ಸೇನೆ-ಉಗ್ರರ ಸಂಘರ್ಷದಲ್ಲಿ 2 ಸೈನಿಕರು, 4 ಭಯೋತ್ಪಾದಕರ ಸಾವು
ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆಯುತ್ತಿರುವ ಎನ್ಕೌಂಟರಿನಲ್ಲಿ ಮೂವರು ಸೈನಿಕರು ಸಾವನ್ನಪ್ಪಿದ್ದು ಇಬ್ಬರು ಪೊಲೀಸ್ ಗಾಯಗೊಂಡಿದ್ದಾರೆ.
ಶ್ರೀನಗರ, ಫೆಬ್ರವರಿ 12: ಜಮ್ಮು ಮತ್ತು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ನಡೆದ ಭೀಕರ ಎನ್ಕೌಂಟರಿನಲ್ಲಿ ಇಬ್ಬರು ಸೈನಿಕರು ಪ್ರಾಣ ಕಳೆದುಕೊಂಡಿದ್ದು ಮೂವರು ಪೊಲೀಸರು ಗಾಯಗೊಂಡಿದ್ದಾರೆ. ಘಟನೆಯಲ್ಲಿ ಓರ್ವ ನಾಗರಿಕನೂ ಸಾವನ್ನಪ್ಪಿದ್ದಾರೆ.
ಘಟನೆಯಲ್ಲಿ ನಾಲ್ವರು ಹಿಜ್ಬುಲ್ಲಾ ಮುಜಾಹಿದ್ದೀನ್ ಬಂಡುಕೋರರನ್ನೂ ಸೈನಿಕರು ಹೊಡೆದುರುಳಿಸಿದ್ದಾರೆ. ಕುಲ್ಗಾಮಾ ಜಿಲ್ಲೆಯ ನೌಪೊರಾ ಯಾರಿಪೊರಾ ಪ್ರದೇಶದಲ್ಲಿ ಈ ಎನ್ಕೌಂಟರ್ ನಡೆಯುತ್ತಿದೆ. [ಬಾರಾಮುಲ್ಲಾದಲ್ಲಿ ಇಬ್ಬರು ಉಗ್ರರನ್ನು ಹೊಡೆದುರುಳಿಸಿದ ಸೇನೆ]

ಖಚಿತ ಮಾಹಿತಿಯ ಮೇರೆಗೆ ಭಾನುವಾರ ಮುಂಜಾನೆ ಸೇನೆ ಮತ್ತು ಕಾಶ್ಮೀರ ವಿಶೇಷ ಪೊಲೀಸ್ ಪಡೆಗಳ ಅಧಿಕಾರಿಗಳು ಮೌಪೊರಾ ಗ್ರಾಮದಲ್ಲಿ ದಾಳಿ ನಡೆಸಿದ್ದರು. ಪೊಲೀಸರು ಮತ್ತು ಸೈನಿಕರು ಮನೆ ಪಕ್ಕ ಬರುತ್ತಿದ್ದಂತೆ ಬಂಡುಕೋರರು ತಾವು ಅಡಗಿಕೊಂಡಿದ್ದ ಮನೆಯಿಂದ ಗುಂಡಿನ ದಾಳಿ ಆರಂಭಿಸಿದ್ದಾರೆ. ಸ್ಥಳದಲ್ಲಿ ಸೈನಿಕರು ಮತ್ತು ಬಂಡುಕೋರರ ನಡುವೆ ಗುಂಡಿನ ಚಕಮಕಿ ನಡೆಯುತ್ತಿದೆ.
ಎನ್ಕೌಂಟರಿನಲ್ಲಿ ಸಾವಿಗೀಡಾದ ಇಬ್ಬರು ಬಂಡುಕೋರರನ್ನು ಮುದಾಸಿರ್ ತಾಂತರಿ ಮತ್ತು ಮಹಮ್ಮದ್ ಹಾಶಿಮ್ ಎಂದು ಗುರುತಿಸಲಾಗಿದೆ. ಸಾವಿಗೀಡಾದವರಿಂದ ನಾಲ್ಕು ರೈಫಲ್ ಗಳು ಮತ್ತು ಮದ್ದು ಗುಂಡುಗಳನ್ನು ವಶಪಡಿಸಿಕೊಳ್ಳಲಾಗಿದೆ. ಇನ್ನಿಬ್ಬರು ಉಗ್ರರ ಗುರುತು ಪತ್ತೆಯಾಗಿಲ್ಲ. [ಜನರ ಜೀವ ಕಸಿಯುತ್ತಿದೆ ಜಮ್ಮು-ಕಾಶ್ಮೀರದ ಹಿಮ ಕುಸಿತ!]
ಸ್ಥಳದಲ್ಲಿ ಎನ್ಕೌಂಟರ್ ಮುಂದುವರಿದಿದ್ದು ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗುತ್ತಿದೆ.
-
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ -
115 ರೂಪಾಯಿಯ ಪೊಂಗಲ್ಗೆ 273 ರೂ. ಬಿಲ್: ಸ್ವಿಗ್ಗಿ ವಿರುದ್ಧ ಸುಮಲತಾ ಅಂಬರೀಷ್ ಆಕ್ರೋಶ -
Sri Rama Navami 2026: ಶ್ರೀ ರಾಮನವಮಿ; ಧರ್ಮದ ಜಯದ ದಿವ್ಯ ಸಂದೇಶ












Click it and Unblock the Notifications