ಸಿಯಾಚಿನ್ ಹಿಮಪಾತದಲ್ಲಿ ಸಿಲುಕಿದ್ದ ಯೋಧರ ಸಾವು
ನವದೆಹಲಿ, ಫೆಬ್ರವರಿ 04 : ಭಾರತ ಮತ್ತು ಪಾಕಿಸ್ತಾನದ ಗಡಿಯಲ್ಲಿರುವ ಸಿಯಾಚಿನ್ ನೀರ್ಗಲ್ಲು ಪ್ರದೇಶದಲ್ಲಿ ಸಂಭವಿಸಿದ ಹಿಮಪಾತದಲ್ಲಿ ಸಿಲುಕಿದ್ದ 10 ಭಾರತೀಯ ಯೋಧರು ಅಸುನೀಗಿದ್ದಾರೆ. ಸಹಸ್ರಾರು ಜನರ ಪ್ರಾರ್ಥನೆಯ ನಡುವೆ ಯೋಧರ ಸಾವು ಬರಸಿಡಿಲಿನಂತೆ ಬಂದೆರಗಿದೆ.
ಭಾರತದ ಪ್ರಧಾನಿ ನರೇಂದ್ರ ಮೋದಿ ಅವರು "ಸಿಯಾಚಿನ್ ನಲ್ಲಿ ಯೋಧರು ಸಾವನ್ನಪ್ಪಿದ್ದು ನಿಜಕ್ಕೂ ದುರಂತ. ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ಸೈನಿಕರಿಗೆ ನನ್ನ ಸೆಲ್ಯೂಟ್. ಯೋಧರ ಕುಟುಂಬಕ್ಕೆ ಸಾಂತ್ವನ ನೀಡಲು ಬಯಸುತ್ತೇನೆ" ಎಂದು ಟ್ವೀಟಿಸಿ ವಿಷಾದ ವ್ಯಕ್ತಪಡಿಸಿದ್ದಾರೆ.
Demise of soldiers in Siachen is very tragic. I salute the brave soldiers who gave their lives to the nation. Condolences to their families.
— Narendra Modi (@narendramodi) February 4, 2016
ಅತ್ಯಾಧುನಿಕ ಸಲಕರಣೆಗಳನ್ನು ಹಿಡಿದುಕೊಂಡು ಯೋಧರ ಶೋಧಕ್ಕೆ ತಜ್ಞರ ತಂಡ ಲೇಹ್ಗೆ ಗುರುವಾರ ಧಾವಿಸಿತ್ತು. ಶ್ವಾನ ದಳದ ಸಹಾಯದಿಂದ ಯೋಧರ ಹುಡುಕಾಟ ನಡೆಸಲಾಯಿತಾದರೂ, ಮೈನಸ್ 60 ಡಿಗ್ರಿ ತಾಪಮಾನದಲ್ಲಿ ಅವರು ಬದುಕುಳಿಯುವುದು ಕಷ್ಟಕರ ಎಂದು ಸೇನಾಧಿಕಾರಿಗಳು ಹೇಳಿದ್ದರು.
"ಇದು ದುರಂತದ ಸಂಗತಿ. ವಿಷಮ ಪರಿಸ್ಥಿತಿಗಳನ್ನು, ಅಸಾಧ್ಯ ಸವಾಲುಗಳನ್ನು ಎದುರಿಸುತ್ತ ಕರ್ತವ್ಯದಲ್ಲಿರುವಾಗಲೇ ದೇಶವನ್ನು ರಕ್ಷಿಸುತ್ತ ಸಾವನ್ನಪ್ಪಿದ ಯೋಧರಿಗೆ ನಾವು ಸಲಾಂ ಮಾಡುತ್ತೇವೆ" ಎಂದು ಉತ್ತರ ಕಮಾಂಡ್ನ ಸೇನಾ ಕಮಾಂಡರ್ ಲೆ.ಜ. ಡಿ.ಎಸ್. ಹೂಡಾ ಅವರು ಸಂದೇಶ ರವಾನಿಸಿದ್ದಾರೆ. [ಹಿಮದಡಿ ಸಿಕ್ಕ ವೀರ ಯೋಧರ ಜೀವಕ್ಕಾಗಿ ಪ್ರಾರ್ಥಿಸಿ]

19 ಸಾವಿರ ಅಡಿಗಳ ಎತ್ತರದಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ, ಮದ್ರಾಸ್ ರೆಜಿಮೆಂಟ್ಗೆ ಸೇರಿದ 10 ಯೋಧರು ಬುಧವಾರ ಬೆಳಗಿನ ಜಾವ ಭಾರೀ ಹಿಮಪಾತದಲ್ಲಿ ಸಿಲುಕಿದ್ದರು. ಅವರು ಜೀವಂತವಾಗಿ ವಾಪಸ್ ಬರಲೆಂದು ಸಹಸ್ರಾರು ಭಾರತೀಯರು ಸಾಮಾಜಿಕ ತಾಣದಲ್ಲಿ ನಿರಂತರವಾಗಿ ಪ್ರಾರ್ಥಿಸುತ್ತಿದ್ದರು.
-
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು -
1ನೇ ತರಗತಿ ದಾಖಲಾತಿ: 6 ವರ್ಷ ತುಂಬಿರಬೇಕು ಎಂಬ ನಿಯಮವನ್ನು ಕೊಂಚ ಸಡಿಲಿಕೆ ಮಾಡಿದ ಸರ್ಕಾರ -
ಮಾ.30ರಂದು ನಡೆಯಬೇಕಿದ್ದ SSLC ಹಿಂದಿ ಪರೀಕ್ಷೆ ದಿಢೀರ್ ಮುಂದೂಡಿಕೆ: ಕಾರಣವೇನು? -
ಬೆಂಗಳೂರು-ಅರಸೀಕೆರೆ ನಡುವೆ ನೂತನ ಮೆಮು ರೈಲು ಸೇವೆ: ಈಡೇರಿತು ಪ್ರಯಾಣಿಕರ ಬಹುದಿನದ ಬೇಡಿಕೆ -
Viral Videlo: 2 ಗಂಟೆ ಸ್ಟ್ಯಾಚ್ಯೂ ರೀತಿ ನಿಂತ ಯುವಕ ವಿಡಿಯೋ ವೈರಲ್, ಭಾರತಕ್ಕೂ ಬಂತಾ ಅಮೆರಿಕದ ಜಾಂಬಿ ಡ್ರಗ್ಸ್ -
ಉದ್ಯೋಗ ಸಂದರ್ಶನ ಮಾಡಲು ಹೋದ CEOಗೆ ಬೆವರಿಳಿಸಿದ ಅಭ್ಯರ್ಥಿ, Viral ಆಯ್ತು ವಿಚಿತ್ರ ಕಥೆ -
Summer Camp: ನಟನ ಮೈಸೂರು ಸಂಸ್ಥೆಯಿಂದ ಮಕ್ಕಳಿಗೆ ಬೇಸಿಗೆ ಶಿಬಿರ 'ರಜಾಮಜಾ' ಆಯೋಜನೆ












Click it and Unblock the Notifications