ಸಂಪುಟ ಸಭೆ ಇಲ್ಲದಿದ್ರೂ ಯೋಗಿ ಆದೇಶಗಳ ರವಾನೆ ಸರಾಗ !
ಹೊಸದಾಗಿ ಮುಖ್ಯಮಂತ್ರಿಯಾದವರು ಸಂಪುಟ ರಚನೆಯಾದ ನಂತರ, ಸಂಪುಟ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದು ವಾಡಿಕೆ. ಆದರೆ, ಮಂತ್ರಿ ಮಂಡಲ ಅಸ್ತಿತ್ವಕ್ಕೆ ಬಂದು ಐದಾರು ದಿನಗಳೇ ಕಳೆದಿದ್ದರೂ, ಸಂಪುಟ ಸಭೆ ನಡೆಸಿಲ್ಲ.
ಲಕ್ನೋ, ಮಾರ್ಚ್ 27: ವಾರದ ಹಿಂದಷ್ಟೇ ಉತ್ತರ ಪ್ರದೇಶದ ನೂತನ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಿರುವ ಯೋಗಿ ಆದಿತ್ಯನಾಥ್ ಅವರು, ಕಳೆದ ಏಳು ದಿನಗಳ ತಮ್ಮ ಆಡಳಿತದಲ್ಲಿ ಕೈಗೊಂಡಿರುವ ಒಟ್ಟು ನಿರ್ಧಾರಗಳ ಸಂಖ್ಯೆ 50 ಎಂದು ಮೂಲಗಳು ತಿಳಿಸಿವೆ.
ಆದರೆ, ಅದಕ್ಕಿಂತಲೂ ಅಚ್ಚರಿಯ ವಿಚಾರ ಏನೆಂದರೆ, ಈ 50 ನಿರ್ಧಾರಗಳನ್ನು ಯಾವುದೇ ಸಂಪುಟ ಸಭೆ ನಡಸದೇ ಕೈಗೊಂಡಿರುವುದು ! ಹೌದು. ಮುಖ್ಯಮಂತ್ರಿಯಾದ ನಂತರ, ಯೋಗಿ ಆದಿತ್ಯನಾಥ್ ಅವರು ಈವರೆಗೂ ಒಂದೇ ಒಂದು ಸಂಪುಟ ಸಭೆ ನಡೆಸಿಲ್ಲ.[ಯೋಗಿ ವಿರುದ್ಧ ಉತ್ತರ ಪ್ರದೇಶದಲ್ಲಿ ಮಾಂಸ ಮಾರಾಟಗಾರರ ಮುಷ್ಕರ]

ಹೊಸದಾಗಿ ಮುಖ್ಯಮಂತ್ರಿಯಾದವರು ಸಂಪುಟ ರಚನೆಯಾದ ನಂತರ, ಸಂಪುಟ ಸಭೆ ನಡೆಸಿ ತೀರ್ಮಾನ ಕೈಗೊಳ್ಳುವುದು ವಾಡಿಕೆ. ಆದರೆ, ಆದಿತ್ಯನಾಥ್ ಅವರ ಮಂತ್ರಿ ಮಂಡಲ ಅಸ್ತಿತ್ವಕ್ಕೆ ಬಂದು ಐದಾರು ದಿನಗಳೇ ಕಳೆದಿದ್ದರೂ, ಸಂಪುಟ ಸಭೆ ನಡೆಸಿಲ್ಲ. ಆದರೆ, ಮುಖ್ಯಮಂತ್ರಿ ಕಚೇರಿಯಿಂದ ಪುಂಖಾನುಪುಂಖವಾಗಿ ಆದೇಶಗಳು ಸಂಬಂಧಪಟ್ಟ ಇಲಾಖೆಗಳಿಗೆ ರವಾನೆಯಾಗುತ್ತಿವೆ ಎಂದು ಹೇಳಲಾಗುತ್ತಿದೆ.
ಅಂದರೆ, ಇದು ಮೇಲ್ನೋಟಕ್ಕೆ ಯೋಗಿ ಅವರು ಉತ್ತರ ಪ್ರದೇಶದ ಸರ್ಕಾರದ ಮೇಲೆ ಸಾಧಿಸಿರುವ ಹಿಡಿತ ಹಾಗೂ ಏಕಾಂಗಿ ನಿರ್ಧಾರಗಳನ್ನು ಬಿಂಬಿಸುತ್ತದೆ ಎಂದೂ ಅವಲೋಕಿಸಲಾಗಿದೆ. ಇದರ ಜತೆಯಲ್ಲೇ, ಯೋಗಿಯವರ ಈ ವೇಗದ ನಡೆ ಮುಂದೆ ಅವರಿಗೆ ತಿರುಗುಬಾಣವಾಗುತ್ತದೆಯೇ ಎಂಬುದನ್ನು ಕಾದು ನೋಡಬೇಕಿದೆ.
-
ಬೆಂಗಳೂರು-ವಿಜಯಪುರ ಎಕ್ಸ್ಪ್ರೆಸ್ ರೈಲು ಸೇವೆ: ಸಂಚಾರ ಸಮಯ 10ಗಂಟೆ ಇಳಿಕೆಗೆ ಎಂಬಿ ಪಾಟೀಲ ಆಗ್ರಹ -
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral












Click it and Unblock the Notifications