದನ್ನು ವಿಚಾರಣೆ ಮಾಡುತ್ತಿದ್ದೇವೆ ಎಂದು ಅವರು ಹೇಳಿದ್ದಾರೆ.[ದೀಪಾವಳಿ : ನೈಋತ್ಯ ರೈಲ್ವೆಯಿಂದ ಪಾಂಡಿಚೇರಿಗೆ ವಿಶೇಷ ರೈಲು]
ವಿಚಾರಣೆ ವೇಳೆ ಶಂಕಿತರು ಇನ್ನಿಬ್ಬರ ಹೆಸರನ್ನು ಬಾಯ್ಬಿಟ್ಟಿದ್ದು, ಗಜೇಂದ್ರ ಶರ್ಮ ಮತ್ತು ರಾಕೇಶ್ ಯಾದವ್ ಪೂರ್ವ ಚಂಪಾರಣ್ ಜಿಲ್ಲೆಯಲ್ಲಿ ಅಡಗಿಕೊಂಡಿದ್ದಾರೆ ಎನ್ನಲಾಗಿದೆ. ತನಿಖಾ ದಳ ಐಎಸ್ಐ ಜಾಲ ಭೇದಿಸಲು ಬ್ರಿಜೇಶ್ ಗಿರಿಯನ್ನು ಬಂಧಿಸಬೇಕಾಗಿದೆ. ಆದರೆ ಗಿರಿ ನೇಪಾಳದಲ್ಲಿ ಅಡಗಿಕುಳಿತಿದ್ದಾನೆ. ಹೀಗಾಗಿ ಈತನನ್ನು ಹಿಡಿಯಲು ಭಾರತೀಯ ಅಧಿಕಾರಿಗಳು ನೇಪಾಳದ ಅಧಿಕಾರಿಗಳನ್ನು ಈಗಾಗಲೇ ಸಂಪರ್ಕಿಸಿದ್ದಾರೆ ಎಂದು ತಿಳಿದು ಬಂದಿದೆ.[ಚಿಂತೆ ಬಿಡಿ, ಇನ್ಮುಂದೆ ರೈಲ್ವೆಗಳಲ್ಲಿ ಕ್ಯಾಪ್ಟನ್ ಇರುತ್ತಾರೆ..!]
ಐಎಸ್ಐ ಇದೇ ರೀತಿ ದೇಶದಾದ್ಯಂತ ರೈಲು ಅವಘಡಗಳನ್ನು ನಡೆಸಲು ಯೋಜನೆ ರೂಪಿಸಿತ್ತು ಎನ್ನಲಾಗಿದೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ












Click it and Unblock the Notifications