ಅಡ್ವಾಣಿ ಕನಸಿನ ಹುದ್ದೆಗೆ ಎಳ್ಳು ನೀರು ಬಿಟ್ಟಿತಾ ಬಾಬ್ರಿ ಮಸೀದಿ?
ಬಾಬ್ರಿ ಮಸೀದಿ ಪ್ರಕರಣದಲ್ಲಿ ಅಡ್ವಾಣಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು ಎಂದಿದೆ. ಹೀಗಾಗಿ ರಾಷ್ಟ್ರಪತಿ ಹುದ್ದೆಯ ರೇಸ್ ನಲ್ಲಿ ಅಡ್ವಾಣಿ ಹೆಸರು ಎರಡನೇ ಸಾಲಿನಲ್ಲಿ ಸ್ಥಾನದಲ್ಲಿ ಕಾಣಿಸಿಕೊಳ್ಳಲಿದೆ.
ನವದೆಹಲಿ, ಏಪ್ರಿಲ್ 20: ಯಾವ ಬಾಬ್ರಿ ಮಸೀದಿ ಧ್ವಂಸ ಪ್ರಕರಣ ಎಲ್.ಕೆ ಅಡ್ವಾಣಿಯನ್ನು ರಾಜಕೀಯ ಪ್ರವರ್ಧಮಾನಕ್ಕೆ ತಂದಿತೋ ಅದೇ ಬಾಬ್ರಿ ಮಸೀದಿ ಅಡ್ವಾಣಿಯ ಕನಸಿಕ ಹಾದಿಗೆ ಅಡ್ಡಗಾಲಾಗಿ ಪರಿಣಮಿಸಿದೆ.
ಬಾಬ್ರಿ ಮಸೀದಿ ಪ್ರಕರಣದಲ್ಲಿ ಅಡ್ವಾಣಿ ವಿರುದ್ಧದ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು ಎಂದಿದೆ. ಹೀಗಾಗಿ ರಾಷ್ಟ್ರಪತಿ ಹುದ್ದೆಯ ರೇಸ್ ನಲ್ಲಿ ಅಡ್ವಾಣಿ ಹೆಸರು ಎರಡನೇ ಸಾಲಿನಲ್ಲಿ ಸ್ಥಾನದಲ್ಲಿ ಕಾಣಿಸಿಕೊಳ್ಳಲಿದೆ. ಇದೇ ಜುಲೈನಲ್ಲಿ ಪ್ರಣಬ್ ಮುಖರ್ಜಿ ಅವಧಿ ಕೊನೆಗೊಳ್ಳಲಿದ್ದು ಹೊಸ ರಾಷ್ಟ್ರಪತಿ ಆಯ್ಕೆ ನಡೆಯಬೇಕಾಗಿದೆ.[ಬಾಬ್ರಿ ಪ್ರಕರಣ: ಆರೋಪ ಸಾಬೀತಾದಲ್ಲಿ ಅಡ್ವಾಣಿ ಮತ್ತಿತರರಿಗೆ ಐದು ವರ್ಷ ಜೈಲು]

ಬಾಬ್ರಿ ಮಸೀದಿ ಪ್ರಕರಣದ ತೀರ್ಪು ಹೊರ ಬರುತ್ತಿದ್ದಂತೆ ಬಿಜೆಪಿ ನಾಯಕ ಅರುಣ್ ಜೇಟ್ಲಿಗೆ ಪ್ರಶ್ನೆಯೊಂದು ತೂರಿ ಬಂತು. ಸುಪ್ರೀಂ ಕೋರ್ಟ್ ತೀರ್ಪು ಅಡ್ವಾಣಿಯನ್ನು ರಾಷ್ಟ್ರಪತಿ ಹುದ್ದೆಯಿಂದ ದೂರ ಇಡಲಿದೆಯಾ ಎಂಬ ಪ್ರಶ್ನೆ ಅದಾಗಿತ್ತು. ಇದಕ್ಕೆ ಉತ್ತರಿಸಿದ ಜೇಟ್ಲಿ ಇದೊಂದು 'ಕಾಲ್ಪನಿಕ ಪ್ರಶ್ನೆ' ಎಂದಷ್ಟೇ ಹೇಳಿದರು. "ಪ್ರಕರಣ ವಿಚಾರಣೆ ಹಂತದಲ್ಲಿರುವುದರಿಂದ ಅಡ್ವಾಣಿ ಅಪರಾಧಿಯಾಗಿಲ್ಲ. ವಿಚಾರಣೆ ನಡೆದು ಅವರು ಅಪರಾಧಿ ಹೌದೋ ಅಲ್ಲವೋ ಎಂಬುದು ಸಾಬೀತಾಗಬೇಕಾಗಿದೆ," ಎಂದಿದ್ದಾರೆ.[ ಅಯೋಧ್ಯೆಗೆ ಹೊರಟಿದ್ದ ಉಮಾ ಭಾರತಿಯನ್ನು ತಡೆದು ನಿಲ್ಲಿಸಿದರೇ ಅಮಿತ್ ಶಾ?]
