ಮತದಾನ ದಿನ : ದೇಶದ 8 ರಾಜ್ಯಗಳ, 10 ಕ್ಷೇತಗಳಲ್ಲಿ ವೋಟಿಂಗ್
ದೇಶದ 8 ರಾಜ್ಯಗಳ, 10 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಗಿ ಭದ್ರತೆ ನಡುವೆ ಉಪ ಚುನಾವಣೆ ಮತದಾನ ನಡೆಯುತ್ತಿದೆ. ಶ್ರೀನಗರದಲ್ಲಿ ಒಂದು ಲೋಕಸಭೆ ಕ್ಷೇತ್ರಕ್ಕೂ ಭಾನುವಾರದಂದೆ ಮತದಾನ ನಡೆಯುತ್ತಿದೆ
ಬೆಂಗಳೂರು, ಏಪ್ರಿಲ್ 09: ದೇಶದ 8 ರಾಜ್ಯಗಳ, 10 ವಿಧಾನಸಭಾ ಕ್ಷೇತ್ರಗಳಲ್ಲಿ ಬಿಗಿ ಭದ್ರತೆ ನಡುವೆ ಉಪ ಚುನಾವಣೆ ಮತದಾನ ನಡೆಯುತ್ತಿದೆ. ಶ್ರೀನಗರದಲ್ಲಿ ಒಂದು ಲೋಕಸಭೆ ಕ್ಷೇತ್ರಕ್ಕೂ ಭಾನುವಾರದಂದೆ ಮತದಾನ ನಡೆಯುತ್ತಿದೆ.
ಜಮ್ಮು-ಕಾಶ್ಮೀರದ ರಾಜಧಾನಿ ಶ್ರೀನಗರ ಲೋಕಸಭಾ ಕ್ಷೇತ್ರಕ್ಕೆ ಮತದಾನ ಆರಂಭವಾಗಿದೆ. ಕಣಿವೆ ರಾಜ್ಯದಲ್ಲಿ ಮತದಾನ ನಡೆಯುತ್ತಿರುವ ಕ್ಷೇತ್ರದಲ್ಲಿ ಇಂಟರ್ನೆಟ್ ಸೌಲಭ್ಯ ಬಂದ್ ಮಾಡಲಾಗಿದೆ. [LIVE ನಂಜನಗೂಡು: ಕಳಲೆ ಕೇಶವ ಮೂರ್ತಿಯಿಂದ ನೀತಿ ಸಂಹಿತೆ ಉಲ್ಲಂಘನೆ]
ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಖ್ ಅಬ್ದುಲ್ಲಾ ಅವರು ಸ್ಪರ್ಧಾಕಣದಲ್ಲಿದ್ದಾರೆ. ಹಿಜ್ಬುಲ್ ಮುಜಾಹೀದ್ದೀನ್ ನಾಯಕ ಬುರ್ಹಾನ್ ವನಿ ಹತ್ಯೆಯನ್ನು ಖಂಡಿಸಿ ಪೀಪಲ್ಸ್ ಡೆಮಾಕ್ರಾಟಿಕ್ ಪಾರ್ಟಿ ನಾಯಕ ತಾರೀಕ್ ಹಮೀದ್ ಅವರು ರಾಜೀನಾಮೆ ನೀಡಿದ ಬಳಿಕ ಈ ಕ್ಷೇತ್ರಕ್ಕೆ ಮರು ಚುನಾವಣೆ ನಡೆಯುತ್ತಿದೆ.[LIVE ಗುಂಡ್ಲುಪೇಟೆ: ಎರಡು ಮತಗಟ್ಟೆಗಳ ಮತಯಂತ್ರಗಳಲ್ಲಿ ತಾಂತ್ರಿಕ ದೋಷ]

ಎಲ್ಲೆಲ್ಲಿ ಮತದಾನ: ಕರ್ನಾಟಕದ ನಂಜನಗೂಡು ಹಾಗೂ ಗುಂಡ್ಲುಪೇಟೆಯ ವಿಧಾನಸಭಾ ಕ್ಷೇತ್ರ ಹಾಗೂ ದೆಹಲಿಯ ರಾಜೌರಿ ಗಾರ್ಡನ್, ಜಾರ್ಖಂಡ್ನ ಲಿತಿಪರ್, ರಾಜಸ್ಥಾನ ಧೋಲ್ಪುರ್, ಪಶ್ವಿಮ ಬಂಗಾಳದ ಕಂತಿ ದಕ್ಷಿಣ್, ಮಧ್ಯಪ್ರದೇಶದ ಅತೆರ್ ಮತ್ತು ಬಂಧವ್ ಘರ್, ಹಿಮಾಚಲ ಪ್ರದೇಶದ ಬೋರಂಜ್ ಮತ್ತು ಅಸ್ಸಾಂನ ಧೇಮೈ ವಿಧಾನಸಭಾ ಕ್ಷೇತ್ರಗಳಲ್ಲಿ ಮತದಾನ ನಡೆಯುತ್ತಿದೆ.
ಶ್ರೀನಗರ ಲೋಕಸಭೆ ಕ್ಷೇತ್ರದ ಮತ ಎಣಿಕೆ ಏಪ್ರಿಲ್ 15ರಂದು ನಡೆಯಲಿದ್ದು, 10 ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಕಾರ್ಯ ಏಪ್ರಿಲ್ 13ರಂದು ನಡೆಯಲಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications