ಉಗ್ರರ ಹೊಡೆದುರುಳಿಸಿದ ಸೇನೆ, ಇಬ್ಬರು ಭಾರತೀಯ ಯೋಧರು ಹುತಾತ್ಮ
ಜಮ್ಮು-ಕಾಶ್ಮೀರದ ನೌಘಾಂ ವಲಯದಲ್ಲಿ ಶನಿವಾರ ಒಳನುಸುಳಲು ಯತ್ನಿಸುತ್ತಿದ್ದ ಉಗ್ರರ ಪೈಕಿ ಇಬ್ಬರನ್ನು ಹೊಡೆದುರುಳಿಸಲು ಭಾರತೀಯ ಸೇನೆ ಯಶಸ್ವಿಯಾಗಿದೆ. ಈ ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ
ಶ್ರೀನಗರ್, ಮೇ 20: ಜಮ್ಮು-ಕಾಶ್ಮೀರದ ನೌಘಾಂ ವಲಯದಲ್ಲಿ ಶನಿವಾರ ಒಳನುಸುಳಲು ಯತ್ನಿಸುತ್ತಿದ್ದ ಉಗ್ರರ ಪ್ರಯತ್ನವನ್ನು ತಡೆಯುವಾಗ ಇಬ್ಬರು ಭಾರತೀಯ ಯೋಧರು ಹುತಾತ್ಮರಾಗಿದ್ದಾರೆ. ಜತೆಗೆ ಇಬ್ಬರು ಉಗ್ರರನ್ನು ಹೊಡೆದುರುಳಿಸುವಲ್ಲಿ ಸೇನೆಯು ಯಶಸ್ವಿಯಾಗಿದೆ.
ಈ ಕಾರ್ಯಾಚರಣೆಯಲ್ಲಿ ಇಬ್ಬರು ಯೋಧರು ತಮ್ಮ ಪ್ರಾಣ ಬಲಿ ಕೊಟ್ಟಿದ್ದು, ಸದ್ಯಕ್ಕೆ ಆಪರೇಷನ್ ಮುಂದುವರಿದಿದೆ ಎಂದು ವರದಿಯಾಗಿದೆ. ಗುರುವಾರವಷ್ಟೇ ಶ್ರೀನಗರದಲ್ಲಿ ಉಗ್ರರು ಮಾಡಿದ ಗ್ರೆನೇಡ್ ದಾಳಿಯಲ್ಲಿ ಓರ್ವ ಪೊಲೀಸ್ ಹಾಗೂ ನಾಗರಿಕನಾಗಿ ಗಾಯಗಳಾಗಿದ್ದವು. ಸಫಾ ಕದಲ್ ನ ಪೊಲೀಸ್ ಠಾಣೆ ಮೇಲೆ ಉಗ್ರರು ದಾಳಿ ನಡೆಸಿದ್ದರು.[ಪಾಕ್ ದುಸ್ಸಾಹಸಕ್ಕೆ ತಿರುಗೇಟು ನೀಡಲು ಸಿದ್ಧವಾಗಿರಿ: ಅರುಣ್ ಜೇಟ್ಲಿ]
ಇನ್ನು ಶನಿವಾರದ ದಾಳಿಯಲ್ಲಿ ವಿಶೇಷ ಪೊಲೀಸ್ ಅಧಿಕಾರಿ ಸಮೀರ್ ಅಹ್ಮದ್ ಎಂಬುವವರಿಗೆ ಗಾಯಗಳಾಗಿದ್ದು, ಅವರನ್ನು ಪೊಲೀಸ್ ಕಂಟ್ರೋಲ್ ರೂಮ್ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ಇನ್ನು ಪಾಕ್ ಸೇನೆಯಿಂದ ಅಪ್ರಚೋದಿತ ದಾಳಿ ನಡೆದಿದ್ದು, ನಾಗರಿಕರನ್ನು ಸುರಕ್ಷತಾ ಕ್ರಮವಾಗಿ ಈ ವಾರ ಸ್ಥಳಾಂತರಿಸಲಾಗಿದೆ.