ಶಬರಿಮಲೆ ವಿಮಾನ ನಿಲ್ದಾಣಕ್ಕೆ ಕೇರಳ ಸರ್ಕಾರ ಗ್ರೀನ್ ಸಿಗ್ನಲ್
ತಿರುವನಂತಪುರಂ, ಜುಲೈ 20 : ಶಬರಿಮಲೆ ದೇವಸ್ಥಾನಕ್ಕೆ ಬರುವ ಲಕ್ಷಾಂತರ ಯಾತ್ರಿಕರ ಅನುಕೂಲಕ್ಕಾಗಿ ವಿಮಾನಯಾನ ಸಂಪರ್ಕ ಕಲ್ಪಿಸಲು ಕೇರಳ ಸರ್ಕಾರ ಮುಂದಾಗಿದೆ.
ಶಬರಿಮಲೆ ಅಯ್ಯಪ್ಪಸ್ವಾಮಿ ಹುಂಡಿಯಲ್ಲಿ ಪಾಕಿಸ್ತಾನದ ನೋಟು ಪತ್ತೆ!
ಶಬರಿಮೆಲೆ ಅಯ್ಯಪ್ಪ ಸ್ವಾಮಿ ದೇವಾಲಯಕ್ಕೆ ಆಗಮಿಸುವ ಭಕ್ತರಿಗೆ ವಿಮಾನಯಾನ ಸಂಪರ್ಕ ಕಲ್ಪಿಸಲು ಶಬರಿಮಲೆಯಿಂದ 48 ಕಿ.ಮೀ.ದೂರದಲ್ಲಿರುವ ಕೊಟ್ಟಾಯಂ ಜಿಲ್ಲೆಯ ಚೆರುವಾಲಿ ಎಸ್ಟೇಟ್ ನಲ್ಲಿ ವಿಮಾನ ನಿಲ್ದಾಣ ನಿರ್ಮಾಣಕ್ಕೆ ಕೇರಳ ಸರ್ಕಾರ ಬುಧವಾರ ಒಪ್ಪಿಗೆ ಸೂಚಿಸಿದೆ.
ಪ್ರಸ್ತುತ ಯಾತ್ರಿಕರು ರಸ್ತೆ ಮಾರ್ಗವಾಗಿ ಮಾತ್ರವೇ ಶಬರಿಮಲೆಗೆ ಹೋಗಬಹುದಾಗಿದೆ. ಇತ್ತೀಚಿಗೆ ಶಬರಿಮಲೆಗೆ ಹೋಗುವ ಯಾತ್ರಿಕರ ಸಂಖ್ಯೆ ಗಣನೀಯವಾಗಿ ಹೆಚ್ಚಳವಾಗಿರುವ ಹಿನ್ನೆಲೆಯಲ್ಲಿ ಕೊಟ್ಟಾಯಂ ಜಿಲ್ಲೆಯ ಕಂಜಿರಪಾಳ್ಯ ತಾಲೂಕಿನಲ್ಲಿ ಸುಮಾರು 2,263 ಎಕರೆ ಜಾಗದಲ್ಲಿ ವಿಮಾನ ನಿಲ್ದಾಣ ನಿರ್ಮಾಣ ನಿರ್ಮಿಸಿಲು ಕೇರಳ ಸಚಿವ ಸಂಪುಟ ಸಭೆ ಗ್ರೀನ್ ಸಿಗ್ನಲ್ ನೀಡಿದೆ.
ಶಬರಿಮಲೆಯಿಂದ 48 ಕಿ.ಮೀ. ದೂರದಲ್ಲಿರುವ ಕಂಜಿರಾಪಲ್ಲಿಯಲ್ಲಿರುವ ಚೆರುವಾಲಿ ಎಸ್ಟೇಟ್ 2263 ಎಕರೆ ಪ್ರದೇಶಕ್ಕೆ ವ್ಯಾಪಿಸಿದೆ. ಹೆಚ್ಚುವರಿ ಮುಖ್ಯಕಾರ್ಯದರ್ಶಿ ಪಿ.ಎಚ್. ಕುರಿಯನ್ ನೇತೃತ್ವದ ನಾಲ್ವರು ಸದಸ್ಯರ ಸಮಿತಿ ವಿಮಾನ ನಿಲ್ದಾಣಕ್ಕೆ ಚೆರುವಾರಿ ಎಸ್ಟೇಟ್ ಅನ್ನು ಶಿಫಾರಸು ಮಾಡಿತ್ತು.