ಜಲ್ಲಿಕಟ್ಟು ಅಖಾಡಕ್ಕೆ ಸೂಪರ್ ಸ್ಟಾರ್ ರಜನೀಕಾಂತ್ ಎಂಟ್ರಿ
ಸಿನಿಮಾವನ್ನು ಅಗಾಧವಾಗಿ ಆರಾಧಿಸುವ ತಮಿಳುನಾಡಿನ ಜನತೆಗೆ ಮತ್ತಷ್ಟು ಬೆಂಬಲ ತಂದಿದೆ ಈ ಸೂಪರ್ ಸ್ಟಾರ್ ಹೇಳಿಕೆ.
ಚೆನ್ನೈ, ಜನವರಿ 20: ತಮಿಳುನಾಡಿನಲ್ಲಿ ಅಗ್ರ ಮಟ್ಟದ ಕಿಚ್ಚು ಹೊತ್ತಿಸಿರುವ ಜಲ್ಲಿಕಟ್ಟು ಹೋರಾಟಕ್ಕೆ ತಮಿಳು ಚಿತ್ರರಂಗದ ಸೂಪರ್ ಸ್ಟಾರ್ ರಜನೀಕಾಂತ್ ಕೈ ಜೋಡಿಸಿದ್ದಾರೆ.
ಇಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಜಲ್ಲಿಕಟ್ಟು ಕ್ರೀಡೆಗೆ ತಮ್ಮ ಅದಮ್ಯ ಬೆಂಬಲವಿದೆಯೆಂದು ಹೇಳಿರುವುದಲ್ಲದೆ, ಜನರ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವ ಭರವಸೆಯನ್ನೂ ನೀಡಿದ್ದಾರೆ.[ಜಲ್ಲಿಕಟ್ಟು ಜಂಗೀ ಕುಸ್ತಿಗೆ ಸಿಕ್ಕಿತು ಎ.ಆರ್. ರಹಮಾನ್ ಬೆಂಬಲ]

ಗುರುವಾರವಷ್ಟೇ, ವಿಶ್ವವಿಖ್ಯಾತ ಸಂಗೀತ ನಿರ್ದೇಶಕ ಎ.ಆರ್. ರಹಮಾನ್ ಅವರು, ಜಲ್ಲಿ ಕಟ್ಟು ಕಾನೂನುಬದ್ಧಕ್ಕೆ ಆಗ್ರಹಿಸಿ ಉಪವಾಸ ಆರಂಭಿಸುವುದಾಗಿ ಘೋಷಿಸಿದ್ದರು. ಅದರ ಬೆನ್ನಲ್ಲೇ, ಇದೀಗ ರಜನೀಕಾಂತ ಸಹ ಈ ಹೋರಾಟಕ್ಕೆ ಬೆಂಬಲ ಸೂಚಿಸಿರುವುದು, ಚಲನಚಿತ್ರಗಳನ್ನು ಅಗಾಧವಾಗಿ ಆರಾಧಿಸುವ ತಮಿಳಿಗರಲ್ಲಿ ಹೊಸ ಸಂಚಲನ ಮೂಡಿಸಿದೆ.[ಜಲ್ಲಿಕಟ್ಟು: ಸದ್ಯದಲ್ಲೇ ಸಿಹಿಸುದ್ದಿ ನಿರೀಕ್ಷಿಸಿ-ಪನ್ನೀರ್ ಸೆಲ್ವಂ]
ಅವರ ಈ ಮಾತುಗಳು, ಕಳೆದ ಮೂರ್ನಾಲ್ಕು ದಿನಗಳಿಂದಲೂ ರಸ್ತೆಗಳಿದು ಪ್ರತಿಭಟನೆ ನಡೆಸುತ್ತಿರುವ ತಮಿಳುನಾಡಿದ ಲಕ್ಷಾಂತರ ಹೋರಾಟಗಾರರಿಗೆ ಹೊಸ ಚೈತನ್ಯ ತುಂಬಿದಂತಾಗಿದೆ.
ಅತ್ತ, ನವದೆಹಲಿಯಲ್ಲಿ ತಮಿಳುನಾಡಿನ ಪ್ರಮುಖ ರಾಜಕಾರಣಿಯಾದ ತಂಬಿದೊರೈ ಅವರು ತಮ್ಮ ಬೆಂಬಲಿಗರೊಂದಿಗೆ ಕೇಂದ್ರ ಗೃಹ ಸಚಿವ ರಾಜ್ ನಾಥ್ ಸಿಂಗ್ ಅವರನ್ನು ಭೇಟಿ ಮಾಡಿ, ಜಲ್ಲಿ ಕಟ್ಟು ಕ್ರೀಡೆ ಪರವಾಗಿ ಕೇಂದ್ರ ಸರ್ಕಾರವು ಸುಗ್ರೀವಾಜ್ಞೆ ತರಬೇಕೆಂಬ ಮನವಿ ಸಲ್ಲಿಸಿದರು.
-
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ -
ಆರ್ಸಿಬಿ ಗೆಲ್ಲಿಸಿದ ಕೊಹ್ಲಿ ಕಂಡು ಗ್ಯಾಲರಿಯಲ್ಲೇ ಕುಣಿದು ಕುಪ್ಪಳಿಸಿದ ಅನನ್ಯಾ ಬಿರ್ಲಾ: ಭಾರೀ ವೈರಲ್ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
Bengaluru: 19 ಸಾವಿರಕ್ಕೆ 2BHK ಮನೆ ಸಿಕ್ಕಿದ್ದೇಗೆ? 4 ವರ್ಷದಲ್ಲಿ 3 ಮನೆ ಬದಲಾಯಿಸಿದ ದಂಪತಿ ಹೇಳಿದ ಬಾಡಿಗೆ ಸೀಕ್ರೆಟ್ Viral -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
NWKRTC: ದಾಂಡೇಲಿ-ಬೆಂಗಳೂರು ಮಧ್ಯೆ ಪಲ್ಲಕ್ಕಿ ವೈಭವ: ಬಸ್ಗಳ ಸಂಚಾರಕ್ಕೆ ಗ್ರೀನ್ ಸಿಗ್ನಲ್, ಡಿಟೇಲ್ಸ್ -
Rishab Shetty: ಪತ್ನಿ ಪ್ರಗತಿ ಶೆಟ್ಟಿ ಹೊರತುಪಡಿಸಿ ಎಲ್ಲರನ್ನೂ ಅನ್ಫಾಲೋ ಮಾಡಿದ ನಟ ರಿಷಬ್ ಶೆಟ್ಟಿ -
March 30 Horoscope: ಕೆಲಸ ಮತ್ತು ಹಣದ ಸ್ಥಿತಿಯಲ್ಲಿ ಹೊಸ ಬದಲಾವಣೆ -
New Railway Line: ಗದಗ-ಹೊಟಗಿ ರೈಲು ಡಬ್ಲಿಂಗ್ ಪೂರ್ಣ, ಮಹಾರಾಷ್ಟ್ರವರೆಗೂ ಸಂಚಾರ ಸುಧಾರಣೆ












Click it and Unblock the Notifications