ಕಲಬುರಗಿಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಕಲಬುರಗಿ, ಜುಲೈ 16 : ಒಂದೇ ಕುಟುಂಬದ ನಾಲ್ವರು ನೇಣಿಗೆ ಶರಣಾದ ದಾರುಣ ಘಟನೆ ಶನಿವಾರ ಕಲಬುರಗಿ ನಗರದ ಸರಸ್ವತಿಪುರ ಬಡಾವಣೆಯ ಮನೆಯೊಂದರಲ್ಲಿ ನಡೆದಿದೆ
ಶ್ರೀಕಾಂತ್, ಪತ್ನಿ ತನುಶ್ರೀ ಹಾಗು ಇಬ್ಬರು ಮಕ್ಕಳಾದ ಸಾಕ್ಷಿ ಮತ್ತು ಚೇತನ ಮೃತ ದುರ್ದೈವಿಗಳು. ಸಾವಿಗೂ ಮುನ್ನ ಇವರು ಡೆತ್ ನೋಟ್ ಬರೆದಿಟ್ಟಿದ್ದು, ನಮ್ಮ ಸಾವಿಗೆ ನಾವೇ ಕಾರಣ ಬೇರೆ ಯಾರು ಕಾರಣರಲ್ಲ ನಮ್ಮ ದೇಹಗಳನ್ನು ಮೆಡಿಕಲ್ ಕಾಲೇಜಿಗೆ ದಾನ ಮಾಡಿ'ಅಂತ ಬರೆದಿಟ್ಟು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ
ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ
ಘಟನಾ ಸ್ಥಳಕ್ಕೆ ಕಲಬುರಗಿ ಎಸ್ಪಿ ಎನ್ ಶಶಿಕುಮಾರ್ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಬ್ರಹ್ಮಪೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಇತ್ತೀಚೆಗಷ್ಟೇ ಉಡುಪಿ ತಾಲೂಕಿನ ಪಡುಬೆಳ್ಳೆಯ ಒಂದೇ ಕುಟುಂಬದ ನಾಲ್ವರು ಆತ್ಮಹತ್ಯೆ ಮಾಡಿಕೊಂಡಿರುವುದುನ್ನು ಇಲ್ಲಿ ಸ್ಮರಿಸಬಹುದು.
Comments
English summary
4 members of the same family got suicide at Saraswathipura in Kalaburagi. The deceased are identified as Shrikanth, wife Tanushree, sons Sakshi and Chetan. A case has been registered at Brahmapur Police station.
Story first published: Sunday, July 16, 2017, 10:55 [IST]