ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜುಲೈ 11 ರ ತನಕ ತಮಿಳುನಾಡಿಗೆ ಕಾವೇರಿ ಹರಿಸಿ, ಕರ್ನಾಟಕಕ್ಕೆ ಸೂಚನೆ

ಕಾವೇರಿ ನೀರು ಹಂಚಿಕೆ ನ್ಯಾಯಾಧೀಕರಣದ ತೀರ್ಪಿನ ವಿರುದ್ಧ ಕರ್ನಾಟಕ ಮತ್ತು ತಮಿಳುನಾಡು ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿ, ಜುಲೈ 11ಕ್ಕೆ ವಿಚಾರಣೆ ಮುಂದೂಡಿದೆ.

By ವಿಕಾಸ್ ನಂಜಪ್ಪ
|
Google Oneindia Kannada News

ಕಾವೇರಿ ನೀರು ಹಂಚಿಕೆ ನ್ಯಾಯಾಧೀಕರಣದ ತೀರ್ಪಿನ ವಿರುದ್ಧ ಕರ್ನಾಟಕ ಮತ್ತು ತಮಿಳುನಾಡು ಸಲ್ಲಿಸಿರುವ ಮೇಲ್ಮನವಿ ಅರ್ಜಿ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಮಂಗಳವಾರ(ಮಾರ್ಚ್ 21) ಸೂಚಿಸಿದೆ.

ಮುಂದಿನ ವಿಚಾರಣೆಯನ್ನು ಜುಲೈ 11ಕ್ಕೆ ತ್ರಿಸದಸ್ಯ ಪೀಠ ಮುಂದೂಡಿದೆ. ಮುಂದಿನ ವಿಚಾರಣೆ ತನಕ ಪ್ರತಿನಿತ್ಯ ತಮಿಳುನಾಡಿಗೆ 2,000 ಕ್ಯೂಸೆಕ್ಸ್ ನೀರು ಹರಿಸುವುದು ಕರ್ನಾಟಕಕ್ಕೆ ಅನಿವಾರ್ಯವಾಗಿದೆ.[ಟೈಮ್ ಲೈನ್ : ಸಂವಿಧಾನ ಬಿಕ್ಕಟ್ಟಿನ ಹಾದಿ ಹಿಡಿದ ಕಾವೇರಿ ವಿವಾದ]

Release 2,000 cusecs of Cauvery water to TN, SC tells Karnataka

1892ರಲ್ಲಿ ಕರ್ನಾಟಕ ಹಾಗೂ ತಮಿಳುನಾಡು ನಡುವೆ ಆಗಿದ್ದ ಒಪ್ಪಂದ ಸಾಧುವೇ? ಅಂದು ಬಳಸಿದ ಮಾನದಂಡ ಯಾವುದು? ಇತ್ತೀಚಿನ ಅಂಕಿ ಅಂಶಗಳ ಬಳಸಿ ಸಮೀಕ್ಷೆ ನಡೆಸುತ್ತಿಲ್ಲ ಏಕೆ? ಎಂಬ ಪ್ರಶ್ನೆಗಳನ್ನು ಕರ್ನಾಟಕದ ಪರ ವಕೀಲ ಫಾಲಿ ನಾರಿಮನ್ ಕೇಳಿದರು.

ಫೆಬ್ರವರಿ 7 ರ ತನಕ ಪ್ರತಿನಿತ್ಯ 2 ಸಾವಿರ ಕ್ಯೂಸೆಕ್ಸ್ ನೀರು ಹರಿಸುವಂತೆ ಕರ್ನಾಟಕಕ್ಕೆ ಸೂಚಿಸಲಾಗಿತ್ತು. ಇದರಿಂದ ಕರ್ನಾಟಕಕ್ಕೆ ನಿರಾಳತೆ ಸಿಕ್ಕಿದ್ದು, ಹೆಚ್ಚಿನ ಪ್ರಮಾಣದ ನೀರು ಹರಿಸುವ ಸಂಕಟದಿಂದ ಸದ್ಯಕ್ಕೆ ಬಚಾವಾಗಿತ್ತು. ಅಲ್ಲಿ ತನಕ ಮಧ್ಯಂತರ ಆದೇಶ ಜಾರಿಯಲ್ಲಿರಲಿದ್ದು,

ಪ್ರತಿನಿತ್ಯ ತಮಿಳುನಾಡಿಗೆ 2,000 ಸಾವಿರ ಕ್ಯೂಸೆಕ್ಸ್ ಕಾವೇರಿ ನೀರು ಹರಿಸುವಂತೆ ಕರ್ನಾಟಕಕ್ಕೆ ನ್ಯಾ. ದೀಪಕ್ ಮಿಶ್ರಾ ನೇತೃತ್ವದ ತ್ರಿಸದಸ್ಯ ಪೀಠ ಸೂಚಿಸಲಾಗಿತ್ತು.
ಕಾವೇರಿ ನೀರಿನಲ್ಲಿ ಬಳಸಲು ಲಭ್ಯವಿರುವ 740 ಟಿಎಂಸಿ ನೀರಿನಲ್ಲಿ ಕರ್ನಾಟಕ 270 ಟಿಎಂಸಿ, ತಮಿಳುನಾಡು 419, ಕೇರಳ 30 ಮತ್ತು ಪಾಂಡಿಚೇರಿ 7 ಟಿಎಂಸಿ ನೀರಿಗೆ ಅರ್ಹ ಎಂದು ನ್ಯಾಯಾಧೀಕರಣ ತೀರ್ಪಲ್ಲಿ ಹೇಳಿತ್ತು.

007ರ ಫೆಬ್ರವರಿ 5ರಂದು ಕಾವೇರಿ ನೀರು ನ್ಯಾಯಾಧೀಕರಣ ನೀಡಿದ್ದ ತೀರ್ಪನ್ನು ಕರ್ನಾಟಕ ಮತ್ತು ತಮಿಳುನಾಡುಗಳೆರಡೂ ಪ್ರಶ್ನಿಸಿದ್ದವು. ಆದರೆ, ಈ ತೀರ್ಪು ಸುಪ್ರೀಂಕೋರ್ಟ್ ನೀಡಿದ ತೀರ್ಪಿಗೆ ಸಮಾನ ಎಂದು ಕೇಂದ್ರ ಸರಕಾರ ತಗಾದೆ ಎತ್ತಿತ್ತು.

English summary
The Supreme Court on Tuesday ordered Karnataka to continue releasing 2,000 cusecs of Cauvery water to Tamil Nadu on a daily basis. The court also posted the matter for final hearing on July 11. Karnataka would have to continue releasing water to TN until the SC hears the matter next, a Division Bench headed by Justice Dipak Mishra said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X