ವಿಶ್ವದ ಭಾರೀ ಗಾತ್ರದ ಮನುಷ್ಯನಿಗೆ ಯಶಸ್ವಿ ಶಸ್ತ್ರಚಿಕಿತ್ಸೆ
ಮೆಕ್ಸಿಕೋ, ಮೇ 10 : ತೂಕ ಇಳಿಸಿಕೊಳ್ಳಲು ಅಣಿಯಾಗಿದ್ದ ವಿಶ್ವದ ಭಾರೀ ತೂಕದ ವ್ಯಕ್ತಿ ಮೆಕ್ಸಿಕೋದ ಜಾನ್ ಪೆಡ್ರೋ ಫ್ರಾಂಕೊ (600 ಕೆಜಿ) ಅವರಿಗೆ ಶಸ್ತ್ರಚಿಕಿತ್ಸೆ ಯಶಸ್ವಿಯಾಗಿದೆ.
ಗಜಗಾತ್ರದ ಜಾನ್ ಪೆಡ್ರೋ ಫ್ರಾಂಕೊ ತನ್ನ ತೂಕವನ್ನು ಅರ್ಧದಷ್ಟು ಇಳಿಸಿಕೊಳ್ಳಲು ಬಂದಿದ್ದು ಅವರಿಗೆ ಗ್ಯಾಸ್ಟ್ರಿಕ್ ಬೈಪಾಸ್ ಸರ್ಜರಿ ಮಾಡಲಾಗಿದೆ ಎಂದು ಸರ್ಜನ್ ಜೋಸ್ ಕ್ಯಾಸ್ಟಾನೆಡಾ ತಿಳಿಸಿದ್ದಾರೆ.

ಸರ್ಜರಿ ಯಶಸ್ವಿಯಾಗಿದ್ದು, ಮತ್ತೊಂದು ಶಸ್ತ್ರಕ್ರಿಯೆ ನಂತರ ಉತ್ತಮ ಫಲಿತಾಂಶ ನಿರೀಕ್ಷಿಸಬಹುದಾಗಿದೆ ಎಂದು ಹೇಳಿದ್ದಾರೆ. ಈ ಸರ್ಜರಿಯು ಅತ್ಯಂತ ಸೂಕ್ಷ್ಮವಾಗಿದ್ದು, ಆತನ ದೇಹಸ್ಥಿತಿ ಬಗ್ಗೆ ನಿಗಾ ವಹಿಸಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ.
ಶಸ್ತ್ರಚಿಕಿತ್ಸೆಗೆ ಒಳಗಾಗುವ ಮುನ್ನ 595 ಕೆಜಿ ತೂಕವಿದ್ದ ಈತ ಡಯಾಬಿಟಿಸ್ ಮತ್ತು ರಕ್ತದ ಏರೋತ್ತಡದಿಂದ ಬಳಲುತ್ತಿದ್ದ. ಈ ಸಮಸ್ಯೆಗಳನ್ನು ನಿಯಂತ್ರಣಕ್ಕೆ ತಂದು ಚಿಕಿತ್ಸೆ ನೀಡಲಾಗಿದೆ.
ವಿಪರೀತ ತೂಕದಿಂದಾಗಿ ಹಲವಾರು ವರ್ಷಗಳಿಂದ ಹಾಸಿಗೆ ಹಿಡಿದಿದ್ದ ಫ್ರಾಂಕೊಗೆ ತನ್ನ ಅಗಾಧ ದೇಹವೇ ಶಾಪವಾಗಿತ್ತು. ನವೆಂಬರ್ ನಲ್ಲಿ ಇನ್ನೊಂದು ಸುತ್ತಿನ ಶಸ್ತ್ರಚಿಕಿತ್ಸೆ ನಡೆಸಲಾಗುವುದು.
ಆತನ ಹೊಟ್ಟೆಯಲ್ಲಿನ ಅಂಗಾಂಗಗಳಲ್ಲಿ ಬದಲಾವಣೆಗಳನ್ನು ಮಾಡಬೇಕಾಗುತ್ತದೆ. ಆ ಬಳಿಕ ಫ್ರಾಂಕೋ ತೂಕ ಅರ್ಧದಷ್ಟು ಇಳಿಯಲಿದೆ ಎಂದು ವೈದ್ಯರು ಹೇಳಿದ್ದಾರೆ.
ವಿಶ್ವದ ಭಾರೀ ತೂಕದ ಮಹಿಳೆ ಎಂದು ಹೇಳಲಾಗಿದ್ದ ಈಜಿಪ್ಟ್ ನ ಎಮಾನ್ ಎಂಬ ಮಹಿಳೆಯ ತೂಕವನ್ನು ಮುಂಬೈನ ಸೈಫಿ ಆಸ್ಪತ್ರೆ ವೈದ್ಯರು ಅರ್ಧಕ್ಕಿಂತ ಹೆಚ್ಚು ಭಾಗದಷ್ಟು ಇಳಿಸಿದ್ದರು. ಈ ಮಹಿಳೆಗೆ ಈಗ ಅಬುಧಾಬಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications