ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಎಪಿ ಸಂಸದನಿಗೆ ನೀರು ಕುಡಿಸಿದ ಮೋದಿ, ಕಿಲಕಿಲ ನಕ್ಕ ಸೋನಿಯಾ

|
Google Oneindia Kannada News

ನವದೆಹಲಿ, ಡಿಸೆಂಬರ್, 16: ದೆಹಲಿ ಮುಖ್ಯಮಂತ್ರಿ ಕಚೇರಿಯ ಮೇಲೆ ಸಿಬಿಐ ವಿನಾ ಕಾರಣ ದಾಳಿ ನಡೆಸಿದೆ ಎಂದು ಆರೋಪಿಸಿ ಸಂಸತ್ ನ ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ಎಎಪಿ ಸಂಸದ ಭಾಗವಂತ್ ಮನ್ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅವರೇ ಖುದ್ದು ನೀರು ಕುಡಿಸಿದ್ದಾರೆ.

ಹೌದು.. ಇದರಲ್ಲಿ ಅತಿಶಯೋಕ್ತಿ ಏನಿಲ್ಲ. ಸದನದ ಬಾವಿಗಿಳಿದು ಘೋಷಣೆಗಳನ್ನು ಕೂಗುತ್ತಿದ್ದ ಭಾಗವಂತ್ ಮನ್ ಸುಸ್ತಾಗಿ ನೀರಿಗಾಗಿ ಹುಡುಕಾಡುತ್ತಿದ್ದರು. ತಕ್ಷಣ ಇದನ್ನು ಮನಗಂಡ ಪ್ರಧಾನಿ ಅವರಿದ್ದಲ್ಲಿಗೆ ತೆರಳಿ ಒಂದು ಲೋಟ ನೀರು ನೀಡಿದ್ದಾರೆ. ಪ್ರಧಾನಿ ನೀಡಿದ ನೀರನ್ನು ಮುಗುಳ್ನಗುತ್ತಲೇ ಸ್ವೀಕರಿಸಿದ ಮನ್ ನೀರು ಕುಡಿದು ಮುಂದಕ್ಕೆ ಹೆಜ್ಜೆ ಹಾಕಿದ್ದಾರೆ.['ಮೋದಿ ತಪ್ಪು ಒಪ್ಪಿಕೊಂಡ್ರೆ ನಾನು ಕ್ಷಮೆ ಕೇಳುತ್ತೇನೆ']

aap

ಎಎಪಿ ಸದಸ್ಯರು ಮತ್ತು ಕಾಂಗ್ರೆಸ್ ನ ಹಲವು ಸದಸ್ಯರು ಪ್ರಶ್ನೋತ್ತರ ಕಲಾಪವನ್ನು ಮುಂದೂಡಬೇಕು ಎಂದು ಬಾವಿಗಿಳಿದು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಭಗವಂತ್ ಮನ್ ಪಂಜಾಬ್ ನ ಸಂಗ್ರೂರ್ ಕ್ಷೇತ್ರದ ಎಎಪಿ ಸಂಸದ.[ಪ್ರಧಾನಿ ಹೇಡಿ ಎಂದ ಅರವಿಂದ]

ಪ್ರಧಾನಿಯವರೇ ಸ್ವತಃ ನೀರು ನೀಡಿದ ವಿಷಯವನ್ನು ತಿಳಿದ ವಿರೋಧ ಪಕ್ಷದ ನಾಯಕಿ ಸೋನಿಯಾ ಗಾಂಧಿ ಕೂಡ ಜೋರಾಗಿ ನಕ್ಕರು. ಡಿಸೆಂಬರ್ 15 ರಂದು ಸಿಬಿಐ ಅಧಿಕಾರಿಗಳು ದೆಹಲಿ ಸರ್ಕಾರದ ಮುಖ್ಯ ಕಾರ್ಯದರ್ಶಿ ರಾಜೇಂದ್ರ ಕುಮಾರ್ ಅವರ ಕಚೇರಿ ಮೇಲೆ ದಾಳಿ ಮಾಡಿ ದಾಖಲೆಗಳನ್ನು ವಶಪಡಿಸಿಕೊಂಡಿದ್ದರು. ಆದರೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ ಕೇಂದ್ರ ಸರ್ಕಾರ ದ್ವೇಷದ ರಾಜಕಾರಣ ಮಾಡುತ್ತಿದ್ದು ಸಿಬಿಐ ಬಳಸಿ ನನ್ನನ್ನು ಕಟ್ಟಿಹಾಕಲು ನೋಡುತ್ತಿದೆ ಎಂದು ಆರೋಪಿಸಿದ್ದರು.

English summary
Prime Minister Narendra Modi Wednesday, Dec 16 offered a glass of water to AAP member Bhagwant Mann, who was protesting in Lok Sabha against the CBI raids on Delhi government secretariat where Chief Minister Arvind Kejriwal sits. Mann, who was shouting slogans in the Well, felt uneasy and was apparently looking for water on the table of Lok Sabha secretariat officials who sit in the Well. A smiling Modi offered him the glass of water kept on his table which the AAP member readily drank.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X