ಶೀಘ್ರದಲ್ಲೇ ಏರ್ ಇಂಡಿಯಾ ಖಾಸಗೀಕರಣ?
ಸಾವಿರಾರು ಕೋಟಿ ಸಾಲ ಹಾಗೂ ಸತತ ನಷ್ಟದ ಸುಳಿಯಲ್ಲಿ ಸಿಲುಕಿರುವ ಏರ್ ಇಂಡಿಯಾವನ್ನು ನಷ್ಟದಿಂದ ಪಾರು ಮಾಡಲು ಸಂಸ್ಥೆಯನ್ನು ಮಾರಾಟ ಮಾಡುವ ಪ್ರಸ್ತಾವನೆಯನ್ನು ಸಲ್ಲಿಸಲಾಗಿದೆ.
ನವದೆಹಲಿ, ಮೇ 31: ಸಾಲದ ಸುಳಿಯಲ್ಲಿ ಸಿಲುಕಿರುವ ಏರ್ ಇಂಡಿಯಾ ಕಂಪನಿಯನ್ನು ಖಾಸಗಿ ಸಂಸ್ಥೆಗಳಿಗೆ ಮಾರಾಟ ಮಾಡುವ ಪ್ರಸ್ತಾವನೆಯು ಕೇಂದ್ರ ಸರಕಾರದ ಮುಂದಿದ್ದು, ಶೀಘ್ರದಲ್ಲೇ ಪ್ರಧಾನಿ ನರೇಂದ್ರ ಮೋದಿ ಈ ಬಗ್ಗೆ ನಿರ್ಧಾರ ಕೈಗೊಳ್ಳಲಿದ್ದಾರೆಂದು ಮೂಲಗಳು ತಿಳಿಸಿವೆ.
ಈ ಪ್ರಸ್ತಾವನೆಯಿನ್ನೂ ಕ್ಯಾಬಿನೆಟ್ ನಲ್ಲಿ ಚರ್ಚೆಗೆ ಬಂದಿಲ್ಲ. ಹಾಗಾಗಿ, ಈ ಬಗ್ಗೆ ಏನೂ ಮಾಹಿತಿಯಿಲ್ಲ ಎಂದು ಕೇಂದ್ರ ಸರ್ಕಾರದ ವಕ್ತಾರ ಧನಂಜಯ ಕುಮಾರ್ ಅವರು ಹೇಳಿದ್ದಾರೆ.[ಚಪ್ಪಲಿ ಏಟು ಕೊಟ್ಟ 'ಮಹಾ' ಸಂಸದ ಕಪ್ಪು ಪಟ್ಟಿಗೆ!]

ಈಗಾಗಲೇ ಏರ್ ಇಂಡಿಯಾ ಸಂಸ್ಥೆಯ ಮೇಲೆ 19 ಸಾವಿರ ಕೋಟಿ ರು.ಗಳಷ್ಟು ಸಾಲ ಇದೆ. ಹಾಗಾಗಿ, ಬರುವ ಆದಾಯದಲ್ಲಿ ಕಂಪನಿ ನಡೆಸುವುದು ಕಷ್ಟವಾಗುತ್ತಿದೆ. ಇದರಿಂದಾಗಿ, ಈ ಸಂಸ್ಥೆಯನ್ನು ಪರಭಾರೆ ಮಾಡುವ ಮೂಲಕ ಈ ಸಂಸ್ಥೆಯನ್ನು ಉಳಿಸಲು ಕೇಂದ್ರ ಸರ್ಕಾರದ ಮುಂದೆ ವಿಮಾನ ಯಾನ ಸಚಿವಾಲಯ ಪ್ರಸ್ತಾವನೆ ಸಲ್ಲಿಸಿದೆ ಎಂದು ಹೇಳಲಾಗಿದೆ.[ಹೊಸ ಏರ್ ಲೈನ್ ಸಂಸ್ಥೆ 'ಜೂಮ್ ಏರ್' ಬಗ್ಗೆ ತಿಳಿಯಬೇಕಾದ 5 ಅಂಶ]
ಕೊಳ್ಳುವವರು ಮುಂದೆ ಬಂದಲ್ಲಿಅವರು ಸಾಲದ ಜವಾಬ್ದಾರಿಯನ್ನೂ ಹೊರಬೇಕಾಗುತ್ತದೆ ಎಂದು ವಿಮಾನ ಯಾನ ಖಾತೆ ಸಚಿವಾಲಯದ ಹೆಸರನ್ನೇಳಲು ಇಚ್ಛಿಸದ ಅಧಿಕಾರಿಯೊಬ್ಬರು ತಿಳಿಸಿದ್ದಾರೆಂದು ಎನ್ ಡಿಟಿವಿ ವರದಿ ಮಾಡಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications