ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಮ್ಮು ಕಾಶ್ಮೀರದ ಸ್ಥಿತಿ ಸುಧಾರಿಸುತ್ತಿಲ್ಲ, ಹದಗೆಡುತ್ತಿದೆ: ಚಿದು

|
Google Oneindia Kannada News

ನವದೆಹಲಿ, ಜುಲೈ 19: ಜಮ್ಮು ಕಾಶ್ಮೀರದ ಸ್ಥಿತಿ ಸುಧಾರಿಸುತ್ತಿಲ್ಲ, ನದಲಾಗಿ ಮತ್ತಷ್ಟು ಹದಗೆಡುತ್ತಿದೆ. ಕೇಂದ್ರ ಸರ್ಕಾರ, ಜಮ್ಮು-ಕಾಶ್ಮೀರದ ಸ್ಥಿತಿ ಸುಧಾರಿಸುತ್ತಿದೆ ಎನ್ನುತ್ತಿರುವ ಮಾತಿಗೆ ಅರ್ಥವಿಲ್ಲ ಎಂದು ಕಾಂಗ್ರೆಸ್ ಮುಖಂಡ ಪಿ ಚಿದಂಬರಂ ಹೇಳಿದರು.

ಪಾಕ್ ಆಕ್ರಮಿತ ಕಾಶ್ಮೀರ, ಭಾರತದ ಅವಿಭಾಜ್ಯ ಅಂಗ: ಸುಷ್ಮಾ ಸ್ವರಾಜ್ಪಾಕ್ ಆಕ್ರಮಿತ ಕಾಶ್ಮೀರ, ಭಾರತದ ಅವಿಭಾಜ್ಯ ಅಂಗ: ಸುಷ್ಮಾ ಸ್ವರಾಜ್

ಕಾಶ್ಮೀರದ ಸ್ಥಿತಿ ಸುಧಾರಿಸುತ್ತಿದೆ ಎಂಬ ಬಿಜೆಪಿ ಹೇಳಿಕೆಯ ವಿರುದ್ಧ ಅವರು ನವದೆಹಲಿಯಲ್ಲಿಂದು (ಜುಲೈ 19) ಪ್ರತಿಕ್ರಿಯೆ ನೀಡಿದರು.

Jammu Kashmir situation is worsening, not improving: P Chidambaram

ಜುಲೈ 10 ರಿಂದ ಕಣಿವೆ ರಾಜ್ಯದಲ್ಲಿ ಒಂದಲ್ಲ ಒಂದು ಸಾವಿನ ಸುದ್ದಿ ವರದಿಯಾಗುತ್ತಲೇ ಇದೆ. ಸೇನೆ ಮತ್ತು ನಾಗರಿಕರ ನಡುವೆ ಘರ್ಷಣೆ ನಡೆಯುತ್ತಿದೆ. ಇಷ್ಟಾದರೂ ಸರ್ಕಾರ ಮಾತ್ರ ಜಮ್ಮು-ಕಾಶ್ಮೀರದಲ್ಲಿ ಜನಜೀವನ ಸಹಜ ಸ್ಥಿತಿಗೆ ಬರುತ್ತಿದೆ, ಇಲ್ಲಿನ ಸ್ಥಿತಿ ಸುಧಾರಿಸುತ್ತಿದೆ ಎನ್ನುತ್ತಿದೆ. ಸರ್ಕಾರ ಸುಳಲ್ಳು ಹೇಳಿಕೆ ನೀಡಿ ಜನರ ಹಾದಿತಪ್ಪಿಸುತ್ತಿದೆ ಎಂದು ಮಾಜಿ ಹಣಕಾಸು ಸಚಿವ ಚಿದಂಬರಂ ಹೇಳಿದರು.

ಕೇಂದ್ರ ಸರ್ಕಾರದ ಹೇಳಿಕೆಯನ್ನು ಕಾಂಗ್ರೆಸ್ ಒಪ್ಪುವುದಿಲ್ಲ ಮತ್ತು ಕಣಿವೆ ರಾಜ್ಯ ಸಹಜ ಸ್ಥಿತಿಗೆ ಮರಳುವಂತೆ ಮಾಡಲು ದೇಶದ ಜನರ ವಿಶ್ವಾಸವನ್ನು ಗಳಿಸಿಕೊಂಡು ಕೇಂದ್ರ ಸರ್ಕಾರ ಮುನ್ನಡೆಯಬೇಕಿದೆ ಎಂದು ಚಿದಂಬರಂ ನುಡಿದರು.

English summary
The situation in Jammu- Kashmir is worsening day by day, but central government claims the situation is improving in valley state. Ccongress refuses BJP's claim, former Finance minister of India P Chidambaram told to media.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X