ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕೇರಳ ಚುನಾವಣೆ : 3 ಕ್ಷೇತ್ರದಲ್ಲಿ ಜೆಡಿಎಸ್‌ಗೆ ಗೆಲುವು

|
Google Oneindia Kannada News

ಬೆಂಗಳೂರು, ಮೇ 19 : ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದೆ. ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ನೇತೃತ್ವದ ಜೆಡಿಎಸ್ ಮೂರು ಸ್ಥಾನಗಳಲ್ಲಿ ಜಯಗಳಿಸಿದೆ. ಈ ಮೂಲಕ ದೇವೇಗೌಡರಿಗೆ ಹುಟ್ಟುಹಬ್ಬದ ಉಡುಗೊರೆ ಸಿಕ್ಕಿದೆ.[ವಿಜಯೋತ್ಸಾಹದ ಚಿತ್ರಗಳು]

ಗುರುವಾರ ಕೇರಳ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟಗೊಂಡಿದ್ದು, ಎಸ್.ಅಚ್ಯುತಾನಂದನ್ ನೇತೃತ್ವದ ಎಲ್‌ಡಿಎಫ್ (ಲೆಫ್ಟ್ ಡೆಮಾಕ್ರಟಿಕ್ ಫ್ರಂಟ್)ಸ್ಪಷ್ಟ ಬಹುಮತದೊಂದಿಗೆ ಅಧಿಕಾರ ಪಡೆಯಲಿದೆ. ದೇವರನಾಡಲ್ಲಿ ಖಾತೆ ತೆರೆಯುವ ಮೂಲಕ ಬಿಜೆಪಿ ಐತಿಹಾಸಿಕ ಸಾಧನೆ ಮಾಡಿದೆ. [ಕೇರಳದಲ್ಲಿ ಬಿಜೆಪಿ ಮೈತ್ರಿಕೂಟಕ್ಕೆ 1 ಸ್ಥಾನ]

deve gowda

ಜೆಡಿಎಸ್ ಅಭ್ಯರ್ಥಿಗಳು ವದಕಾರ (ಸಿ.ಕೆ.ನಾನು), ತಿರುವಲ್ಲಾ (ಮ್ಯಾಥ್ಯೂ ಟಿ.ಥಾಮಸ್) ಮತ್ತು ಚಿತ್ತೂರು (ಕೆ.ಕೃಷ್ಣನ್ ಕುಟ್ಟಿ) ಕ್ಷೇತ್ರಗಳಲ್ಲಿ ಜಯಗಳಿಸಿದ್ದು, ಪಕ್ಷ ಮೂರು ಸ್ಥಾನಗಳಲ್ಲಿ ಜಯಭೇರಿ ಬಾರಿಸಿದೆ. ಕೋಲಾವಂ ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಸೋಲು ಅನುಭವಿಸಿದ್ದಾರೆ. [ಚಿತ್ರಗಳು : ಸರಳವಾಗಿ ಹುಟ್ಟುಹಬ್ಬ ಆಚರಿಸಿಕೊಂಡ ದೇವೇಗೌಡರು]

ಶುಭಾಶಯ ಕೋರಿದ ಗೌಡರು : ಚುನಾವಣೆ ಫಲಿತಾಂಶ ಹೊರಬೀಳುತ್ತಿದ್ದಂತೆ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಅವರು ಎಸ್.ಅಚ್ಯುತಾನಂದನ್ ಅವರಿಗೆ ಪತ್ರ ಬರೆದು, ಶುಭಾಶಯ ಕೋರಿದ್ದಾರೆ.

ಗೆಲುವು ಸಾಧಿಸಿದ ಅಭ್ಯರ್ಥಿಗಳ ವಿವರ
* ವದಕಾರ (ಸಿ.ಕೆ.ನಾನು) 9511 ಮತಗಳಿಂದ ಗೆಲುವು
* ತಿರುವಲ್ಲಾ (ಮ್ಯಾಥ್ಯೂ ಟಿ.ಥಾಮಸ್) 8242 ಮತಗಳಿಂದ ಗೆಲುವು
* ಚಿತ್ತೂರು (ಕೆ.ಕೃಷ್ಣನ್ ಕುಟ್ಟಿ) 2914 ಮತಗಳಿಂದ ಗೆಲುವು

kerala assembly election 2016
English summary
The Janata Dal (Secular) had won only three seats Thiruvalla, Vadakara and Chitoor in Kerala assembly election 2016.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X