ಜುಲೈ 11 ರ ತನಕ ತಮಿಳುನಾಡಿಗೆ ಕಾವೇರಿ ಹರಿಸಿ, ಕರ್ನಾಟಕಕ್ಕೆ ಸೂಚನೆ
ಕಾವೇರಿ ನೀರು ಹಂಚಿಕೆ ನ್ಯಾಯಾಧೀಕರಣದ ತೀರ್ಪಿನ ವಿರುದ್ಧ ಕರ್ನಾಟಕ ಮತ್ತು ತಮಿಳುನಾಡು ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿ, ಜುಲೈ 11ಕ್ಕೆ ವಿಚಾರಣೆ ಮುಂದೂಡಿದೆ.
ಕಾವೇರಿ ನೀರು ಹಂಚಿಕೆ ನ್ಯಾಯಾಧೀಕರಣದ ತೀರ್ಪಿನ ವಿರುದ್ಧ ಕರ್ನಾಟಕ ಮತ್ತು ತಮಿಳುನಾಡು ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮಂಗಳವಾರ(ಮಾರ್ಚ್ 21) ಸೂಚಿಸಿದೆ.
ಮುಂದಿನ ವಿಚಾರಣೆಯನ್ನು ಜುಲೈ 11ಕ್ಕೆ ತ್ರಿಸದಸ್ಯ ಪೀಠ ಮುಂದೂಡಿದೆ. ಮುಂದಿನ ವಿಚಾರಣೆ ತನಕ ಪ್ರತಿನಿತ್ಯ ತಮಿಳುನಾಡಿಗೆ 2,000 ಕ್ಯೂಸೆಕ್ಸ್ ನೀರು ಹರಿಸುವುದು ಕರ್ನಾಟಕಕ್ಕೆ ಅನಿವಾರ್ಯವಾಗಿದೆ.[ಟೈಮ್ ಲೈನ್ : ಸಂವಿಧಾನ ಬಿಕ್ಕಟ್ಟಿನ ಹಾದಿ ಹಿಡಿದ ಕಾವೇರಿ ವಿವಾದ]
1892ರಲ್ಲಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಆಗಿದ್ದ ಒಪ್ಪಂದ ಸಾಧುವೇ? ಅಂದು ಬಳಸಿದ ಮಾನದಂಡ ಯಾವುದು? ಇತ್ತೀಚಿನ ಅಂಕಿ ಅಂಶಗಳ ಬಳಸಿ ಸಮೀಕ್ಷೆ ನಡೆಸುತ್ತಿಲ್ಲ ಏಕೆ? ಎಂಬ ಪ್ರಶ್ನೆಗಳನ್ನು ಕರ್ನಾಟಕದ ಪರ ವಕೀಲ ಫಾಲಿ ನಾರಿಮನ್ ಕೇಳಿದರು.
ಫೆಬ್ರವರಿ 7 ರ ತನಕ ಪ್ರತಿನಿತ್ಯ 2 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿತ್ತು. ಇದರಿಂದ ಕರ್ನಾಟಕಕ್ಕೆ ನಿರಾಳತೆ ಸಿಕ್ಕಿದ್ದು, ಹೆಚ್ಚಿನ ಪ್ರಮಾಣದ ನೀರು ಹರಿಸುವ ಸಂಕಟದಿಂದ ಸದ್ಯಕ್ಕೆ ಬಚಾವಾಗಿತ್ತು. ಅಲ್ಲಿ ತನಕ ಮಧ್ಯಂತರ ಆದೇಶ ಜಾರಿಯಲ್ಲಿರಲಿದ್ದು,
ಪ್ರತಿನಿತ್ಯ
ತಮಿಳುನಾಡಿಗೆ
2,000
ಸಾವಿರ
ಕ್ಯೂಸೆಕ್ಸ್
ಕಾವೇರಿ
ನೀರು
ಹರಿಸುವಂತೆ
ಕರ್ನಾಟಕಕ್ಕೆ
ನ್ಯಾ.
ದೀಪಕ್
ಮಿಶ್ರಾ
ನೇತೃತ್ವದ
ತ್ರಿಸದಸ್ಯ
ಪೀಠ
ಸೂಚಿಸಲಾಗಿತ್ತು.
ಕಾವೇರಿ
ನೀರಿನಲ್ಲಿ
ಬಳಸಲು
ಲಭ್ಯವಿರುವ
740
ಟಿಎಂಸಿ
ನೀರಿನಲ್ಲಿ
ಕರ್ನಾಟಕ
270
ಟಿಎಂಸಿ,
ತಮಿಳುನಾಡು
419,
ಕೇರಳ
30
ಮತ್ತು
ಪಾಂಡಿಚೇರಿ
7
ಟಿಎಂಸಿ
ನೀರಿಗೆ
ಅರ್ಹ
ಎಂದು
ನ್ಯಾಯಾಧೀಕರಣ
ತೀರ್ಪಲ್ಲಿ
ಹೇಳಿತ್ತು.
007ರ ಫೆಬ್ರವರಿ 5ರಂದು ಕಾವೇರಿ ನೀರು ನ್ಯಾಯಾಧೀಕರಣ ನೀಡಿದ್ದ ತೀರ್ಪನ್ನು ಕರ್ನಾಟಕ ಮತ್ತು ತಮಿಳುನಾಡುಗಳೆರಡೂ ಪ್ರಶ್ನಿಸಿದ್ದವು. ಆದರೆ, ಈ ತೀರ್ಪು ಸುಪ್ರೀಂಕೋರ್ಟ್ ನೀಡಿದ ತೀರ್ಪಿಗೆ ಸಮಾನ ಎಂದು ಕೇಂದ್ರ ಸರಕಾರ ತಗಾದೆ ಎತ್ತಿತ್ತು.