ಸದ್ಯಕ್ಕೆ ಇಲ್ಲಿಯವರೆಗೆ ಬಿಜೆಪಿಯಾಗಲಿ ಎನ್.ಡಿ.ಎ ಆಗಲಿ ರಾಷ್ಟ್ರಪತಿ ಹುದ್ದೆಗೆ ಯಾರ ಹೆಸರನ್ನೂ ಬಹಿರಂಗವಾಗಿ ಘೋಷಿಸಿಲ್ಲ. ಆದರೆ ಅಡ್ವಾಣಿ ಹೆಸರನ್ನು ರಾಷ್ಟ್ರಪತಿ ಹುದ್ದೆಗೆ ಪರಿಗಣಿಸಲಾಗುವುದು ಎಂಬ ಮಾತುಕತೆಗಳು ರಾಜಕೀಯ ವಲಯದಲ್ಲಿ ಚಾಲ್ತಿಯಲ್ಲಿವೆ. ಇದೇ ವೇಳೆ ಕೆಲವು ಮಾಧ್ಯಮಗಳು ಇದು ಗುರುವಿಗೆ ನರೇಂದ್ರ ಮೋದಿ ನೀಡಲಿರುವುವ 'ಗುರುದಕ್ಷಿಣೆ' ಎಂದೂ ಬಣ್ಣಿಸಿದ್ದವು.
ಇನ್ನು ಈ ಹಿಂದೆ ಹೇಳಿಕೆ ನೀಡಿದ್ದ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಬಿಜೆಪಿ ಅಡ್ವಾಣಿ ಹೆಸರನ್ನು ರಾಷ್ಟ್ರಪತಿ ಸ್ಥಾನಕ್ಕೆ ಸೂಚಿಸದೇ ಇದ್ದರೆ ತಮ್ಮ ಪಕ್ಷ ಒಮ್ಮತದ ಅಭ್ಯರ್ಥಿಯನ್ನು ಬೆಂಬಲಿಸಲಿದೆ ಎಂದು ಹೇಳಿದ್ದರು.[ಸುಪ್ರೀಂ ಆದೇಶ: ಮುರಳಿ ಭೇಟಿ ಮಾಡಿದ ಆಡ್ವಾಣಿ]
ಸದ್ಯ ಸುಪ್ರೀಂ ಕೋರ್ಟಿನ ತೀರ್ಪಿನ ಹಿನ್ನಲೆಯಲ್ಲಿ ಅಡ್ವಾಣಿ ಹೆಸರನ್ನು ರಾಷ್ಟ್ರಪತಿ ಹುದ್ದೆಗೆ ಸೂಚಿಸಲು ಯಾವುದೇ ಅಡ್ಡಿ ಇಲ್ಲ. ಯಾಕೆಂದರೆ ಅವರಿನ್ನೂ ಅಪರಾಧಿಯಾಗಿಲ್ಲ. ಆದರೆ ಬಿಜೆಪಿ ಮತ್ತು ಆರ್.ಎಸ್.ಎಸ್ ಅಡ್ವಾಣಿ ಹೆಸರನ್ನು ರಾಷ್ಟ್ರಪತಿ ಹುದ್ದೆಗೆ ಸೂಚಿಸುತ್ತದೆಯೋ ಎಂಬುದು ಪ್ರಶ್ನೆಯಾಗಿ ಉಳಿದುಕೊಂಡಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
ವಂದೇ ಭಾರತ್ ರೈಲಿನ ಊಟ ಸೇವಿಸಿದ ಮಹಿಳೆಗೆ ತೀವ್ರ ಅಲರ್ಜಿ, 2 ವರ್ಷದ ಮಗನಿಗೆ ಅತಿಸಾರ: IRCTC ಹೇಳಿದ್ದೇನು? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಇಂದು ಚಿನ್ನ-ಬೆಳ್ಳಿ ಬೆಲೆ ಎಷ್ಟಿದೆ? -
Oracle: ಒರಾಕಲ್ ಸಂಸ್ಥೆಯಲ್ಲಿ ವೆಚ್ಚ ಕಡಿತದ ಭಾಗವಾಗಿ ಕೆಲಸ ಕಳೆದುಕೊಂಡ 12,000 ಜನ, 30,000 ಜನರಿಗೆ ಸಂಕಷ್ಟ -
KSRTC: ಏಪ್ರಿಲ್ 10ರವರೆಗೆ ವಿದ್ಯಾರ್ಥಿಗಳ ಬಸ್ಪಾಸ್ ಅವಧಿ ವಿಸ್ತರಣೆ -
ಏಪ್ರಿಲ್ ಮೊದಲ ವಾರ ಬ್ಯಾಂಕ್ ಬಂದ್: ಗ್ರಾಹಕರು ಮುಂಚಿತವಾಗಿ ಯೋಜನೆ ಮಾಡಬೇಕು -
ನಮ್ಮ ಮೆಟ್ರೋ ಪ್ರಯಾಣಿಕರಿಗೆ ನಿರಾಸೆ: ಮೇ ತಿಂಗಳಿನಲ್ಲಿ ಆರಂಭವಾಗಬೇಕಿದ್ದ ಪಿಂಕ್ ಲೈನ್ ಸಂಚಾರ ವಿಳಂಬ ಸಾಧ್ಯತೆ -
ವಾಸ್ತು ಪ್ರಕಾರ ಬಾತ್ರೂಮ್ನಲ್ಲಿ ಉಪ್ಪು ಇಡುವುದರಿಂದ ಏನು ಲಾಭ? -
ಚಲಿಸುವ ರೈಲಿನ ಬೋಗಿಯಲ್ಲಿ ಬಟ್ಟೆ ಒಣಗಿಸಿದ ಪ್ರಯಾಣಿಕರು: Viral Video ನೋಡಿ ನೆಟ್ಟಿಗರು ಗರಂ












Click it and Unblock the Notifications