ಜಗನ್ ಗೆ ಸೇರಿದ 148 ಕೋಟಿ ರು. ಮೌಲ್ಯದ ಭೂಮಿ ಅಕ್ರಮ ಎಂದ ಇ.ಡಿ.
ಜಗನ್ ರೆಡ್ಡಿ ಅಕ್ರಮ ಆಸ್ತಿ ತನಿಖೆ ನಡೆಸುತ್ತಿರುವ ಜಾರಿ ನಿರ್ದೇಶನಾಲಯದಿಂದ 148 ಕೋಟಿ ರು. ಮೌಲ್ಯದ ಜಮೀನು ಪತ್ತೆ. ಈ ಜಮೀನಿನ ವಿಚಾರದಲ್ಲಿ ಜಗನ್ ಅಕ್ರಮ ವ್ಯವಹಾರವಿದೆ ಎಂದು ಹೇಳಿರುವ ಜಾರಿ ನಿರ್ದೇಶನಾಲಯ.
ನವದೆಹಲಿ, ಜುಲೈ 28: ಆಂಧ್ರ ಪ್ರದೇಶದ ಪುಲಿವೆಂದುಲ ಶಾಸಕ ಹಾಗೂ ಆಂಧ್ರಪ್ರದೇಶದ ವಿರೋಧ ಪಕ್ಷದ ನಾಯಕ ಜಗನ್ ರೆಡ್ಡಿ ಅವರಿಗೆ ಸೇರಿದ ಸುಮಾರು 148.89 ಕೋಟಿ ರು. ಮೌಲ್ಯದ ಜಮೀನನ್ನು ಅಕ್ರಮ ಆಸ್ತಿಯೆಂದು ಕೇಂದ್ರದ ಜಾರಿ ನಿರ್ದೇಶನಾಲಯ ಪರಿಗಣಿಸಿದೆಯೆಂದು 'ಡೆಕ್ಕನ್ ಕ್ರಾನಿಕಲ್' ವರದಿ ಮಾಡಿದೆ.
ಜಗನ್ ರೆಡ್ಡಿ ವಿರುದ್ಧ ಅಕ್ರಮ ಆಸ್ತಿಯ ತನಿಖೆಯನ್ನು ನಡೆಸುತ್ತಿರುವ ಜಾರಿ ನಿರ್ದೇಶನಾಲಯದ ಪ್ರಕಾರ, ಈ ಭೂಮಿಯ ಅಸಲಿಗೆ ಜಗನ್ ಅವರ ಆಪ್ತ ನಿಮ್ಮಗಡ್ಡ ಪ್ರಸಾದ್ ಎಂಬುವರಿಗೆ ಸೇರಿದ ಕಂಪನಿಗೆ ಸೇರಿದ್ದಾಗಿದೆ. ಆದರೆ, ಈ ಕಂಪನಿಯು ಜಗನ್ ರೆಡ್ಡಿಯವರ ಅಕ್ರಮ ಆದಾಯವನ್ನು ಬಚ್ಚಿಡಲೆಂದೇ ಸೃಷ್ಟಿಸಿರುವ ಖೋಟಾ ಕಂಪನಿಯಾಗಿದ್ದು, ಈ ಭೂಮಿಯ ಮೇಲೆ ಜಗನ್ ಅವರು ಹಣ ಹೂಡಿರುವುದರಿಂದ ಇದನ್ನು ಅಕ್ರಮವೆಂದು ಹೇಳಲಾಗಿದೆ.

ಈ ಹಿಂದೆ, ಜಗನ್ ವಿರುದ್ಧದ ಅಕ್ರಮ ಆಸ್ತಿಯ ತನಿಖೆಯನ್ನು ಕೇಂದ್ರೀಯ ತನಿಖಾ ಸಂಸ್ಥೆ (ಸಿಬಿಐ) ನಡೆಸಿತ್ತು. ಸಿಬಿಐ ವರದಿಯ ಆಧಾರದಲ್ಲಿ ಇದೀಗ ಜಾರಿ ನಿರ್ದೇಶನಾಲಯವು ಜಗನ್ ಅವರಿಂದ ಆಗಿದೆಯೆಂದು ಹೇಳಲಾಗಿರುವ ಆರ್ಥಿಕ ಅವ್ಯವಹಾರಗಳ ಬಗ್ಗೆ ತನಿಖೆ ನಡೆಸುತ್ತಿದೆ. 2004ರಲ್ಲಿ ಜಗನ್ ಅವರು ಹಲವಾರು ಬೇನಾಮಿ ಕಂಪನಿಗಳನ್ನು ಸೃಷ್ಟಿಸಿ, ಅವುಗಳಲ್ಲಿ ಜಗನ್ ಅವರಿಗೆ ಬೇಕಾದ ಹಲವಾರು ಮಂದಿ ಹಣ ಹೂಡುವಂತೆ ಮಾಡಿದ್ದರು.
ಹಣ ಹೂಡಿದ ಎಲ್ಲರೂ ಆಗಿನ ಆಂಧ್ರಪ್ರದೇಶ ಸರ್ಕಾರದಿಂದ ಹಲವಾರು ಯೋಜನೆಗಳಲ್ಲಿ ಅಕ್ರಮವಾಗಿ ಹಣ ಸಂಪಾದಿಸಿದವರೇ. ಆಗ, ಜಗನ್ ಅವರ ತಂದೆ ವೈ.ಎಸ್. ರಾಜಶೇಖರ ರೆಡ್ಡಿಯವರೇ ಆಂಧ್ರಪ್ರದೇಶದ ಮುಖ್ಯಮಂತ್ರಿಯಾಗಿದ್ದರು. ಆಗ, ಸರ್ಕಾರದಿಂದ ಹಲವಾರು ಆರ್ಥಿಕ ಅನುಕೂಲತೆಗಳನ್ನು ಅಕ್ರಮವಾಗಿ ಪಡೆದ ಹಲವಾರು ಮಂದಿ, ಜಗನ್ ಆರಂಭಿಸಿದ ಕಂಪನಿಗಳಲ್ಲಿ ಬಂಡವಾಳ ಹೂಡಿದ್ದರು. ಅಂಥದ್ದೊಂದು ಕಂಪನಿಯ ಒಡೆತನದಲ್ಲೇ ಈಗ 149 ಕೋಟಿ ರು. ಮೌಲ್ಯದ ಭೂಮಿಯನ್ನು ಪತ್ತೆ ಹಚ್ಚಲಾಗಿದ್ದು, ಅದನ್ನು ಅಕ್ರಮಗಳ ಪಟ್ಟಿಯಲ್ಲಿ ಸೇರ್ಪಡೆಗೊಳಿಸಲಾಗಿದೆ ಎಂದು ವರದಿಯಲ್ಲಿ ಹೇಳಲಾಗಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications