ನ.24: ದೇಶ, ವಿದೇಶ ಸುದ್ದಿಗಳ ಚುಟುಕು ಸುದ್ದಿ
ಬೆಂಗಳೂರು, ನ.24: ದೇಶ, ವಿದೇಶಗಳಲ್ಲಿನ ವಿದ್ಯಮಾನಗಳ ಈ ದಿನದ ರೌಂಡ್ ಅಪ್ ನಿಮಗಾಗಿ ಇಲ್ಲಿದೆ. ಇಲ್ಲಿ ಬರೀ ಹೆಡ್ ಲೈನ್ ಗಳು, ಟೂ ಲೈನ್ ಅಥವಾ ಒಂದು ಪ್ಯಾರಾ ಸುದ್ದಿಗಳು, ಚುಟುಕು ಮಾಹಿತಿ ಮಾತ್ರ ನಿಮಗೆ ಸಿಗುತ್ತದೆ. ದೇಶದ ಒಟ್ಟಾರೆ ಸುದ್ದಿಗಳ ಅಸಮಗ್ರ ಸಂಗ್ರಹ ನಿಮ್ಮ ಪರದೆ ಮೇಲೆ ಚೆಲ್ಲುವ ಪ್ರಯತ್ನ ಇದಾಗಿದೆ.
17.50: ನಿಮಗೆ ತಾಕತ್ತಿದ್ರೆ ನನ್ನನ್ನು ಬಂಧಿಸಿ ನಾನು ಇಲ್ಲೇ ಇರುತ್ತೇನೆ ನಿಮ್ಮ ಜೈಲುಗಳು ಹೇಗಿವೆ ನೋಡೋಣ ಎಂದು ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಕೇಂದ್ರ ಸರ್ಕಾರಕ್ಕೆ ಸವಾಲು ಹಾಕಿದ್ದಾರೆ. ಶಾರದಾ ಚಿಟ್ ಫಂಡ್ ಹಗರಣದಲ್ಲಿ ಮಮತಾ ಅವರ ಆಪ್ತರ ಹೆಸರುಗಳು ಕೇಳಿ ಬಂದಿರುವುದನ್ನು ಇಲ್ಲಿ ಸ್ಮರಿಸಬಹುದು.
16.40:
ಹಿಟ್
ಅಂಡ್
ರನ್
ಕೇಸಿನ
ವಿಚಾರಣೆಗೆ
ಖುದ್ದು
ಹಾಜರಾತಿಯಿಂದ
ವಿನಾಯಿತಿ
ನೀಡುವಂತೆ
ಆರೋಪಿತ
ಬಾಲಿವುಡ್
ನಟ
ಸಲ್ಮಾನ್
ಖಾನ್
ಕೋರ್ಟಿಗೆ
ಮನವಿ
ಸಲ್ಲಿಸಿದ್ದಾರೆ.
11.15: ಪಶ್ಚಿಮ ಬಂಗಾಳದ ಬುರ್ದ್ವಾನ್ ಸ್ಫೋಟದ ಪ್ರಮುಖ ರುವಾರಿಯ ಪತ್ನಿ ಹಾಗೂ ಮೂವರು ಇತರೆ ಆರೋಪಿಗಳನ್ನು ಬಾಂಗ್ಲಾದೇಶ ಪೊಲೀಸರು ಬಂಧಿಸಿದ್ದಾರೆ. ಬಂಗಾಳದ ಪೊಲೀಸರು ಇದೇ ಪ್ರಕರಣಕ್ಕೆ ಸಂಬಂಧಿಸಿದಂತೆ ಜಮಾತೆ ಉಲ್ ಮುಜಾಹಿದ್ದೀನ್ ಸಂಘಟನೆಯ ನಾಲ್ವರನ್ನು ವಶಕ್ಕೆ ಪಡೆದುಕೊಂಡಿದ್ದಾರೆ.
11.00: ಕೇಂದ್ರ ಮಾಜಿ ಸಚಿವ ಮುರಳಿ ದಿಯೋರಾ ಅವರ ನಿಧನಕ್ಕೆ ಪ್ರಧಾನಿ ಮೋದಿ ಅವರು ಸಂತಾಪ ವ್ಯಕ್ತಪಡಿಸಿದ್ದಾರೆ. ಸಂಸತ್ತಿನ ಉಭಯ ಸದನಗಳು ನಾಳೆಗೆ ಮುಂದೂಡುವ ಸಾಧ್ಯತೆಗಳಿವೆ.
10.00: ಲೋಕಸಭೆ ಚಳಿಗಾಲದ ಅಧಿವೇಶನ ನಾಳೆಯಿಂದ ಆರಂಭವಾಗಿದೆ. ನರೇಂದ್ರ ಮೋದಿ ಸರ್ಕಾರ ಕೇಂದ್ರದಲ್ಲಿ ಅಧಿಕಾರಕ್ಕೆ ಬಂದ ನಂತರದ ಆರು ತಿಂಗಳ ಅವಧಿಯಲ್ಲಿ ಇದು ಎರಡನೇ ಮಹತ್ವದ ಅಧಿವೇಶನವಾಗಿದೆ.