ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪಾಕ್ ನಿಂದ 6 ಅಣೆಕಟ್ಟು ನಿರ್ಮಾಣ
ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಪಾಕಿಸ್ತಾನ ಸರ್ಕಾರದಿಂದ ಆರು ಅಣೆಕಟ್ಟುಗಳ ನಿರ್ಮಾಣ. ಆ ಎಲ್ಲಾ ಸಿದ್ಧತೆಗಳಿಗೆ ಚೀನಾ ಸರ್ಕಾರದಿಂದ ಆರ್ಥಿಕ ನೆರವು.
ನವದೆಹಲಿ, ಆಗಸ್ಟ್ 4: ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಹರಿಯುವ ಇಂಡಸ್ ನದಿಗೆ ಅಡ್ಡವಾಗಿ ಆರು ಅಣೆಕಟ್ಟುಗಳನ್ನು ಕಟ್ಟಲು ಪಾಕಿಸ್ತಾನ ಸನ್ನದ್ಧವಾಗಿದ್ದು, ಇದಕ್ಕೆ ಚೀನಾ ಸರ್ಕಾರ ಸಹಕಾರ ನೀಡುತ್ತಿದೆ ಎಂದು ರಕ್ಷಣಾ ಇಲಾಖೆಯ ರಾಜ್ಯ ಸಚಿವ ವಿ.ಕೆ ಸಿಂಗ್ ರಾಜ್ಯಸಭೆಗೆ ತಿಳಿಸಿದ್ದಾರೆ.
ರಾಜ್ಯಸಭೆಗೆ ಇಂದು ಲಿಖಿತ ಉತ್ತರ ನೀಡಿದ ಅವರು, ''ಪಾಕಿಸ್ತಾನ ಆಕ್ರಮಿತ ಕಾಶ್ಮೀರದಲ್ಲಿ ಅಣೆಕಟ್ಟುಗಳನ್ನು ನಿರ್ಮಿಸುವುದು ರಾಜತಾಂತ್ರಿಕ ನಿಯಮಗಳ ಸ್ಪಷ್ಟ ಉಲ್ಲಂಘನೆಯಾಗಿದೆ. ಈ ಬಗ್ಗೆ ಪಾಕಿಸ್ತಾನ ಹಾಗೂ ಚೀನಾ ಸರ್ಕಾರಗಳಿಗೆ ಪತ್ರ ಬರೆದು, ತಕ್ಷಣವೇ ಈ ಪ್ರಯತ್ನಗಳನ್ನು ನಿಲ್ಲಿಸಬೇಕೆಂದು ತಾಕೀತು ಮಾಡಲಾಗಿದೆ'' ಎಂದು ಅವರು ತಿಳಿಸಿದರು.

ಪಾಕಿಸ್ತಾನ ಆಕ್ರಮಿತ ಕಾಶ್ಮೀರವು ವಿವಾದಾತ್ಮಕ ಪ್ರದೇಶವಾಗಿದ್ದು, ಭಾರತಕ್ಕೆ ಆ ಪ್ರಾಂತ್ಯದ ಮೇಲೆ ತನ್ನದೇ ಆದ ಹಕ್ಕುಗಳನ್ನು ಹೊಂದಿದೆ. ಸಮಸ್ಯೆ ಇತ್ಯರ್ಥವಾಗುವವರೆಗೂ ಅಲ್ಲಿ ಯಾವುದೇ ರಚನಾತ್ಮಕ ಕಾರ್ಯಗಳನ್ನು ಪಾಕಿಸ್ತಾನ ಸರ್ಕಾರ ಕೈಗೊಳ್ಳುವಂತಿಲ್ಲ. ಇಂಥ ಕ್ರಮಗಳು, ಭಾರತದ ಸಾರ್ವಭೌಮತ್ವಕ್ಕೆ ಸಡ್ಡುಹೊಡೆಯುಂಥ ಪ್ರಯತ್ನಗಳಾಗಿರುತ್ತವೆ ಎಂದು ಪತ್ರದಲ್ಲಿ ತಿಳಿಸಿರುವುದಾಗಿ ವಿ.ಕೆ. ಸಿಂಗ್ ತಿಳಿಸಿದ್ದಾರೆ.
-
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ












Click it and Unblock the Notifications