ಚಿತ್ರಗಳಲ್ಲಿ: ಶುಕ್ರವಾರ ದೇಶದಲ್ಲಿ ಏನೇನಾಯ್ತು?
ನವದೆಹಲಿ, ಫೆ. 27: ಕೇಂದ್ರ ಸರ್ಕಾರದ ಭೂ ಸ್ವಾಧೀನ ಕಾಯ್ದೆ ವಿರೋಧವಾಗಿ ನವದೆಹಲಿಯಲ್ಲಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ. ಸಂಸತ್ ಬಜಟ್ ಅಧಿವೇಶನದಲ್ಲಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ. ಮಥುರಾದಲ್ಲಿ ಬಣ್ಣ ಹಚ್ಚಿ ಹೋಳಿ ಆಡಿದ ಮಹಿಳೆಯರು...
ವಿಶ್ವಕಪ್ ಪಂದ್ಯದಲ್ಲಿ ವೆಸ್ಟ್ ಇಂಡೀಸ್ ನ್ನು ಮಣಿಸಿದ ದಕ್ಷಿಣ ಆಫ್ರಿಕಾ, ಲಾಲೂ ಪ್ರಸಾದ್ ಯಾದವ್ ಅವರ ಮಗಳ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ..ಇನ್ನಷ್ಟು ಸುದ್ದಿಗಳು ಚಿತ್ರಗಳಲ್ಲಿ..(ಪಿಟಿಐ ಚಿತ್ರಗಳು)
ಅಣ್ಣಾ ವಾಗ್ದಾಳಿ
ಭೂ ಸ್ವಾಧೀನ ಕಾಯ್ದೆ ವಿರೋಧವಾಗಿ ನವದೆಹಲಿಯಲ್ಲಿ ಮಾತನಾಡಿದ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು.
ಚಂಡಮಾರುತ
ಚಂಡಮಾರುತದ ಹೊಡತಕ್ಕೆ ಸಿಲುಕಿ ಬಲ್ ಘರ್ ಘಾಟ್ ನಲ್ಲಿ ನೆಲಕ್ಕುರುಳಿದ ವಿದ್ಯುತ್ ಕಂಬಗಳು.
ಶ್ರುತಿ ಹಾಸನ್
ಫ್ಯಾಷನ್ ಕಾರ್ಯಕ್ರಮವೊಂದರಲ್ಲಿ ಭಾಗವಹಿಸಿದ್ದ ನಟಿ ಶ್ರುತಿ ಹಾಸನ್.
ಡಿಗ್ರಿ ಪಡೆದ ಸಂಭ್ರಮ
ಸೊಲ್ಲಾಪುರದಲ್ಲಿ ಸ್ನಾತಕೋತ್ತರ ಪದವಿ ಪಡೆದ ವಿದ್ಯಾರ್ಥಿಗಳು ಸಂಭ್ರಮಿಸಿದ ಪರಿ.
ಭರ್ಜರಿ ಗೆಲುವು
ವೆಸ್ಟ್ ಇಂಡೀಸ್ ವಿರುದ್ಧದ ವಿಶ್ವಕಪ್ ಪಂದ್ಯದಲ್ಲಿ ಭರ್ಜರಿ ಜಯಗಳಿಸಿದ ದಕ್ಷಿಣ ಆಫ್ರಿಕಾ ತಂಡದ ಆಟಗಾರರು.
ಹೇಮಾ ಹೊಳಪು
ಬಜೆಟ್ ಅಧಿವೇಶನಕ್ಕೆ ಆಗಮಿಸಿದ ಬಿಜೆಪಿ ಸಂಸದೆ ಹೇಮಾ ಮಾಲಿನಿ ಮತ್ತು ಶತ್ರುಘ್ನ ಸಿನ್ಹಾ
ಆರ್ಥಿಕ ಸಮೀಕ್ಷೆಯಲ್ಲೇನಿದೆ?
2014-15 ರ ಆರ್ಥಿಕ ಸಮೀಕ್ಷೆ ವರದಿಯನ್ನು ಸಂಸತ್ ಭವನದೊಳಗೆ ಸಾಗಿಸುತ್ತಿರುವ ಸಿಬ್ಬಂದಿ.
ಮೋದಿ ಭಾಷಣ
ಲೋಕಸಭೆಯಲ್ಲಿ ಭಾಷಣ ಮಾಡಿದ ಪ್ರಧಾನಿ ನರೇಂದ್ರ ಮೋದಿ
ಪ್ರತಿಭಟನೆ
ಅವಿಜಿತ್ ರಾಯ್ ಹತ್ಯೆ ವಿರೋಧಿಸಿ ಬಾಂಗ್ಲಾದ ರಾಜಧಾನಿ ಢಾಕಾದಲ್ಲಿ ಪ್ರತಿಭಟನೆ ನಡೆಸಿದ ವಿದ್ಯಾರ್ಥಿಗಳು.
ಪ್ರಧಾನಿ ಹಾಜರಿ
ಲಾಲೂ ಪ್ರಸಾದ್ ಯಾದವ್ ಅವರ ಮಗಳ ವಿವಾಹ ಆರತಕ್ಷತೆ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ.