ಅನಂತ್ ನಾಗ್ ನಲ್ಲಿ ಭಯೋತ್ಪಾದಕರ ದಾಳಿ, ಇಬ್ಬರು ಯೋಧರು ಹುತಾತ್ಮ
ಅನಂತ್ ನಾಗ್, ಜೂನ್ 3: ಜಮ್ಮು-ಕಾಶ್ಮೀರದ ಅನಂತ್ ನಾಗ್ ನಲ್ಲಿ ಸೇನೆಯ ವಾಹನಗಳ ಮೇಲೆ ಉಗ್ರರ ದಾಳಿ ನಡೆದಿದ್ದು, ಇಬ್ಬರು ಯೋಧರು ಹುತಾತ್ಮನಾಗಿ, ನಾಲ್ವರಿಗೆ ಗಾಯಗಳಾಗಿವೆ. ಉಧಂಪುರ್ ನಿಂದ ಶ್ರೀನಗರಕ್ಕೆ ತೆರಳುತ್ತಿದ್ದ ಸೇನಾ ವಾಹನದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ.
ಗಡಿ ನಿಯಂತ್ರಣ ರೇಖೆಯ ಕೃಷ್ಣಾ ಘಾಟಿ ವಲಯದಲ್ಲಿ ಪಾಕಿಸ್ತಾನ ಸೇನೆಯು ಶನಿವಾರ ಅಪ್ರಚೋದಿತ ದಾಳಿ ಆರಂಭಿಸಿದೆ. ಇದಕ್ಕೂ ಮುಂಚೆ ಪೂಂಛ್ ವಲಯದಲ್ಲಿ ಪಾಕ್ ಸೇನೆ ದಾಳಿ ನಡೆಸಿತ್ತು. ಇದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.[ಕಾಶ್ಮೀರದ ಟಾಪ್ 12 ಭಯೋತ್ಪಾದಕರ ಪಟ್ಟಿ ಬಹಿರಂಗ]

ಈ ಮಧ್ಯ ಭಾರತೀಯ ಸೇನೆ ಮೇಲೆ ಅನಂತ್ ನಾಗ್ ನ ಖಾಜಿಗುಂಡ್ ನಲ್ಲಿ ಭಯೋತ್ಪಾದಕರು ದಾಳಿ ನಡೆಸಿದ್ದು, ಆರು ಮಂದಿ ಸೈನಿಕರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಜಮ್ಮು-ಕಾಶ್ಮೀರದ ಪೂಂಛ್ ವಲಯದಲ್ಲಿ ಕದನ ವಿರಾಮ ಉಲ್ಲಂಘಿಸಿ ಪಾಕ್ ನಡೆಸಿದ ದಾಳಿಯಲ್ಲಿ ಕನಿಷ್ಠ ಒಬ್ಬ ನಾಗರಿಕ ಹಾಗೂ ಐದರಿಂದ ಆರು ಯೋಧರು ಗಾಯಗೊಂಡಿದ್ದಾರೆ.[ಭಾರತ ಸೇನೆಯಿಂದ ಪ್ರತೀಕಾರ, 6 ಪಾಕ್ ಸೈನಿಕರ ಸಾವು]
ಶುಕ್ರವಾರ ರಾತ್ರಿ ಹನ್ನೊಂದು ಗಂಟೆಯಿಂದ ಕದನ ವಿರಾಮವನ್ನು ಉಲ್ಲಂಘಿಸಿ ಪಾಕಿಸ್ತಾನ ದಾಳಿಯನ್ನು ನಡೆಸುತ್ತಿದೆ. ಇದಕ್ಕೂ ಮುನ್ನ ಗುರುವಾರ ಕೃಷ್ಣ ಘಾಟಿ ವಲಯದಲ್ಲಿ ನಡೆದ ಪಾಕ್ ನ ಗುಂಡಿನ ದಾಳಿಯಲ್ಲಿ ಇಬ್ಬರು ಭಾರತೀಯ ನಾಗರಿಕರಿಗೆ ಗಾಯಗಳಾಗಿದ್ದವು. ಸಣ್ಣ ಶಸ್ತ್ರಾಸ್ತ್ರಗಳು, ಮಾರ್ಟರ್ ಗಳನ್ನು ಬಳಸಿ ಜಮ್ಮು-ಕಾಶ್ಮೀರದ ನೌಶೆರಾ ಮತ್ತು ಕೃಷ್ಣಾ ಘಾಟಿಯಲ್ಲಿ ದಾಳಿ ನಡೆಸಿದ್ದು, ಅದಕ್ಕೆ ಭಾರತೀಯ ಸೇನೆ ತಕ್ಕ ಪ್ರತ್ಯುತ್ತರ ನೀಡಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications